ಆ್ಯಪ್ನಗರ

ಪ್ರಧಾನಿ ಮೋದಿ ಸಹೋದರ ಹುಂಚಕ್ಕೆ ಭೇಟಿ

ಪ್ರಧಾನಿ ನರೇಂದ್ರಮೋದಿ ಅವರ ಹಿರಿಯ ಸಹೋದರ ಸೋಮಭಾಯಿ ಮೋದಿ ಅವರು ತಾಲೂಕಿನ ಹುಂಚ ಶ್ರೀ ಪದ್ಮಾವತಿ ದೇವಸ್ಥಾನಕ್ಕೆ ಬುಧವಾರ ಭೇಟಿ ನೀಡಿ ಪೂಜೆ ಸಲ್ಲಿಸಿದರು.

Vijaya Karnataka 11 Jul 2019, 5:00 am
ತೀರ್ಥಹಳ್ಳಿ : ಪ್ರಧಾನಿ ನರೇಂದ್ರಮೋದಿ ಅವರ ಹಿರಿಯ ಸಹೋದರ ಸೋಮಭಾಯಿ ಮೋದಿ ಅವರು ತಾಲೂಕಿನ ಹುಂಚ ಶ್ರೀ ಪದ್ಮಾವತಿ ದೇವಸ್ಥಾನಕ್ಕೆ ಬುಧವಾರ ಭೇಟಿ ನೀಡಿ ಪೂಜೆ ಸಲ್ಲಿಸಿದರು.
Vijaya Karnataka Web SMR-10TTH9


ಗುಜರಾತ್‌ನಿಂದ ಆಗಮಿಸಿರುವ ಸೋಮಭಾಯಿ ಮೋದಿ ಅವರು ಧರ್ಮಸ್ಥಳ, ಕಲ್ಲಡ್ಕ, ಉಜಿರೆ ನಂತರ ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿದ್ದು, ಸ್ವಾಮೀಜಿ ಅವರೊಂದಿಗೆ ಚರ್ಚಿಸಿದರು. ಈ ಸಂದರ್ಭ ರಾಜ್ಯ ಬಿಜೆಪಿ ಹಿಂದುಳಿದ ವರ್ಗ ಮೋರ್ಚಾ ಉಪಾಧ್ಯಕ್ಷ ಬೇಗುವಳ್ಳಿ ಸತೀಶ್‌ ಅವರೊಂದಿಗಿದ್ದರು.

ಸತೀಶ್‌ ಮನೆಗೆ ಭೇಟಿ

ಹುಂಚ ದೇವಸ್ಥಾನದಲ್ಲಿ ಧಾರ್ಮಿಕ ಕಾರ‍್ಯಕ್ರಮಗಳನ್ನು ಪೂರೈಸಿದ ನಂತರ ಸೋಮಭಾಯಿ ಮೋದಿ ಅವರು ತೀರ್ಥಹಳ್ಳಿ ತಾಲೂಕಿನ ಬೇಗುವಳ್ಳಿ ಸತೀಶ್‌ ಅವರ ಮನೆಗೆ ಭೇಟಿ ನೀಡಿದ್ದು, ನೆನಪಿಗಾಗಿ ತೆಂಗಿನ ಸಸಿ ನೆಟ್ಟರು. ಈ ಸಂದರ್ಭ ಬೇಗುವಳ್ಳಿ ಸತೀಶ್‌, ತಾ.ಪಂ.ಸದಸ್ಯರಾದ ಸಾಲೇಕೊಪ್ಪ ರಾಮಚಂದ್ರ, ಬೇಗುವಳ್ಳಿ ಕವಿರಾಜ್‌ ಮತ್ತಿತರರು ಇದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ