ಆ್ಯಪ್ನಗರ

ಕುಡಿದ ಅಮಲಲ್ಲಿ ಪೇದೆ ಮೇಲೆ ತೀವ್ರ ಹಲ್ಲೆ

ಕುಡಿದ ಅಮಲಿನಲ್ಲಿ ಪೊಲೀಸ್‌ ಪೇದೆಯೊಬ್ಬರ ಮೇಲೆ ಇಬ್ಬರು ಆಟೊಚಾಲಕರು ಹಲ್ಲೆ ನಡೆಸಿರುವ ಘಟನೆ ನಗರದ ಖಾಸಗಿ ಬಸ್‌ ನಿಲ್ದಾಣದಲ್ಲಿ ಮಂಗಳವಾರ ರಾತ್ರಿ ನಡೆದಿದ್ದು, ಹಲ್ಲೆಕೋರರನ್ನು ಬಂಧಿಸಲಾಗಿದೆ.

Vijaya Karnataka 3 Jan 2019, 5:00 am
ಶಿವಮೊಗ್ಗ : ಕುಡಿದ ಅಮಲಿನಲ್ಲಿ ಪೊಲೀಸ್‌ ಪೇದೆಯೊಬ್ಬರ ಮೇಲೆ ಇಬ್ಬರು ಆಟೊಚಾಲಕರು ಹಲ್ಲೆ ನಡೆಸಿರುವ ಘಟನೆ ನಗರದ ಖಾಸಗಿ ಬಸ್‌ ನಿಲ್ದಾಣದಲ್ಲಿ ಮಂಗಳವಾರ ರಾತ್ರಿ ನಡೆದಿದ್ದು, ಹಲ್ಲೆಕೋರರನ್ನು ಬಂಧಿಸಲಾಗಿದೆ.
Vijaya Karnataka Web in the drunken condition constant attack on constable
ಕುಡಿದ ಅಮಲಲ್ಲಿ ಪೇದೆ ಮೇಲೆ ತೀವ್ರ ಹಲ್ಲೆ


ಕುಂಸಿ ಠಾಣೆ ಪೊಲೀಸ್‌ ಸಿಬ್ಬಂದಿ ಮಂಜುನಾಥ್‌ ಎಂಬುವವರೇ ಹಲ್ಲೆಗೊಳಗಾದವರು. ಹಲ್ಲೆಗೈದ ಆಟೊ ಚಾಲಕ ನದೀಮ್‌, ನಜೀರ್‌ ಎಂಬುವವರನ್ನು ದೊಡ್ಡಪೇಟೆ ಪೊಲೀಸರು ವಶಕ್ಕೆ ಪಡೆದಿದ್ದು, ತನಿಖೆ ನಡೆಸಿದ್ದಾರೆ.

ಗಾಯಾಳು ಮಂಜುನಾಥ್‌ ಅವರನ್ನು ಮೆಗ್ಗಾನ್‌ ಆಸ್ಪತ್ರೆಗೆ ದಾಖಲಿಸಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ.

ಬ್ಲೇಡ್‌ನಿಂದ ಹಲ್ಲೆ:
ಕುಂಸಿ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮಂಜುನಾಥ್‌ ಅವರು ಪ್ರಕರಣವೊಂದರ ಸಂಬಂಧ ಗ್ರಾಮಾಂತರ ಠಾಣೆಗೆ ಆಗಮಿಸಿದ್ದರು. ಕೆಲಸ ಮುಗಿಸಿ ವಾಪಸ್‌ ಕುಂಸಿಗೆ ಹೋಗುವಾಗ ಘಟನೆ ನಡೆದಿದೆ.

ಕುಡಿದ ಅಮಲಿನಲ್ಲಿದ್ದ ಆಟೊ ಚಾಲಕರಿಬ್ಬರು ಖಾಸಗಿ ಬಸ್‌ ನಿಲ್ದಾಣದಲ್ಲಿದ್ದ ಸಾರ್ವಜನಿಕರಿಗೆ ಬೆದರಿಸಿ ಅವರಿಂದ ಹಣ ವಸೂಲಿ ಮಾಡುತ್ತಿದ್ದರು. ಆ ವೇಳೆ, ಬಸ್‌ಗೋಸ್ಕರ ಮಂಜುನಾಥ್‌ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಇವರಲ್ಲೂ ಹಣ ನೀಡುವಂತೆ ಒತ್ತಾಯ ಮಾಡಲಾಗಿದೆ. ವಿರೋಧಿಸಿದಾಗ ಬ್ಲೇಡ್‌ನಿಂದ ಕುತ್ತಿಗೆ, ಕೈ, ಕಾಲು ಕೊಯ್ದಿದ್ದಾರೆ. ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ