ಆ್ಯಪ್ನಗರ

ಮಂಗನ ಕಾಯಿಲೆ: ಡಿಸಿ ಖದ್ದು ಹಾಜರಿಗೆ ಹೈಕೋರ್ಟ್‌ ಆದೇಶ

ಜಿಲ್ಲೆಯಲ್ಲಿ ಮಂಗನ ಕಾಯಿಲೆ (ಕೆಎಫ್‌ಡಿ)ಯನ್ನು ನಿಯಂತ್ರಣಕ್ಕೆ ತರುವಲ್ಲಿ ಜಿಲ್ಲಾಡಳಿತ ವಿಫಲವಾದ ಆಪಾದನೆಯ ದಾವೆ ಹಿನ್ನೆಲೆಯಲ್ಲಿ ವಿಚಾರಣೆಗೆ ಖುದ್ದು ಹಾಜರಾಗುವಂತೆ ಜಿಲ್ಲಾಧಿಕಾರಿಗೆ ಹೈಕೋರ್ಟ್‌ ಮಂಗಳವಾರ ಆದೇಶ ನೀಡಿದೆ.

Vijaya Karnataka 24 Apr 2019, 5:00 am
ಶಿವಮೊಗ್ಗ : ಜಿಲ್ಲೆಯಲ್ಲಿ ಮಂಗನ ಕಾಯಿಲೆ (ಕೆಎಫ್‌ಡಿ)ಯನ್ನು ನಿಯಂತ್ರಣಕ್ಕೆ ತರುವಲ್ಲಿ ಜಿಲ್ಲಾಡಳಿತ ವಿಫಲವಾದ ಆಪಾದನೆಯ ದಾವೆ ಹಿನ್ನೆಲೆಯಲ್ಲಿ ವಿಚಾರಣೆಗೆ ಖುದ್ದು ಹಾಜರಾಗುವಂತೆ ಜಿಲ್ಲಾಧಿಕಾರಿಗೆ ಹೈಕೋರ್ಟ್‌ ಮಂಗಳವಾರ ಆದೇಶ ನೀಡಿದೆ.
Vijaya Karnataka Web high court ordered the dc to file its appeal
ಮಂಗನ ಕಾಯಿಲೆ: ಡಿಸಿ ಖದ್ದು ಹಾಜರಿಗೆ ಹೈಕೋರ್ಟ್‌ ಆದೇಶ


ನವೆಂಬರ್‌ನಲ್ಲಿ ಮೊದಲ ಬಾರಿಗೆ ಸಾಗರ ತಾಲೂಕು ಅರಳಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾಣಿಸಿಕೊಂಡ ಮಂಗನ ಕಾಯಿಲೆಗೆ ಹಲವರು ಮೃತಪಟ್ಟು ನೂರಾರು ಜನರು ನಲುಗಿದ್ದಾರೆ. ಅರಣ್ಯದೊಳಗೆ ಅಲ್ಲದೆ ಅರಣ್ಯಕ್ಕೆ ಹೊಂದಿಕೊಂಡ ಗ್ರಾಮಗಳ ತೋಟದಲ್ಲೂ ಕಾಯಿಲೆಗೆ ನೂರಾರು ಮಂಗಗಳು ಮೃತಪಟ್ಟಿವೆ. ಇದಕ್ಕೆ ಸಂಬಂಧಿಸಿದಂತೆ ಕೆಎಫ್‌ಡಿ ಜನಜಾಗೃತಿ ಒಕ್ಕೂಟವು ರೋಗ ನಿಯಂತ್ರಣಕ್ಕೆ ಕ್ರಮಕೈಗೊಳ್ಳಬೇಕು ಮತ್ತು ಮೃತಪಟ್ಟವರಿಗೆ ಸೂಕ್ತ ಪರಿಹಾರ ನೀಡಬೇಕೆಂದು ಆಗ್ರಹಿಸಿ ಪ್ರತಿಭಟನೆ, ಹೋರಾಟ ನಡೆಸಿದ್ದಲ್ಲದೆ ರಾಜ್ಯ ಮಾನವ ಹಕ್ಕು ಆಯೋಗ ಹಾಗೂ ಹೈಕೋರ್ಟ್‌ಗೆ ಜಿಲ್ಲಾಡಳಿತದ ವಿರುದ್ಧ ಸಾರ್ವಜನಿಕ ಹಿತಾಸಕ್ತಿ ಮೊಕ್ಕದ್ದಮೆ ದಾಖಲು ಮಾಡಿತ್ತು.

ಮಾನವ ಹಕ್ಕು ಆಯೋಗ ಪ್ರಕರಣದ ವಿಚಾರಣೆಗೆ ಅಂಗೀಕರಿಸಿರುವುದಲ್ಲದೆ ಹೈಕೋರ್ಟ್‌ ಸಹ ವಿಚಾರಣೆ ಕೈಗೆತ್ತಿಕೊಂಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ನಡೆಯುವ ವಿಚಾರಣೆಗೆ ಖುದ್ದು ಹಾಜರಾಗುವಂತೆ ಹೈಕೋರ್ಟ್‌ ಆದೇಶ ನೀಡಿದೆ. ಹೀಗಾಗಿ ಜಿಲ್ಲಾಧಿಕಾರಿ ಕೆ.ಎ.ದಯಾನಂದ್‌ ಅವರು ಹೈಕೋರ್ಟ್‌ ಮುಂದೆ ಹಾಜರಾಗುವುದು ಅನಿವಾರ್ಯವಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ