ಆ್ಯಪ್ನಗರ

ಆರೋಗ್ಯ ಜಾಗೃತಿ ಜಾಥಾ ಇಂದು

ಆಯುಷ್ಮಾನ ಭಾರತ ಮತ್ತು ಆರೋಗ್ಯ ಕರ್ನಾಟಕ ಯೋಜನೆ ಜಾರಿಗೊಂಡು ಒಂದು ವರ್ಷ ಪೂರೈಸುತ್ತಿದೆ. ಈ ಹಿನ್ನೆಲೆಯಲ್ಲಿಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಸೆ.15ರಿಂದ 30ರವರೆಗೆ 'ಆಯುಷ್ಮಾನ ಭಾರತ ಪಾಕ್ಷಿಕ' ಆಚರಿಸುತ್ತಿದೆ. ಇದರ ಭಾಗವಾಗಿ 17ರಂದು ಬೆಳಗ್ಗೆ 9.30ಕ್ಕೆ ಜಾಗೃತಿ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಡಿಎಚ್‌ಒ ಡಾ.ರಾಜೇಶ್‌ ಸುರಗೀಹಳ್ಳಿ ಹೇಳಿದರು.

Vijaya Karnataka 17 Sep 2019, 5:00 am
ಶಿವಮೊಗ್ಗ: ಆಯುಷ್ಮಾನ ಭಾರತ ಮತ್ತು ಆರೋಗ್ಯ ಕರ್ನಾಟಕ ಯೋಜನೆ ಜಾರಿಗೊಂಡು ಒಂದು ವರ್ಷ ಪೂರೈಸುತ್ತಿದೆ. ಈ ಹಿನ್ನೆಲೆಯಲ್ಲಿಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಸೆ.15ರಿಂದ 30ರವರೆಗೆ 'ಆಯುಷ್ಮಾನ ಭಾರತ ಪಾಕ್ಷಿಕ' ಆಚರಿಸುತ್ತಿದೆ. ಇದರ ಭಾಗವಾಗಿ 17ರಂದು ಬೆಳಗ್ಗೆ 9.30ಕ್ಕೆ ಜಾಗೃತಿ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಡಿಎಚ್‌ಒ ಡಾ.ರಾಜೇಶ್‌ ಸುರಗೀಹಳ್ಳಿ ಹೇಳಿದರು.
Vijaya Karnataka Web health care programme today
ಆರೋಗ್ಯ ಜಾಗೃತಿ ಜಾಥಾ ಇಂದು


ನಗರದ ಡಿಎಚ್‌ಒ ಕಚೇರಿಯಲ್ಲಿಸೋಮವಾರ ನಡೆದ ಸಭೆಯಲ್ಲಿಮಾತನಾಡಿದ ಅವರು, ಬೆಳಗ್ಗೆ 9.30ಕ್ಕೆ ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ಜಾಥಾ ಆರಂಭವಾಗಲಿದೆ. 500ಕ್ಕೂ ಅಧಿಕ ಜನರು ಪಾಲ್ಗೊಳ್ಳಲಿದ್ದು, ಯೋಜನೆ ಬಗ್ಗೆ ಜನರಲ್ಲಿಜಾಗೃತಿ ಮೂಡಿಸುವುದರಿಂದ ಇದುವರೆಗೆ ಆದ ಲಾಭಗಳ ಕುರಿತು ಮಾಹಿತಿ ನೀಡುವ ಕೆಲಸ ಮಾಡಲಾಗುವುದು ಎಂದು ತಿಳಿಸಿದರು.

ಜಿಲ್ಲಾಮೆಗ್ಗಾನ್‌ ಆಸ್ಪತ್ರೆಯವರೆಗೆ ಜಾಥಾ ನಡೆಯಲಿದ್ದು, ಜಿಲ್ಲಾಉಸ್ತುವಾರಿ ಸಚಿವ ಕೆ.ಎಸ್‌.ಈಶ್ವರಪ್ಪ, ಸಂಸದ ಬಿ.ವೈ.ರಾಘವೇಂದ್ರ, ಜಿಲ್ಲಾಪಂಚಾಯಿತಿ ಅಧ್ಯಕ್ಷೆ ಜ್ಯೋತಿ ಎಸ್‌.ಕುಮಾರ್‌, ಮಹಾನಗರ ಪಾಲಿಕೆ ಆಯುಕ್ತೆ ಚಾರುಲತಾ ಸೋಮಲ್‌, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್‌ ಸೇರಿದಂತೆ ಜಿಲ್ಲೆಯ ಶಾಸಕರು ಹಾಗೂ ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು ಭಾಗವಹಿಸಲಿದ್ದಾರೆ.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ