ಆ್ಯಪ್ನಗರ

ಜಾನುವಾರು ಅಕ್ರಮ ಸಾಗಣೆ: ಆರೋಪಿ ಬಂಧನ

ತಾಲೂಕಿನ ಆನಂದಪುರಂ ಸಮೀಪದ ಅಡೂರು ಬಳಿ ಅಕ್ರಮವಾಗಿ ಜಾನುವಾರುಗಳನ್ನು ವಾಹನದಲ್ಲಿ ಸಾಗಿಸುತ್ತಿದ್ದಾಗ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಭಾನುವಾರ ರಾತ್ರಿ ನಡೆದಿದೆ.

Vijaya Karnataka 30 Apr 2019, 9:41 pm
ಸಾಗರ : ತಾಲೂಕಿನ ಆನಂದಪುರಂ ಸಮೀಪದ ಅಡೂರು ಬಳಿ ಅಕ್ರಮವಾಗಿ ಜಾನುವಾರುಗಳನ್ನು ವಾಹನದಲ್ಲಿ ಸಾಗಿಸುತ್ತಿದ್ದಾಗ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಭಾನುವಾರ ರಾತ್ರಿ ನಡೆದಿದೆ.
Vijaya Karnataka Web illegal transportation of cattle arrest of accused
ಜಾನುವಾರು ಅಕ್ರಮ ಸಾಗಣೆ: ಆರೋಪಿ ಬಂಧನ

ಹೊಸನಗರ ತಾಲೂಕಿನ ಹೆಬೈಲು ಮಾರ್ಗವಾಗಿ ಆನಂದಪುರಂ ಕಡೆಗೆ ಲಗೇಜ್‌ ಆಟೋದಲ್ಲಿ ಎರಡು ಎಮ್ಮೆ ಸೇರಿದಂತೆ ಏಳು ಜಾನುವಾರುಗಳನ್ನು ಅನಧಿಕೃತವಾಗಿ ಸಾಗಿಸಲಾಗುತಿತ್ತು. ಜಾನುವಾರುಗಳನ್ನು ಒಂದೇ ವಾಹನದಲ್ಲಿ ತುಂಬಿದ್ದರಿಂದ ಅನುಮಾನಗೊಂಡ ಗ್ರಾಮಸ್ಥರು ವಾಹನ ತಡೆದು ಪ್ರಶ್ನಿಸಿದ್ದಾರೆ. ವಾಹನ ಚಾಲಕ ಉತ್ತರ ಕೊಡಲು ಪರದಾಡಿದ್ದಾನೆ. ಇದರಿಂದ ಅನುಮಾನಗೊಂಡ ಗ್ರಾಮಸ್ಥರು ಗ್ರಾಮಾಂತರ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಆರೋಪಿ ಶಿರಾಳಕೊಪ್ಪ ವಾಸಿ ನವರಾಜ್‌ ಎಂಬಾತನನ್ನು ವಾಹನ ಸಮೇತ ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ