ಆ್ಯಪ್ನಗರ

29, 30ಕ್ಕೆ ಸರಕಾರಿ ನೌಕರರ ಕ್ರೀಡಾಕೂಟ

ನಗರದ ನೆಹರು ಕ್ರೀಡಾಂಗಣದಲ್ಲಿ ಡಿ.29 ಮತ್ತು 30ರಂದು ಜಿಲ್ಲಾಮಟ್ಟದ ಸರಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆ ನಡೆಯಲಿದೆ ಎಂದು ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್‌.ಷಡಾಕ್ಷ ರಿ ಹೇಳಿದರು.

Vijaya Karnataka 27 Dec 2018, 5:00 am
ಶಿವಮೊಗ್ಗ: ನಗರದ ನೆಹರು ಕ್ರೀಡಾಂಗಣದಲ್ಲಿ ಡಿ.29 ಮತ್ತು 30ರಂದು ಜಿಲ್ಲಾಮಟ್ಟದ ಸರಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆ ನಡೆಯಲಿದೆ ಎಂದು ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್‌.ಷಡಾಕ್ಷ ರಿ ಹೇಳಿದರು.
Vijaya Karnataka Web shadakshari c.s. new


ಸುದ್ದಿಗೋಷ್ಠಿಯಲ್ಲಿ ಬುಧವಾರ ಅವರು ಮಾತನಾಡಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಜ್ಯ ಸರಕಾರಿ ನೌಕರರ ಸಂಘಗಳ ಸಹಯೋಗದಲ್ಲಿ ಈ ಕ್ರೀಡಾಕೂಟ ಆಯೋಜಿಸಲಾಗಿದ್ದು, ಸಾಂಸ್ಕೃತಿಕ ಸ್ಪರ್ಧೆ, ಸಂಗೀತ ರಸ ಸಂಜೆ, ನೂತನ ಕ್ಯಾಲೆಂಡರ್‌ ಮತ್ತು ಡೈರಿ ಬಿಡುಗಡೆ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದರು.

ಕ್ರೀಡಾಕೂಟವು ನೆಹರೂ ಕ್ರೀಡಾಂಗಣ ಹಾಗೂ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಸಾಂಸ್ಕೃತಿಕ ಸ್ಪರ್ಧೆಗಳು ನೆಹರೂ ಕ್ರೀಡಾಂಗಣ ಮತ್ತು ಕುವೆಂಪು ರಂಗಮಂದಿರದಲ್ಲಿ ನಡೆಯಲಿವೆ. ಡಿ.29ರಂದು ಬೆಳಗ್ಗೆ 10.30ಕ್ಕೆ ಜಿಲ್ಲಾಧಿಕಾರಿ ಕೆ.ಎ.ದಯಾನಂದ್‌ ಕ್ರೀಡಾಕೂಟ ಉದ್ಘಾಟಿಸುವರು. ಅಂದು ಸಂಜೆ 5.30ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಪ್ರಭಾವತಿ ಎ.ಹಿರೇಮಠ್‌ ಚಾಲನೆ ನೀಡುವರು. ಇದೇ ದಿನ ಸಂಜೆ 6ಕ್ಕೆ ಪ್ರಸಿದ್ಧ ರಂಗಭೂಮಿ ಕಲಾವಿದೆ ಹಾಗೂ ಖ್ಯಾತ ಗಾಯಕಿ ಬಿ.ಜಯಶ್ರೀ ಅವರಿಂದ ಸಂಗೀತ ರಸಸಂಜೆ ಏರ್ಪಡಿಸಲಾಗಿದೆ ಎಂದರು. ಡಿ.30ರಂದು ಸಂಜೆ 4ಕ್ಕೆ ಸಮಾರೋಪ ನಡೆಯಲಿದೆ. 2 ದಿನದ ಮಧ್ಯಾಹ್ನದ ಭೋಜನ ವ್ಯವಸ್ಥೆ ಮಾಡಲಾಗಿದೆ ಎಂದರು. ಗೋಷ್ಠಿಯಲ್ಲಿ ಎಸ್‌.ವೈ.ರಮೇಶ್‌, ಡಿ.ಬಿ.ಕೃಷ್ಣಮೂರ್ತಿ, ಐ.ಪಿ.ಶಾಂತರಾಜ್‌, ಮಾ.ಸ.ನಂಜುಂಡಸ್ವಾಮಿ, ಚಿನ್ನಪ್ಪ, ಮಂಜುನಾಥ್‌, ರಂಗನಾಥ್‌, ಸುರೇಶ್‌, ಸಿದ್ದಬಸಪ್ಪ ಮತ್ತಿತರರು ಇದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ