ಆ್ಯಪ್ನಗರ

ಜನರು ಬಿಜೆಪಿಗೆ ಏಕೆ ವೋಟ್‌ ಕೊಡುತ್ತಿದ್ದಾರೆ ಎಂಬುದೇ ಅರ್ಥವಾಗುತ್ತಿಲ್ಲ- ಕಿಮ್ಮನೆ ರತ್ನಾಕರ್

ಬಿಜೆಪಿ ನೇತೃತ್ವದ ಕೇಂದ್ರ, ರಾಜ್ಯ ಸರಕಾರದ ಆಡಳಿತದಲ್ಲಿ ಪೆಟ್ರೋಲ್‌, ಡೀಸೆಲ್‌, ಅಡುಗೆ ಅನಿಲ, ಕಬ್ಬಿಣ, ಸಿಮೆಂಟ್‌, ದಿನಸಿ ಸಾಮಗ್ರಿ ಬೆಲೆ ಏರಿಕೆ ಆಗಿದ್ದರೂ ಜನರು ಬೀದಿಗಿಳಿದು ಹೋರಾಟ ಮಾಡುತ್ತಿಲ್ಲ. 8 ತಿಂಗಳಿನಿಂದ ಸಂಧ್ಯಾಸುರಕ್ಷಾ, ಅಂತ್ಯಸಂಸ್ಕಾರ ಯೋಜನೆಯಡಿ ಹಣ ಬಿಡುಗಡೆ ಆಗುತ್ತಿಲ್ಲ ಎಂದು ಕಿಮ್ಮನೆ ರತ್ನಾಕರ್‌ ಹೇಳಿದರು.

Vijaya Karnataka Web 12 Jan 2021, 10:53 am
ತೀರ್ಥಹಳ್ಳಿ: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರಕಾರ ರೈತರ 50 ಸಾವಿರ ರೂಪಾಯಿ ಸಾಲಮನ್ನಾ ಮಾಡಿದೆ. ಆತ್ಮಹತ್ಯೆ ಮಾಡಿಕೊಂಡ ರೈತ ಕುಟುಂಬಕ್ಕೆ 5ಲಕ್ಷ ರೂಪಾಯಿ, ಮಕ್ಕಳಿಗೆ ಉಚಿತ ಶಿಕ್ಷಣ ನೀಡಿದೆ. ಕೃಷಿ ಕಾರ್ಮಿಕರು, ಜನಸಾಮಾನ್ಯರಿಗೆ ಅನೇಕ ಕಾರ‍್ಯಕ್ರಮ ಜಾರಿಗೊಳಿಸಿದೆ. ಬಿಜೆಪಿ ಸರಕಾರ ಏನೂ ಮಾಡಿಲ್ಲ. ಆದರೂ ಜನರು ಬಿಜೆಪಿಗೆ ಓಟು ಕೊಡುತ್ತಿದ್ದು ಏಕೆ ಎಂಬುದೆ ಅರ್ಥವಾಗುತ್ತಿಲ್ಲ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ಹೇಳಿದ್ದಾರೆ.
Vijaya Karnataka Web kimmane rathnakara

ಆರಂಭದಲ್ಲಿಯೇ ನಮಗೆ ಸಂಪೂರ್ಣ ಬಹುಮತ ಸಿಕ್ಕಿದ್ದರೆ ಈ ಪರಿಸ್ಥಿತಿ ಬರುತ್ತಿರಲಿಲ್ಲ; ಈಶ್ವರಪ್ಪ
ಪಟ್ಟಣದ ಗಾಯಿತ್ರಿ ಮಂದಿರದಲ್ಲಿ ಗ್ರಾ.ಪಂ. ಚುನಾವಣೆಯಲ್ಲಿಆಯ್ಕೆಗೊಂಡ ಕಾಂಗ್ರೆಸ್‌, ಸಮಾನ ಮನಸ್ಕರ ಅಭಿನಂದನಾ ಸಭೆಯನ್ನು ಸೋಮವಾರ ಉದ್ದೇಶಿಸಿ ಅವರು ಮಾತನಾಡಿದ ಅವರು ಬಿಜೆಪಿ ನೇತೃತ್ವದ ಕೇಂದ್ರ, ರಾಜ್ಯ ಸರಕಾರದ ಆಡಳಿತದಲ್ಲಿ ಪೆಟ್ರೋಲ್‌, ಡೀಸೆಲ್‌, ಅಡುಗೆ ಅನಿಲ, ಕಬ್ಬಿಣ, ಸಿಮೆಂಟ್‌, ದಿನಸಿ ಸಾಮಗ್ರಿ ಬೆಲೆ ಏರಿಕೆ ಆಗಿದ್ದರೂ ಜನರು ಬೀದಿಗಿಳಿದು ಹೋರಾಟ ಮಾಡುತ್ತಿಲ್ಲ. 8 ತಿಂಗಳಿನಿಂದ ಸಂಧ್ಯಾಸುರಕ್ಷಾ, ಅಂತ್ಯಸಂಸ್ಕಾರ ಯೋಜನೆಯಡಿ ಹಣ ಬಿಡುಗಡೆ ಆಗುತ್ತಿಲ್ಲ ಎಂದು ಕಿಮ್ಮನೆ ರತ್ನಾಕರ್‌ ಹೇಳಿದರು.

ಭಾರತದಲ್ಲಿ ತಿಂದರಷ್ಟೇ ಗೋವು ಮಾತೆಯೇ? ವಿದೇಶಗಳಿಗೆ ರಫ್ತಾಗುತ್ತಿರೋ ಗೋವುಗಳು ಮಾತೆಯಲ್ಲವೇ?; ಸಿದ್ದರಾಮಯ್ಯ
ಜಾತಿ ಧರ್ಮದ ಹೆಸರು ಹೇಳಿ ಬಿಜೆಪಿ ಜನರನ್ನು ದಾರಿ ತಪ್ಪಿಸುತ್ತಿದೆ. ಕ್ಷೇತ್ರದಲ್ಲಿ ಈ ಬಾರಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತರ ಗೆಲುವಿಗಾಗಿ ಹಣದ ಹೊಳೆ ಹರಿಸಲಾಗಿದೆ. ಕೆಲವು ಪಿಡಿಒಗಳು, ಪೋಲಿಸರು, ವಲಯಾರಣ್ಯಧಿಕಾರಿ ಬಿಜೆಪಿ ಗೆಲ್ಲಿಸಲು ಸಹಕರಿಸಿದ್ದಾರೆ. ಶಾಸಕ ಆರಗ ಜ್ಞಾನೇಂದ್ರ ಅಧಿಕಾರಿಗಳ ಮೇಲೆ ಒತ್ತಡ ಹೇರಿ ಕಾನೂನುಬಾಹಿರ ಚುನಾವಣೆಗೆ ಕಾರಣರಾಗಿದ್ದಾರೆ ಎಂದು ಕಿಮ್ಮನೆ ಆರೋಪಿಸಿದರು.

ಉತ್ತರ ಕರ್ನಾಟಕ ಭಾಗದ ಸಮಸ್ಯೆ ಬಗೆಹರಿಸಲು ಬಿಜೆಪಿ ಎಂದಿಗೂ ಪ್ರಯತ್ನ ಮಾಡಿಲ್ಲ; ಸಿದ್ದರಾಮಯ್ಯ
ವಿಧಾನ ಪರಿಷತ್‌ ಸದಸ್ಯ ಆರ್‌. ಪ್ರಸನ್ನಕುಮಾರ್‌ ಮಾತನಾಡಿದರು. ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಎಚ್‌.ಎಸ್‌.ಸುಂದರೇಶ್‌ ಅಧ್ಯಕ್ಷತೆ ವಹಿಸಿದ್ದರು. ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಕೆಸ್ತೂರು ಮಂಜುನಾಥ್‌, ಗ್ರಾಮಾಂತರ ಘಟಕದ ಅಧ್ಯಕ್ಷ ಮುಡುಬ ರಾಘವೇಂದ್ರ, ಪ್ರಚಾರ ಸಮಿತಿ ಅಧ್ಯಕ್ಷ ಯಡೂರು ರಾಜ್‌ರಾಮ್‌, ಜಿ.ಪಂ.ಉಪಾಧ್ಯಕ್ಷೆ ವೇದಾ, ಸದಸ್ಯರಾದ ಕಲಗೋಡು ರತ್ನಾಕರ್‌, ಭಾರತೀ, ಕಲ್ಪನಾ, ತಾ.ಪಂ. ಅಧ್ಯಕ್ಷೆ ನವಮಣಿ ಮತ್ತಿತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ