ಸಾಗರ : ವಿಧಾನಸಭಾ ಚುನಾವಣೆ ಸಂದರ್ಭ ಬಿಎಲ್ಓಗಳಾಗಿ ಕರ್ತವ್ಯ ನಿರ್ವಹಿಸಿರುವ ಶಿಕ್ಷ ಕರಿಗೆ ಗಳಿಕೆ ರಜೆ ಮಂಜೂರು ಮಾಡುವಂತೆ ಒತ್ತಾಯಿಸಿ ಗುರುವಾರ ಪ್ರಾಥಮಿಕ ಶಾಲಾ ಶಿಕ್ಷ ಕರ ಸಂಘದಿಂದ ಉಪವಿಭಾಗಾಧಿಕಾರಿ ಕಚೇರಿ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ವಿವಿಧ ಚುನಾವಣೆಗಳಲ್ಲಿ 2007ರಿಂದ ಈವರೆಗೆ ಬಿಎಲ್ಓಗಳಾಗಿ ರಜೆ ಅವಧಿಯಲ್ಲಿ ಕಾರ್ಯನಿರ್ವಹಿಸಿರುವ ಶಿಕ್ಷ ಕರಿಗೆ ಗಳಿಕೆ ರಜೆ ಮಂಜೂರು ಮಾಡಿಲ್ಲ. ಚುನಾವಣೆ ಕಾರ್ಯದಲ್ಲಿ ಮತಗಟ್ಟೆ ಅಧಿಕಾರಿಯಾಗಿ ಕೆಲಸ ನಿರ್ವಹಿಸಿರುವ ಶಿಕ್ಷ ಕರು ಹಿಂದಿನಿಂದಲೂ ತಾವು ಚುನಾವಣೆ ಸಂದರ್ಭ ಕರ್ತವ್ಯ ನಿರ್ವಹಿಸಿದ ಅವಧಿಯನ್ನು ಗಳಿಕೆ ರಜೆಯಾಗಿ ಮಂಜೂರು ಮಾಡುವಂತೆ ಒತ್ತಾಯಿಸಿಕೊಂಡು ಬಂದಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಸಾಗರ ತಾಲೂಕಲ್ಲಿ ಸುಮಾರು 150ಕ್ಕೂ ಹೆಚ್ಚು ಶಿಕ್ಷ ಕರು ಶಾಲೆಗಳಿಗೆ ಬೇಸಿಗೆ ರಜೆ ಇದ್ದರೂ ಮತಗಟ್ಟೆ ಅಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಕೆಲವೊಮ್ಮೆ ಶಾಲೆ ಇದ್ದಾಗಲೂ ಶಿಕ್ಷ ಕರು ಚುನಾವಣೆ ಕರ್ತವ್ಯದಲ್ಲಿ ಪಾಲ್ಗೊಂಡು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ವಿಶೇಷ ದಿನಗಳಲ್ಲಿ ವಿದ್ಯಾರ್ಥಿಗಳ ಶೈಕ್ಷ ಣಿಕ ಹಿತದೃಷ್ಟಿಯಿಂದ ಕೆಲಸ ಮಾಡಿದ್ದಾರೆ ಎಂದು ಸಂಘವು ಮನವಿಯಲ್ಲಿ ತಿಳಿಸಿದೆ.
ಈಗಾಗಲೇ ಚಿಕ್ಕಮಗಳೂರು ಮತ್ತು ಬಿಜಾಪುರ ಜಿಲ್ಲೆಯ ಜಿಲ್ಲಾಧಿಕಾರಿಗಳು ಬೇಸಿಗೆ ರಜೆ ಸಂದರ್ಭ ನಡೆದ ವಿಧಾನಸಭಾ ಚುನಾವಣೆಯಲ್ಲಿ ಮತಗಟ್ಟೆಯಲ್ಲಿ ಕರ್ತವ್ಯ ನಿರ್ವಹಿಸಿದ ಶಿಕ್ಷ ಕರಿಗೆ ಗಳಿಕೆ ರಜೆ ಮಂಜೂರು ಮಾಡಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲೂ ಜಿಲ್ಲಾಧಿಕಾರಿಗಳು ಗಳಿಕೆ ರಜೆ ಮಂಜೂರು ಮಾಡಬೇಕೆಂದು ಸಂಘವು ಮನವಿಯಲ್ಲಿ ಒತ್ತಾಯಿಸಿದೆ.
ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಡಿ.ಗಣಪತಪ್ಪ, ತಾಲೂಕು ಅಧ್ಯಕ್ಷ ಎಚ್.ಎಸ್. ತಿಮ್ಮಪ್ಪ ಪ್ರಮುಖರಾದ ಎಂ.ಪಿ.ಸತ್ಯನಾರಾಯಣ, ಚಂದ್ರಶೇಖರ್, ಮಂಜಪ್ಪ, ಸಂಗಪ್ಪನವರ್ ಇದ್ದರು.
ವಿವಿಧ ಚುನಾವಣೆಗಳಲ್ಲಿ 2007ರಿಂದ ಈವರೆಗೆ ಬಿಎಲ್ಓಗಳಾಗಿ ರಜೆ ಅವಧಿಯಲ್ಲಿ ಕಾರ್ಯನಿರ್ವಹಿಸಿರುವ ಶಿಕ್ಷ ಕರಿಗೆ ಗಳಿಕೆ ರಜೆ ಮಂಜೂರು ಮಾಡಿಲ್ಲ. ಚುನಾವಣೆ ಕಾರ್ಯದಲ್ಲಿ ಮತಗಟ್ಟೆ ಅಧಿಕಾರಿಯಾಗಿ ಕೆಲಸ ನಿರ್ವಹಿಸಿರುವ ಶಿಕ್ಷ ಕರು ಹಿಂದಿನಿಂದಲೂ ತಾವು ಚುನಾವಣೆ ಸಂದರ್ಭ ಕರ್ತವ್ಯ ನಿರ್ವಹಿಸಿದ ಅವಧಿಯನ್ನು ಗಳಿಕೆ ರಜೆಯಾಗಿ ಮಂಜೂರು ಮಾಡುವಂತೆ ಒತ್ತಾಯಿಸಿಕೊಂಡು ಬಂದಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಸಾಗರ ತಾಲೂಕಲ್ಲಿ ಸುಮಾರು 150ಕ್ಕೂ ಹೆಚ್ಚು ಶಿಕ್ಷ ಕರು ಶಾಲೆಗಳಿಗೆ ಬೇಸಿಗೆ ರಜೆ ಇದ್ದರೂ ಮತಗಟ್ಟೆ ಅಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಕೆಲವೊಮ್ಮೆ ಶಾಲೆ ಇದ್ದಾಗಲೂ ಶಿಕ್ಷ ಕರು ಚುನಾವಣೆ ಕರ್ತವ್ಯದಲ್ಲಿ ಪಾಲ್ಗೊಂಡು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ವಿಶೇಷ ದಿನಗಳಲ್ಲಿ ವಿದ್ಯಾರ್ಥಿಗಳ ಶೈಕ್ಷ ಣಿಕ ಹಿತದೃಷ್ಟಿಯಿಂದ ಕೆಲಸ ಮಾಡಿದ್ದಾರೆ ಎಂದು ಸಂಘವು ಮನವಿಯಲ್ಲಿ ತಿಳಿಸಿದೆ.
ಈಗಾಗಲೇ ಚಿಕ್ಕಮಗಳೂರು ಮತ್ತು ಬಿಜಾಪುರ ಜಿಲ್ಲೆಯ ಜಿಲ್ಲಾಧಿಕಾರಿಗಳು ಬೇಸಿಗೆ ರಜೆ ಸಂದರ್ಭ ನಡೆದ ವಿಧಾನಸಭಾ ಚುನಾವಣೆಯಲ್ಲಿ ಮತಗಟ್ಟೆಯಲ್ಲಿ ಕರ್ತವ್ಯ ನಿರ್ವಹಿಸಿದ ಶಿಕ್ಷ ಕರಿಗೆ ಗಳಿಕೆ ರಜೆ ಮಂಜೂರು ಮಾಡಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲೂ ಜಿಲ್ಲಾಧಿಕಾರಿಗಳು ಗಳಿಕೆ ರಜೆ ಮಂಜೂರು ಮಾಡಬೇಕೆಂದು ಸಂಘವು ಮನವಿಯಲ್ಲಿ ಒತ್ತಾಯಿಸಿದೆ.
ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಡಿ.ಗಣಪತಪ್ಪ, ತಾಲೂಕು ಅಧ್ಯಕ್ಷ ಎಚ್.ಎಸ್. ತಿಮ್ಮಪ್ಪ ಪ್ರಮುಖರಾದ ಎಂ.ಪಿ.ಸತ್ಯನಾರಾಯಣ, ಚಂದ್ರಶೇಖರ್, ಮಂಜಪ್ಪ, ಸಂಗಪ್ಪನವರ್ ಇದ್ದರು.