ಆ್ಯಪ್ನಗರ

ಪರಿಸರ ಉಳಿವಿಗೆ ಹೆಚ್ಚಿದೆ ಹೊಣೆ

ಪರಿಸರ ಉಳಿಸುವ ನಿಟ್ಟಿನಲ್ಲಿ ಜನಸಾಮಾನ್ಯರ ಕರ್ತವ್ಯದ ಜತೆಗೆ ಅರಣ್ಯ ಇಲಾಖೆ ಜವಾಬ್ದಾರಿಯೂ ಇದೆ ಎಂದು ಶಾಸಕ ಎಚ್‌.ಹಾಲಪ್ಪ ಹೇಳಿದರು.

Vijaya Karnataka 5 Aug 2019, 5:00 am
ಸಾಗರ: ಪರಿಸರ ಉಳಿಸುವ ನಿಟ್ಟಿನಲ್ಲಿ ಜನಸಾಮಾನ್ಯರ ಕರ್ತವ್ಯದ ಜತೆಗೆ ಅರಣ್ಯ ಇಲಾಖೆ ಜವಾಬ್ದಾರಿಯೂ ಇದೆ ಎಂದು ಶಾಸಕ ಎಚ್‌.ಹಾಲಪ್ಪ ಹೇಳಿದರು.
Vijaya Karnataka Web SMR-02SGR15


ಇಲ್ಲಿನ ವರದಹಳ್ಳಿ ರಸ್ತೆಯಲ್ಲಿರುವ ಆರ್ಯಈಡಿಗರ ಸಂಘದ ಸಮುದಾಯ ಭವನದಲ್ಲಿ ಏರ್ಪಡಿಸಿದ್ದ ವನಮಹೋತ್ಸವಕ್ಕೆ ಗಿಡ ನೆಡುವ ಮೂಲಕ ಚಾಲನೆ ನೀಡಿ ಸಂಘದಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿದರು.

ಎಂಪಿಎಂ ಇಲಾಖೆ ಸುಪರ್ದಿಯಲ್ಲಿರುವ ಸುಮಾರು 67 ಸಾವಿರ ಎಕರೆ ಅರಣ್ಯ ಜಾಗ ಪುನಾ ಅರಣ್ಯ ಇಲಾಖೆಗೆ ವರ್ಗಾಯಿಸುವ ಬಗ್ಗೆ ಸರಕಾರದ ಮಟ್ಟದಲ್ಲಿ ಮಾತುಕತೆ ನಡೆಸಿದ್ದೇನೆ. ಈ ಜಾಗದಲ್ಲಿ ಈ ಹಿಂದೆ ಅರಣ್ಯ ಇಲಾಖೆಯಿಂದ ಕಾಡುಮರ ಬೆಳೆಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಉನ್ನತ ಅಧಿಕಾರಿಗಳಲ್ಲಿ ಮನವಿ ಮಾಡಿರುವುದಾಗಿ ತಿಳಿಸಿದರು. ಮಾಜಿ ಸಚಿವ ಕಾಗೋಡು ತಿಮ್ಮಪ್ಪ , ಸಿಗಂದೂರು ದೇವಸ್ಥಾನದ ಧರ್ಮದರ್ಶಿ ಡಾ.ರಾಮಪ್ಪ ಮಾತನಾಡಿದರು. ಉಪಅರಣ್ಯಸಂರಕ್ಷ ಣಾಧಿಕಾರಿ ಮೋಹನ್‌ ಕುಮಾರ್‌, ಸಾಮಾಜಿಕ ಅರಣ್ಯಾಧಿಕಾರಿ ನೂತನ್‌ಕುಮಾರ್‌, ವಲಯ ಅರಣ್ಯಾಧಿಕಾರಿ ಎಂ.ರಾಘವೇಂದ್ರ, ತಾಲೂಕು ಪಂಚಾಯಿತಿ ಸದಸ್ಯರಾದ ಕಲಸೆ ಚಂದ್ರಪ್ಪ, ಅಶೋಕ್‌ ಬರದವಳ್ಳಿ, ಈಡಿಗರ ಸಂಘದ ಕಾರ್ಯದರ್ಶಿ ಪರಶುರಾಮಪ್ಪ, ಕರುಣಾಕರ್‌, ರವಿಕುಮಾರ್‌ , ಗಿರೀಶ್‌ ಕೋವಿ, ಎನ್‌.ದಿವಾಕರ್‌, ತಾರಾಮೂರ್ತಿ ಇತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ