ಆ್ಯಪ್ನಗರ

ಹೊಂಬುಜ ಜಾತ್ರಾ ಮಹೋತ್ಸವಕ್ಕೆ ಚಾಲನೆ

ಅತಿಶಯ ಮಹಾಕ್ಷೇತ್ರ ಹೊಂಬುಜದಲ್ಲಿ ಪರಂಪರಾನುಗತವಾಗಿ ನಡೆದು ಬಂದಿರುವ ಭಗವಾನ್‌ ಶ್ರೀ ಪಾಶ್ರ್ವನಾಥ ಸ್ವಾಮಿ ಹಾಗೂ ಮಹಾಮಾತೆ ಶ್ರೀ ಪದ್ಮಾವತಿ ದೇವರ ಜಾತ್ರೋತ್ಸವಕ್ಕೆ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಸ್ವಾಮೀಜಿ ಭಾನುವಾರ ಚಾಲನೆ ನೀಡಿದರು.

Vijaya Karnataka 25 Mar 2019, 5:00 am
ರಿಪ್ಪನ್‌ಪೇಟೆ : ಅತಿಶಯ ಮಹಾಕ್ಷೇತ್ರ ಹೊಂಬುಜದಲ್ಲಿ ಪರಂಪರಾನುಗತವಾಗಿ ನಡೆದು ಬಂದಿರುವ ಭಗವಾನ್‌ ಶ್ರೀ ಪಾಶ್ರ್ವನಾಥ ಸ್ವಾಮಿ ಹಾಗೂ ಮಹಾಮಾತೆ ಶ್ರೀ ಪದ್ಮಾವತಿ ದೇವರ ಜಾತ್ರೋತ್ಸವಕ್ಕೆ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಸ್ವಾಮೀಜಿ ಭಾನುವಾರ ಚಾಲನೆ ನೀಡಿದರು.
Vijaya Karnataka Web SMR-24RPTP1


ಬಳಿಕ ಅವರು ಭಕ್ತರನ್ನುದ್ದೇಶಿಸಿ ಆಶೀರ್ವಚನ ನೀಡಿ, ಕ್ಷೇತ್ರದ ದೇವರುಗಳ ಮಹಿಮೆಯನ್ನು ಬಣ್ಣಿಸಿದರು.

ಜಾತ್ರಾ ಮಹೋತ್ಸವ ಅಂಗವಾಗಿ ಮಾ.25ರಂದು ಸಿಂಹವಾಹನೋತ್ಸವ, ಮಾ.26ರಂದು ಪದ್ಮಾವತಿ ಅಮ್ಮನವರ ಮಹಾರಥೋತ್ಸವ ನಡೆಯಲಿದೆ. ಮಾ.27ರಂದು ಮಹಾರಥೋತ್ಸವ, ಮಾ.28 ಭಗವಾನ್‌ ಶ್ರೀ ಪಾಶ್ರ್ವನಾಥ ಸ್ವಾಮಿಗೆ 108 ಕಲಶಗಳ ಮಹಾಭಿಷೇಕ ಮತ್ತು ಸಂಘ ಪೂಜೆ, ಮಾ. 29ರಂದು ಕುಂಕುಮೋತ್ಸವ ಮತ್ತು ಧ್ವಜಾವರೋಹಣದೊಂದಿಗೆ ಸಂಪನ್ನಗೊಳ್ಳಲಿದೆ ಎಂದರು.

ಅರಿಹಂತಗಿರಿಯ ಶ್ರೀ ಧವಲಕೀರ್ತಿ ಭಟ್ಟಾರಕ ಸ್ವಾಮೀಜಿ, ಕಂಬದಹಳ್ಳಿಯ ಶ್ರೀ ಭಾನುಕೀರ್ತಿ ಭಟ್ಟಾರಕರು ಹಾಗೂ ಡಾ.ದೇವೇಂದ್ರಕೀರ್ತಿ ಭಟ್ಟಾರಕ ಸ್ವಾಮೀಜಿಯವರು ಸಾನ್ನಿಧ್ಯ ವಹಿಸಲಿದ್ದಾರೆ.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ