ಆ್ಯಪ್ನಗರ

ಶಿವಮೊಗ್ಗ ಉಸ್ತುವಾರಿ ನೇಮಕ ಹೈ ಕಮಾಂಡ್ ನಿರ್ಧಾರ, ನನ್ನದಲ್ಲ: ನಾರಾಯಣ ಗೌಡ

ಕಾಂಗ್ರೆಸ್‌ಗೆ ಬಿಜೆಪಿ ನಾಯಕರು ವಲಸೆ ಹೋಗುತ್ತಿದ್ದಾರೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್‌ ಹೇಳಿಕೆಗೆ ಗರಂ ಆದ ಸಚಿವ ನಾರಾಯಣ ಗೌಡ, ಅವರಿಗೆ ಬೇರೆ ಕೆಲಸ ಇಲ್ಲ ಎಂದು ಹರಿಹಾಯ್ದರು.

Lipi 26 Jan 2022, 8:58 pm
ಶಿವಮೊಗ್ಗ: ಕೆಎಸ್‌ ಈಶ್ವರಪ್ಪನವರನ್ನ ತವರು ಜಿಲ್ಲೆಯಲ್ಲಿ ಕಟ್ಟಿಹಾಕಲು ಶಿವಮೊಗ್ಗ ಜಿಲ್ಲಾ ಉಸ್ತುವಾರಿಯನ್ನಾಗಿ ಸಚಿವ ನಾರಾಯಣಗೌಡರನ್ನು ನೇಮಿಸಲಾಗಿದೆ ಎಂಬ ಬಗ್ಗೆ ಬಿಸಿ ಬಿಸಿ ಚರ್ಚೆಗಳಾಗುತ್ತಿದೆ.
Vijaya Karnataka Web ನಾರಾಯಣ ಗೌಡ
ನಾರಾಯಣ ಗೌಡ

ಶಿವಮೊಗ್ಗ ಉಸ್ತುವಾರಿ ಸಚಿವರಾಗಿ ನೇಮಕಗೊಂಡ ನಾರಾಯಣ ಗೌಡ ಅವರಿಗೆ ಪತ್ರಕರ್ತರು ಪ್ರಶ್ನೆಗಳ ಸುರಿಮಳೆಗರೆದರು.

ಈ ಹಿಂದೆ ಡಿಸಿ ತಮ್ಮಣ್ಣ ಕೂಡ ಸಮ್ಮಿಶ್ರ ಸರಕಾರದಲ್ಲಿ ಜಿಲ್ಲೆಯ ಉಸ್ತುವಾರಿ ವಹಿಸಿಕೊಂಡಿದ್ದರು. ತಿಂಗಳಿಗೊಮ್ಮೆಯೂ ಬರುತ್ತಿರಲಿಲ್ಲ. ನೀವು ತಿಂಗಳಿಗೆ ಎಷ್ಟು ಸಲ ಬರ್ತೀರಾ ಎಂಬ ಮಾತಿಗೆ ತಡಬಡಾಯಿಸದ ಸಚಿವರು ಶಿವಮೊಗ್ಗದಲ್ಲಿ ಮಾಡಲು ಏನೂ ಉಳಿದಿಲ್ಲ. ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಅವರ ಪುತ್ರ ಬಿವೈ ರಾಘವೇಂದ್ರ ಮಾಡಿ ಮುಗಿಸಿದ್ದಾರೆ ತಮ್ಮದೇನಿದ್ರೂ ಮೇಲ್ವಿಚಾರಣೆ ಅಷ್ಟೇ ಎಂದು ಹೇಳಿದರು.

ಎಲ್ಲರೊಂದಿಗೆ ಬೆರೆತು ಶಿವಮೊಗ್ಗ ಜಿಲ್ಲೆಯ ಅಭಿವೃದ್ಧಿಗೆ ಕೈ ಜೋಡಿಸುತ್ತೇನೆ: ಡಾ.ನಾರಾಯಣಗೌಡ

ಪ್ರತಿಕಾಗೋಷ್ಠಿಯುದ್ದಕ್ಕೂ ಯಡಿಯೂರಪ್ಪನವರ ಹೆಸರನ್ನ ಪದೇಪದೆ ತರುತ್ತಿದ್ದ ಸಚಿವ ನಾರಾಯಣ ಗೌಡ ತಮಗೂ ಶಿವಮೊಗ್ಗಕ್ಕೂ ಅನನ್ಯ ಸಂಬಂಧ ಇದೆ. ಯಡಿಯೂರಪ್ಪ ಕೂಡ ನಮ್ಮೂರಿನವರು ಯಡಿಯೂರಪ್ಪನವರ ಆಶಯದಂತೆ ನಾನಿಲ್ಲಿಗೆ ಪುನಃ ಬಂದಿದ್ದೇನೆ ಎಂದರು.

ಇನ್ನು ಕಾಂಗ್ರೆಸ್‌ಗೆ ಬಿಜೆಪಿ ನಾಯಕರು ವಲಸೆ ಹೋಗುತ್ತಿದ್ದಾರೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್‌ ಹೇಳಿಕೆಗೆ ಗರಂ ಆದ ಸಚಿವ ನಾರಾಯಣ ಗೌಡ, ಅವರಿಗೆ ಬೇರೆ ಕೆಲಸ ಇಲ್ಲ ಎಂದು ಹರಿಹಾಯ್ದರು.

ಗಣರಾಜ್ಯೋತ್ಸವದ ಅಂಗವಾಗಿ ಭಾಷಣ ಮಾಡುವಾಗ ಪದೇಪದೆ ಯಡಿಯೂರಪ್ಪ ಹೆಸರು ಹೇಳಿದ್ದು ವಿಶೇಷವಾಗಿತ್ತು.

ಸಂವಿಧಾನ ರೂಪಿಸಿಕೊಟ್ಟ ಒಕ್ಕೂಟ ವ್ಯವಸ್ಥೆಯಲ್ಲಿ ಭಾರತದ ಸಾರ್ವಭೌಮತೆಗೆ ಧಕ್ಕೆ ತಾರದಂತೆ, ತನ್ನ ಅಸ್ಮಿತೆಯನ್ನೂ ಉಳಿಸಿಕೊಂಡು ಅಭಿವೃದ್ಧಿಯೆಡೆಗೆ ರಾಜ್ಯ ಸಾಗುತ್ತಿದೆ ಎಂದ ಅವರು, ಇಡೀ ದೇಶದಲ್ಲಿ ಕೊರೊನಾ ಆತಂಕದ ನಡುವೆಯೇ ಗಣರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಕೊರೋನಾ ನಿರ್ವಹಣೆಗೆ ರಾಜ್ಯ ಸರಕಾರ ಹಗಲಿರುಳು ಶ್ರಮಿಸುತ್ತಿದೆ. ಮೂರನೇ ಅಲೆ ಸಮರ್ಥವಾಗಿ ಎದುರಿಸಲು ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ ಎಂದು ಹೇಳಿದರು.

ರೈತಾಪಿ ಕುಟುಂಬದ ವಿದ್ಯಾರ್ಥಿಗಳಿಗಾಗಿ ರೈತ ವಿದ್ಯಾನಿಧಿ ಯೋಜನೆ, 58ಕ್ಕೂ ಅಧಿಕ ನಾಗರಿಕ ಸೇವೆಗಳನ್ನು ಮನೆ ಬಾಗಿಲಿಗೆ ಒದಗಿಸುವ ಜನಸೇವಕ ಎಂಬ ವಿನೂತನ ಕಾರ್ಯಕ್ರಮ, ಸುಮಾರು ೮೦೦ರಷ್ಟು ನಾಗರಿಕ ಸೇವೆಗಳನ್ನು ಒಂದೇ ಸೂರಿನಡಿ ತರುವ ಗ್ರಾಮ-ಒನ್ ಎಂಬ ವಿಶೇಷ ಯೋಜನೆ, 33 ಇಲಾಖೆಗಳ ವಿವಿಧ ಸೇವೆಗಳಿಗೆ ಸಂಬಂಧಿಸಿದಂತೆ ಕುಂದುಕೊರತೆಗಳ ನಿವಾರಣೆಗೆ ಜನಸ್ಪಂದನ ವ್ಯವಸ್ಥೆ, ಆರೋಗ್ಯ ಕ್ಷೇತ್ರದಲ್ಲಿನ ಮೂಲಸೌಕರ್ಯಗಳ ಉನ್ನತೀಕರಣಕ್ಕೆ ನಮ್ಮ ಸರಕಾರ ಆದ್ಯತೆ ನೀಡುತ್ತಿದೆ ಎಂದರು.

ಶಿವಮೊಗ್ಗದಲ್ಲಿ ಹೆದ್ದಾರಿ ಅಭಿವೃದ್ಧಿಗೆ 1500 ಕೋಟಿ ರೂ. ಅನುದಾನಕ್ಕೆ ಪ್ರಸ್ತಾವನೆ: ಸಂಸದ ಬಿ. ವೈ. ರಾಘವೇಂದ್ರ

ರಾಜ್ಯದ ಎಲ್ಲಾ ಗ್ರಾಮ ಪಂಚಾಯತ್‌ಗಳಲ್ಲಿ ಘನತ್ಯಾಜ್ಯ ನಿರ್ವಹಣಾ ಘಟಕ ಆರಂಭಿಸಲು ಈಗಾಗಲೇ ಚಾಲನೆ ನೀಡಲಾಗಿದೆ. ಮುಂದಿನ ಒಂದು ವರ್ಷದೊಳಗೆ ಶಿವಮೊಗ್ಗ ನಗರದ 55,88 ಮನೆಗಳಿಗೆ ನಿರಂತರ ಕುಡಿಯುವ ನೀರು ಪೂರೈಕೆ ವ್ಯವಸ್ಥೆ ಕಲ್ಪಿಸಲಾಗುವುದು. ಮಹಾ ನಗರಪಾಲಿಕೆ ಹೊರವಲಯದಲ್ಲಿರುವ ಬಡಾವಣೆಗಳಿಗೆ ಕುಡಿಯುವ ನೀರು ಪೂರೈಸುವ 96.50ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಈಗಾಗಲೇ ಚಾಲನೆ ನೀಡಲಾಗಿದೆ ಎಂದು ತಿಳಿಸಿದರು.

ಬಳಿಕ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸಚಿವ ಡಾ. ನಾರಾಯಣಗೌಡ ಅವರು ಸನ್ಮಾನಿಸಿ, ಗೌರವಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ