ಆ್ಯಪ್ನಗರ

ಗಮನ ಸೆಳೆದ ವಸ್ತು ಪ್ರದರ್ಶನ

ಭದ್ರಾವತಿಯ ನ್ಯೂಟೌನ್‌ನಲ್ಲಿರುವ ಸರಕಾರಿ ಬಾಲಕಿಯರ ಪ್ರೌಢ ಶಾಲೆಯಲ್ಲಿಶುಕ್ರವಾರ ಹಮ್ಮಿಕೊಂಡಿದ್ದ 'ತಾಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ' ವೀಕ್ಷಕರ ಗಮನ ಸೆಳೆಯಿತು...

Vijaya Karnataka 8 Sep 2019, 5:00 am
ಶಿವಮೊಗ್ಗ: ಭದ್ರಾವತಿಯ ನ್ಯೂಟೌನ್‌ನಲ್ಲಿರುವ ಸರಕಾರಿ ಬಾಲಕಿಯರ ಪ್ರೌಢ ಶಾಲೆಯಲ್ಲಿಶುಕ್ರವಾರ ಹಮ್ಮಿಕೊಂಡಿದ್ದ 'ತಾಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ' ವೀಕ್ಷಕರ ಗಮನ ಸೆಳೆಯಿತು.
Vijaya Karnataka Web 6SMG3-1


ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಿದ್ದ ವಸ್ತು ಪ್ರದರ್ಶನದಲ್ಲಿವಿದ್ಯಾರ್ಥಿಗಳು ತ್ಯಾಜ್ಯದಿಂದ ವಿದ್ಯುತ್‌ ತಯಾರಿಕೆ, ರಸ್ತೆಯ ಉಬ್ಬುಗಳಿಂದಾಗುವ ಅಪಘಾತ ತಡೆಯುವ ಬಗೆ ಸೇರಿದಂತೆ ವಿವಿಧ ವಿಷಯಗಳನ್ನಾಧರಿಸಿ ಮಾದರಿಗಳನ್ನು ತಯಾರಿಸಿದ್ದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಸಕ ಬಿ.ಕೆ.ಸಂಗಮೇಶ್ವರ್‌, ಯುವ ವಿಜ್ಞಾನಿಗಳಾಗಿ ಕಲಿತ ಶಾಲೆಗೆ ಕೀರ್ತಿ ತರುವಂತೆ ಶುಭ ಹಾರೈಸಿದರು.

ಪ್ರೌಢ ಶಾಲಾ ಸರಕಾರಿ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಸಿದ್ದಬಸಪ್ಪ, ಪ್ರೌಢ ಶಾಲೆ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಹರಿಬಾಬು, ಸರಕಾರಿ ಪಿಯು ಬಾಲಕಿಯರ ಕಾಲೇಜು ಪ್ರಾಚಾರ್ಯೆ ವಿಜಯಲಕ್ಷ್ಮಿ, ಸರಕಾರಿ ಬಾಲಕಿಯರ ಪ್ರೌಢ ಶಾಲೆ ಉಪ ಪ್ರಾಂಶುಪಾಲರಾದ ಟಿ.ಎಸ್‌.ಸುಮನಾ, ಕ್ಷೇತ್ರ ಶಿಕ್ಷಣ ಅಧಿಧಿಕಾರಿ ಎಂ.ಸಿ.ಆನಂದ್‌ ಉಪಸ್ಥಿತರಿದ್ದರು.

ಜ್ಯೋತಿ ಸ್ವಾಗತಿಸಿದರು. ಕೋಟೆಶ್ವರಿ ನಿರೂಪಿಸಿ, ನಾಗರತ್ನಮ್ಮ ವಂದಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ