ಆ್ಯಪ್ನಗರ

ನಾನು ಶಾಸಕನಾದರೆ ಮಳೆ ಚೆನ್ನಾಗಾಗುತ್ತೆ..!: ಕಾಂಗ್ರೆಸ್ ಶಾಸಕ

ನಾನು ಶಾಸಕನಾದರೆ ಮಳೆ ಚೆನ್ನಾಗಿ ಆಗುತ್ತದೆ ಎಂಬುದು ಮತ್ತೆ ಸಾಬೀತಾಗಿದೆ ಎಂದು ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ್‌ ಹೇಳಿಕೊಂಡರು.

Vijaya Karnataka 19 Aug 2019, 8:48 am
ಶಿವಮೊಗ್ಗ : ನಾನು ಶಾಸಕನಾದರೆ ಮಳೆ ಚೆನ್ನಾಗಿ ಆಗುತ್ತದೆ ಎಂಬುದು ಮತ್ತೆ ಸಾಬೀತಾಗಿದೆ ಎಂದು ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ್‌ ಹೇಳಿಕೊಂಡರು.
Vijaya Karnataka Web sangameshwar mla


ಭದ್ರಾ ಜಲಾಶಯಕ್ಕೆ ಭಾನುವಾರ ಬಾಗಿನ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆಯೂ ನಾನು ಶಾಸಕನಾಗಿದ್ದಾಗ ಜಿಲ್ಲೆಯಲ್ಲಿ ಮಳೆ ಚೆನ್ನಾಗಿ ಆಗಿತ್ತು. ನಾನು ಶಾಸಕನಾದರೆ ಮಳೆ ಚೆನ್ನಾಗಿ ಆಗುತ್ತದೆ ಎಂಬುದು ಈಗ ಸಾಬೀತಾಗಿದೆ ಎಂದರು.

ಭದ್ರಾವತಿಯಲ್ಲಿ ಪ್ರವಾಹದಿಂದ 150 ಮನೆಗಳಿಗೆ ಹಾನಿಯಾಗಿದೆ. ಕೆರೆ, ಕಟ್ಟೆಗಳು ಒಡೆದು ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ಹಲವು ರಸ್ತೆಗಳು ಕುಸಿದಿವೆ. ಸುಮಾರು 20 ಕೋಟಿ ರೂ.ಗೂ ಅಧಿಕ ನಷ್ಟವಾಗಿದೆ ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ