ಆ್ಯಪ್ನಗರ

ಸಮನ್ವಯದಿಂದ ಜೀವನಮಟ್ಟ ಸುಧಾರಣೆ

ಲಿಂಗತ್ವ ಅಲ್ಪಸಂಖ್ಯಾತರ ಹಾಗೂ ದಮನಿತ ಮಹಿಳೆಯರ ಸಾಮಾಜಿಕ ಹಾಗೂ ಆರ್ಥಿಕ ಸ್ವಾವಲಂಬನೆಗೆ ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಎ.ದಯಾನಂದ್‌ ಸಲಹೆ ನೀಡಿದರು.

Vijaya Karnataka 25 Jul 2019, 5:00 am
ಶಿವಮೊಗ್ಗ: ಲಿಂಗತ್ವ ಅಲ್ಪಸಂಖ್ಯಾತರ ಹಾಗೂ ದಮನಿತ ಮಹಿಳೆಯರ ಸಾಮಾಜಿಕ ಹಾಗೂ ಆರ್ಥಿಕ ಸ್ವಾವಲಂಬನೆಗೆ ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಎ.ದಯಾನಂದ್‌ ಸಲಹೆ ನೀಡಿದರು.
Vijaya Karnataka Web SMG-2407-2-15-24SMG4


ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ನಡೆದ ಲಿಂಗತ್ವ ಅಲ್ಪಸಂಖ್ಯಾತರ ಹಾಗೂ ದಮನಿತ ಮಹಿಳೆಯರ ಜೀವನ ಮಟ್ಟ ಸುಧಾರಿಸಲು ವಿವಿಧ ಇಲಾಖೆಗಳ ಮಧ್ಯೆ ಸಮನ್ವಯತೆ ಮತ್ತು ಯೋಜನೆಗಳ ಅನುಷ್ಠಾನಕ್ಕಾಗಿ ರಚಿಸಲಾದ ಜಿಲ್ಲಾಮಟ್ಟದ ಸಮಿತಿ ಸಭೆಯಲ್ಲಿ ಮಾತನಾಡಿದರು.

ಗುರುತಿನ ಚೀಟಿ, ಪಡಿತರ ಚೀಟಿ, ಆಧಾರ್‌ ಕಾರ್ಡ್‌ ಇತ್ಯಾದಿ ಮತದಾರರ ಕಾರ್ಡ್‌ ಇತ್ಯಾದಿಗಳನ್ನು ಲಿಂಗತ್ವ ಅಲ್ಪಸಂಖ್ಯಾತರು ಹಾಗೂ ದಮನಿತ ಮಹಿಳೆಯರು ಪಡೆದುಕೊಳ್ಳಲು ನೆರವು ನೀಡಬೇಕು. ನಿವೇಶನ ಇದ್ದವರಿಗೆ ವಸತಿ ಯೋಜನೆಗಳ ಅಡಿಯಲ್ಲಿ ಮನೆ ನಿರ್ಮಿಸಲು ಕ್ರಮ ಕೈಗೊಳ್ಳಬೇಕು. ಈಗಾಗಲೇ ಮನೆ ನಿರ್ಮಾಣ ಕುರಿತಾಗಿ 80 ಪ್ರಸ್ತಾವನೆಗಳನ್ನು ರಾಜೀವ್‌ಗಾಂಧಿ ಹೌಸಿಂಗ್‌ ಕಾರ್ಪೊರೇಷನ್‌ಗೆ ಸಲ್ಲಿಸಲಾಗಿದೆ. ಈ ಬಗ್ಗೆ ಪರಿಶೀಲನೆ ನಡೆಸಿ ಮಂಜೂರಾತಿಯನ್ನು ಪಡೆದುಕೊಳ್ಳಬೇಕು. ಆರೋಗ್ಯ ಸೇವೆಗಳು, ಪಿಂಚಣಿ ಸೇರಿದಂತೆ ಸರಕಾರದ ವಿವಿಧ ಇಲಾಖೆಗಳಲ್ಲಿ ಲಭ್ಯವಿರುವ ಸೌಲಭ್ಯಗಳು ಇವರಿಗೆ ಸಿಗುವುದನ್ನು ಖಾತರಿ ಪಡಿಸಬೇಕು ಎಂದು ಹೇಳಿದರು.

ಲಿಂಗತ್ವ ಅಲ್ಪಸಂಖ್ಯಾತರು ಹಾಗೂ ದಮನಿತ ಮಹಿಳೆಯರಿಗೆ ಅವರ ಶೈಕ್ಷ ಣಿಕ ಹಿನ್ನೆಲೆಗೆ ಅನುಗುಣವಾಗಿ ವೃತ್ತಿ ತರಬೇತಿಯನ್ನು ಉದ್ಯೋಗ ಹಾಗೂ ಕೌಶಲ್ಯಾಭಿವೃದ್ಧಿ ಇಲಾಖೆ ಮೂಲಕ ನೀಡಬೇಕು. ಇದಕ್ಕಾಗಿ, ಆಸಕ್ತರ ಸಭೆಯನ್ನು ಕರೆದು ಸಮಾಲೋಚನೆ ನಡೆಸಬೇಕು. ಸಣ್ಣ ಪುಟ್ಟ ಸ್ವಯಂ ಉದ್ಯೋಗ ಕೈಗೊಳ್ಳಲು ಮುಂದೆ ಬರುವವರಿಗೆ ಚೈತನ್ಯ ಯೋಜನೆ, ಉದ್ಯೋಗಿನಿ ಯೋಜನೆಗಳ ಅಡಿಯಲ್ಲಿ ಸಾಲ ಸೌಲಭ್ಯ ಒದಗಿಸಬೇಕು. ಸಾಲ ಒದಗಿಸಲು ಬ್ಯಾಂಕ್‌ಗಳಿಗೆ ಸೂಚನೆ ನೀಡಲಾಗುವುದು ಎಂದರು.

ಜಿಲ್ಲೆಯಲ್ಲಿ 439 ಲಿಂಗತ್ವ ಅಲ್ಪಸಂಖ್ಯಾತರಿದ್ದು, 22 ಫಲಾನುಭವಿಗಳು ಮೈತ್ರಿ ಯೋಜನೆ ಅಡಿ ಪಿಂಚಣಿ ಸೌಲಭ್ಯ ಪಡೆಯುತ್ತಿದ್ದಾರೆ. 74 ಫಲಾನುಭವಿಗಳಿಗೆ 20 ಸಾವಿರ ರೂ. ಪ್ರೋತ್ಸಾಹಧನ, 20 ಫಲಾನುಭವಿಗಳಿಗೆ 25 ಸಾವಿರ ರೂ.ಸಾಲ ಮತ್ತು ಸಹಾಯಧನ ಒದಗಿಸಲಾಗಿದ್ದು, ಒಟ್ಟು 94 ಫಲಾನುಭವಿಗಳು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆಯಡಿ ಸೌಲಭ್ಯ ಪಡೆದಿದ್ದಾರೆ. ಮೆಗ್ಗಾನ್‌ ಆಸ್ಪತ್ರೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರಿಗೆ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಶೇಷಪ್ಪ ಮಾಹಿತಿ ನೀಡಿದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸರಸ್ವತಿ, ಜಿಲ್ಲಾ ಪಂಚಾಯಿತಿ ಸಿಇಒ ಕೆ.ಶಿವರಾಮೇಗೌಡ, ಅಪರ ಜಿಲ್ಲಾಧಿಕಾರಿ ಜಿ.ಅನುರಾಧ, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು, ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ