ಆ್ಯಪ್ನಗರ

10ಕ್ಕೆ ಬೃಹತ್‌ ಉದ್ಯೋಗ ಮೇಳ

ಮಾರಿಕಾಂಬಾ ಮೈಕ್ರೋ ಫೈನಾನ್ಸ್‌ ಸಂಸ್ಥೆ ವತಿಯಿಂದ ಜೂ.10ರಂದು ಸಹ್ಯಾದ್ರಿ ಕಾಲೇಜು ಬಳಿಯ ನಂದನ ಶಾಲೆಯಲ್ಲಿ ಬೃಹತ್‌ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ಸಂಸ್ಥೆ ಪ್ರಧಾನ ಕಾರ್ಯದರ್ಶಿ ಕೆ.ಇ.ಕಾಂತೇಶ್‌ ಹೇಳಿದರು.

Vijaya Karnataka 5 Jun 2019, 5:00 am
ಶಿವಮೊಗ್ಗ: ಮಾರಿಕಾಂಬಾ ಮೈಕ್ರೋ ಫೈನಾನ್ಸ್‌ ಸಂಸ್ಥೆ ವತಿಯಿಂದ ಜೂ.10ರಂದು ಸಹ್ಯಾದ್ರಿ ಕಾಲೇಜು ಬಳಿಯ ನಂದನ ಶಾಲೆಯಲ್ಲಿ ಬೃಹತ್‌ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ಸಂಸ್ಥೆ ಪ್ರಧಾನ ಕಾರ್ಯದರ್ಶಿ ಕೆ.ಇ.ಕಾಂತೇಶ್‌ ಹೇಳಿದರು.
Vijaya Karnataka Web great job fair for 10th
10ಕ್ಕೆ ಬೃಹತ್‌ ಉದ್ಯೋಗ ಮೇಳ


ಸುದ್ದಿಗೋಷ್ಠಿಯಲ್ಲಿ ಸೋಮವಾರ ಅವರು ಮಾತನಾಡಿ, ಸಂಸ್ಥೆ ಅಧ್ಯಕ್ಷ ಕೆ.ಎಸ್‌.ಈಶ್ವರಪ್ಪ ಅವರ 71ನೇ ಹುಟ್ಟುಹಬ್ಬ ಅಂಗವಾಗಿ ಈ ಉದ್ಯೋಗ ಮೇಳವನ್ನು ಆಯೋಜಿಸಿದ್ದು, ಅಂದು ಬೆಳಗ್ಗೆ 8ಕ್ಕೆ ಉಡುಪಿ ಪೇಜಾವರ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಉದ್ಘಾಟಿಸುವರು ಎಂದರು.

ಬೆಂಗಳೂರು, ಮಂಗಳೂರು, ಹುಬ್ಬಳ್ಳಿ, ದಾವಣಗೆರೆ, ಚಿತ್ರದುರ್ಗ ಸೇರಿದಂತೆ ವಿವಿಧ ಕಡೆಗಳಿಂದ ಸುಮಾರು 50ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಇದರಲ್ಲಿ ಭಾಗವಹಿಸಲಿವೆ. 8ನೇ ತರಗತಿಯಿಂದ ಹಿಡಿದು, ಪದವಿ, ಉನ್ನತ ಪದವಿ, ಡಿಪ್ಲೊಮಾ ಮತ್ತು ಎಂಜಿನಿಯರಿಂಗ್‌ ವಿದ್ಯಾರ್ಥಿಗಳು ಕೂಡ ಇದರಲ್ಲಿ ಭಾಗವಹಿಸಬಹುದು ಎಂದರು.

ಮಾರಿಕಾಂಬಾ ಸಂಸ್ಥೆಯು ಉಚಿತ ಸಾಮೂಹಿಕ ವಿವಾಹ, ಆರೋಗ್ಯ ಶಿಬಿರ, ರಕ್ತದಾನ ಶಿಬಿರ ಮುಂತಾದ ಸಾಮಾಜಿಕ ಕಳಕಳಿಯ ಕಾರ್ಯಕ್ರಮದ ಜತೆಗೆ ಮಹಿಳೆಯರ ಸ್ವಾವಲಂಬನೆಗಾಗಿ ಅನೇಕ ಕಾರ್ಯಕ್ರಮಗಳನ್ನು ರೂಪಿಸಿದ್ದು, ಸ್ತ್ರೀ ಶಕ್ತಿ ಸಂಘಗಳ ಮೂಲಕ ಸುಮಾರು 12 ಸಾವಿರ ಹೆಣ್ಣು ಮಕ್ಕಳಿಗೆ 32ಕೋಟಿ ರೂ. ಸಾಲ ನೀಡಲಾಗಿದೆ ಎಂದರು.

ಗೋಷ್ಠಿಯಲ್ಲಿ ಸಂಸ್ಥೆ ಕೆ.ಎಸ್‌. ಈಶ್ವರಪ್ಪ, ಪ್ರಮುಖರಾದ ಜ್ಞಾನೇಶ್ವರ್‌, ಕೆ. ಶಂಕರ್‌, ವಿಶ್ವಾಸ್‌, ಸುನೀತಾ ಅಣ್ಣಪ್ಪ, ಸುರೇಖಾ ಮುರಳೀಧರ್‌ ಮತ್ತಿತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ