ಆ್ಯಪ್ನಗರ

ಐಎಂಎ ಪ್ರಕರಣ ಸಿಬಿಐಗೆ ವಹಿಸಿ

ಐಎಂಎ ಪ್ರಕರಣವನ್ನು ಸಿಬಿಐಗೆ ವಹಿಸಬೇಕು. ಸಂಸ್ಥಾಪಕ ಮನ್ಸೂರ್‌ ಖಾನ್‌ ಅವರನ್ನು ದೇಶಕ್ಕೆ ಬರಲು ಅನುಕೂಲ ಮಾಡಿಕೊಡಬೇಕು ಎಂದು ಒತ್ತಾಯಿಸಿ ಪೀಸ್‌ ಆರ್ಗನೇಜೇಷನ್‌ ವತಿಯಿಂದ ಸೋಮವಾರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.

Vijaya Karnataka 25 Jun 2019, 5:00 am
ಶಿವಮೊಗ್ಗ : ಐಎಂಎ ಪ್ರಕರಣವನ್ನು ಸಿಬಿಐಗೆ ವಹಿಸಬೇಕು. ಸಂಸ್ಥಾಪಕ ಮನ್ಸೂರ್‌ ಖಾನ್‌ ಅವರನ್ನು ದೇಶಕ್ಕೆ ಬರಲು ಅನುಕೂಲ ಮಾಡಿಕೊಡಬೇಕು ಎಂದು ಒತ್ತಾಯಿಸಿ ಪೀಸ್‌ ಆರ್ಗನೇಜೇಷನ್‌ ವತಿಯಿಂದ ಸೋಮವಾರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.
Vijaya Karnataka Web SMR-24GANESH6


ಮನ್ಸೂರ್‌ ಖಾನ್‌ ಸಾವಿರಾರು ಜನರಿಗೆ ಮೋಸ ಮಾಡಿದ್ದಾನೆ. ಮುಸ್ಲಿಮರು ಸೇರಿದಂತೆ ಹಲವರು ಈ ಸಂಸ್ಥೆಯಲ್ಲಿ ಹಣ ಹೂಡಿ ಬದುಕನ್ನೆ ಕಳೆದುಕೊಂಡಿದ್ದಾರೆ. ಸುಮಾರು 30 ಸಾವಿರಕ್ಕೂ ಹೆಚ್ಚು ದೂರುಗಳು ದಾಖಲಾಗಿವೆ. ಶಿವಮೊಗ್ಗದಲ್ಲೂ ಸಹ 181 ದೂರುಗಳು ದಾಖಲಾಗಿದೆ. ಹೂಡಿಕೆದಾರರನ್ನು ನಂಬಿಸಿ ಹಣ ಲಪಟಾಯಿಸಿದ ಈತ ಈಗ ತಲೆಮರೆಸಿಕೊಂಡಿದ್ದು, ಭಾರತಕ್ಕೆ ಬರುವ ಅಭಿಲಾಶೆ ಹೊಂದಿದ್ದಾನೆ. ಅವರನ್ನು ಭಾರತಕ್ಕೆ ಬರಮಾಡಿಕೊಳ್ಳಬೇಕು ಎಂದು ಒತ್ತಾಯಿಸಿದರು.

ಸಾವಿರಾರು ಬಡವರ ಹಣವನ್ನು ದೋಚಿದ ಐಎಂಎ ಪ್ರಕರಣವನ್ನು ಸಿಬಿಐಗೆ ವಹಿಸಬೇಕು. ಆಸ್ತಿಯನ್ನು ಮುಟ್ಟುಗೋಲು ಮಾಡಿಕೊಂಡು ಹಣ ಕಳೆದುಕೊಂಡವರಿಗೆ ಹಣವನ್ನು ಹಂಚಬೇಕು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಸಲೀಂ, ಸಮೀವುಲ್ಲಾ, ಸಫೀವುಲ್ಲಾ, ನವೀದ್‌, ತನ್ವಿರ್‌ ಹಲವರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ