ಆ್ಯಪ್ನಗರ

ಪ್ರಾಪರ್ಟಿ ಕಾರ್ಡ್‌ ಕಡ್ಡಾಯಕ್ಕೆ ಸರಕಾರ ವಿನಾಯಿತಿ

ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿಆಸ್ತಿ ನೋಂದಣಿಗಿದ್ದ ಪ್ರಾಪರ್ಟಿ ಕಾರ್ಡ್‌ ಕಡ್ಡಾಯಕ್ಕೆ ವಿನಾಯಿತಿ ನೀಡಿ ರಾಜ್ಯ ಸರಕಾರ ಸೆ.30ರಂದು ಆದೇಶ ಹೊರಡಿಸಿದೆ.

Vijaya Karnataka 2 Oct 2019, 5:00 am
ಶಿವಮೊಗ್ಗ: ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿಆಸ್ತಿ ನೋಂದಣಿಗಿದ್ದ ಪ್ರಾಪರ್ಟಿ ಕಾರ್ಡ್‌ ಕಡ್ಡಾಯಕ್ಕೆ ವಿನಾಯಿತಿ ನೀಡಿ ರಾಜ್ಯ ಸರಕಾರ ಸೆ.30ರಂದು ಆದೇಶ ಹೊರಡಿಸಿದೆ.
Vijaya Karnataka Web government exemption for property card compulsory
ಪ್ರಾಪರ್ಟಿ ಕಾರ್ಡ್‌ ಕಡ್ಡಾಯಕ್ಕೆ ಸರಕಾರ ವಿನಾಯಿತಿ


ಶಿವಮೊಗ್ಗ ನಗರದಲ್ಲಿಅರ್ಬನ್‌ ಪ್ರಾಪರ್ಟಿ ಓನರ್‌ ಶಿಪ್‌ ರೆಕಾರ್ಡ್‌ ಯೋಜನೆಯನ್ನು ಪೈಲೆಟ್‌ ಪ್ರಾಜೆಕ್ಟ್ ಆಗಿ ಅನುಷ್ಠಾನಗೊಳಿಸಲಾಗಿತ್ತು. ಆದರೆ, ತಾಂತ್ರಿಕ ಸಮಸ್ಯೆಗಳಿಂದಾಗಿ ಆಸ್ತಿ ಮಾಲೀಕರಿಗೆ ಸಕಾಲದಲ್ಲಿಪ್ರಾಪರ್ಟಿ ಕಾರ್ಡ್‌ ದೊರೆಯುವುದು ವಿಳಂಬವಾಗುತ್ತಿದೆ. ಇದರ ಬಗ್ಗೆ ಸಾರ್ವಜನಿಕರಿಂದ ಆಕ್ಷೇಪಣೆ ವ್ಯಕ್ತಪಡಿಸುತ್ತಲೇ ಬಂದಿದ್ದರು.

ಇದರ ಬಗ್ಗೆ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರ ಗಮನ ಸೆಳೆದಾಗ ಕಡ್ಡಾಯಕ್ಕೆ ವಿನಾಯಿತಿ ನೀಡಲಾಗುವುದು ಎಂದು ಭರವಸೆ ನೀಡಿದ್ದರು. ರಾಜ್ಯದಲ್ಲಿಬೇರಾವುದೇ ನಗರ ಪ್ರದೇಶಗಳಲ್ಲಿಈ ಯೋಜನೆ ಚಾಲ್ತಿಯಲ್ಲಿಇಲ್ಲದೇ ಇರುವುದರಿಂದ ಮತ್ತು ತಾಂತ್ರಿಕ ದೋಷ ಕಾರಣದಿಂದಾಗಿ ಪ್ರಾಪರ್ಟಿ ಕಾರ್ಡ್‌ಗೆ ವಿನಾಯಿತಿ ನೀಡಲಾಗಿದೆ. ತಾಂತ್ರಿಕ ದೋಷ ಸರಿಪಡಿಸಿದ ಬಳಿಕ ಹಾಗೂ ಎಲ್ಲಆಸ್ತಿ ಮಾಲೀಕರಿಗೆ ಪ್ರಾಪರ್ಟಿ ಕಾರ್ಡ್‌ ವಿತರಣೆ ಮಾಡಿದ ನಂತರದಲ್ಲಿಈ ಯೋಜನೆಗೆ ಆದ್ಯತೆ ನೀಡುವಂತೆ ಕಂದಾಯ ಇಲಾಖೆಗೆ ಸಿಎಂ ಸೂಚನೆ ನೀಡಿದ್ದರು.

ಅದರ ಪ್ರಕಾರ ಕಂದಾಯ ಇಲಾಖೆ ಜಂಟಿ ಕಾರ್ಯದರ್ಶಿ ಆದೇಶ ಹೊರಡಿಸಿದ್ದು ಕಡ್ಡಾಯಕ್ಕೆ ಮುಂದಿನ ಆದೇಶದವರೆಗೆ ವಿನಾಯಿತಿ ನೀಡಲಾಗಿದೆ. ಸಾರ್ವಜನಿಕರು ತಮ್ಮ ಆಸ್ತಿಯ ಪ್ರಾಪರ್ಟಿ ಕಾರ್ಡ್‌ ಮಾಡಿಸುವ ಪ್ರಕ್ರಿಯೆ ಯಥಾರೀತಿ ಮುಂದುವರಿಯಲಿದೆ ಎಂದು ಆದೇಶದಲ್ಲಿತಿಳಿಸಲಾಗಿದೆ.

-----------------------
ಶಿವಮೊಗ್ಗದ ಆಸ್ತಿ ಮಾಲೀಕರು ನೆಮ್ಮದಿಯಿಂದ ತಮ್ಮ ಆಸ್ತಿಯನ್ನು ನೋಂದಣಿ ಮಾಡಲು ಅನುಕೂಲ ಮಾಡಿಕೊಡುವಲ್ಲಿನೆರವಾದ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಜನತೆ ಪರವಾಗಿ ಧನ್ಯವಾದಗಳನ್ನು ಸಲ್ಲಿಸುತ್ತೇನೆ.

*ಬಿ.ವೈ. ರಾಘವೇಂದ್ರ, ಸಂಸದರು, ಶಿವಮೊಗ್ಗ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ