ಆ್ಯಪ್ನಗರ

ಅಕ್ರಮ ಮರಳು ದಾಸ್ತಾನು: ಕೇಸು ದಾಖಲು

ಪರವಾನಗಿ ಇಲ್ಲದೇ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಮರಳನ್ನು ಪೊಲೀಸರು ವಶಕ್ಕೆ ಪಡೆದು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

Vijaya Karnataka 5 Jun 2019, 5:00 am
ಹೊಸನಗರ: ಪರವಾನಗಿ ಇಲ್ಲದೇ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಮರಳನ್ನು ಪೊಲೀಸರು ವಶಕ್ಕೆ ಪಡೆದು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ತಾಲೂಕಿನ ಮೇಲಿನಸಂಪಳ್ಳಿ ಗ್ರಾಮದ ಎರಡು ಪ್ರತ್ಯೇಕ ಸ್ಥಳಗಳಲ್ಲಿ ಸಕಲಾತಿ ಅವಿನಾಶ ಮತ್ತು ಕಾಡವಳ್ಳಿ ರಮೇಶ ಎಂಬುವವರು ಅಕ್ರಮವಾಗಿ ಮರಳು ಸಂಗ್ರಹಿಸಿಟ್ಟಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು 1.60 ಲಕ್ಷ ರೂ.ಬೆಲೆ ಬಾಳುವ ಸುಮಾರು 16 ಟಿಪ್ಪರ್‌ ಲೋಡು ಮರಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.
Vijaya Karnataka Web 20170116_131220


ಪ್ರತ್ಯೇಕ ಪ್ರಕರಣದಲ್ಲಿ ಇದೇ ಗ್ರಾಮದ ಶರಾವತಿ ನದಿ ಹಿನ್ನೀರಿನಲ್ಲಿ ಅಕ್ರಮವಾಗಿ ಟ್ರ್ಯಾಕ್ಟರ್‌ಗೆ ಮರಳು ಲೋಡು ಮಾಡುತ್ತಿದ್ದ ವೇಳೆ ದಾಳಿ ನಡೆಸಿ ಪೊಲೀಸರು ಮರಳು ಸಹಿತ ಟ್ರ್ಯಾಕ್ಟರ್‌ನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿ ಸಕಲಾತಿ ಶಿವಕುಮಾರ ಎಂಬಾತನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ