ಆ್ಯಪ್ನಗರ

ಸಮ್ಮಿಶ್ರ ಸರಕಾರ ಸುಭದ್ರ: ಕಾಗೋಡು ತಿಮ್ಮಪ್ಪ

ರಾಜ್ಯದಲ್ಲಿ ಸಮ್ಮಿಶ್ರ ಸರಕಾರ ಸುಭದ್ರವಾಗಿದೆ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಹೇಳಿದರು.

Vijaya Karnataka 18 May 2019, 5:00 am
ಹೊಸನಗರ: ರಾಜ್ಯದಲ್ಲಿ ಸಮ್ಮಿಶ್ರ ಸರಕಾರ ಸುಭದ್ರವಾಗಿದೆ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಹೇಳಿದರು.
Vijaya Karnataka Web SMR-16HOSP7


ತಾಲೂಕಿನ ಬಸವಾಪುರದ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಪುನರ್‌ಪ್ರತಿಷ್ಠಾಪನಾ ಕಾರ‍್ಯಕ್ರಮಕ್ಕೆ ಗುರುವಾರ ಆಗಮಿಸಿದ ವೇಳೆ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಮೈತ್ರಿ ಧರ್ಮ ಸ್ಥಳೀಯ ಚುನಾವಣೆಗಳಲ್ಲೂ ಮುಂದುವರಿಯಲಿದೆ. ಸಾಗರ ಮತ್ತು ಹೊಸನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಮೈತ್ರಿ ಅಭ್ಯರ್ಥಿಗಳು ಗೆಲುವು ಸಾಧಿಸುವ ಮೂಲಕ ಅಧಿಕಾರಕ್ಕೇರಲಿದ್ದಾರೆ ಎಂದರು. ಮೈತ್ರಿ ಧರ್ಮ ರಾಜ್ಯಮಟ್ಟದಲಲೂ ಹಿಂದಿನಂತೆಯೇ ಮುಂದುವರಿಯಲಿದ್ದು, ಸರಕಾರ ಅವಧಿ ಪೂರ್ಣಗೊಳಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕೇಂದ್ರದ ಮರಳು ನೀತಿ ಮಾರಕ: ಪ್ರಸ್ತುತ ಜಾರಿಯಲ್ಲಿರುವ ಮರಳು ನೀತಿ ಅವೈಜ್ಞಾನಿಕವಾಗಿದೆ. ಜನಸಾಮಾನ್ಯರಿಗೆ ಮರಳು ಸರಿಯಾಗಿ ದೊರೆಯುತ್ತಿಲ್ಲ. ಕೇಂದ್ರದ ಬಿಜೆಪಿ ಸರಕಾರ ಜಾರಿಗೆ ತಂದಿರುವ ಮರಳು ನೀತಿ ಜನಸಾಮಾನ್ಯರಿಗೆ ಸಂಕಷ್ಟ ತಂದೊಡ್ಡಿದೆ ಎಂದು ಆರೋಪಿಸಿದರು. ತಾಲೂಕು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಬಿ.ಜಿ.ನಾಗರಾಜ್‌, ತಾಲೂಕು ಪಂಚಾಯಿತಿ ಸದಸ್ಯ ಏರಿಗೆ ಉಮೇಶ್‌, ಸದಾಶಿವ ಶೆಟ್ಟಿ, ಉಬೆದುಲ್ಲಾ ಮತ್ತಿತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ