ಆ್ಯಪ್ನಗರ

ಬೀದಿ ದೀಪ ನಿರ್ವಹಣೆಗೆ ಸೂಚನೆ

ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಎಲ್‌ಇಡಿ ಬೀದಿ ದೀಪಗಳ ನಿರ್ವಹಣೆಗೆ ಪಾಲಿಕೆ ಆಯುಕ್ತೆ ಚಾರುಲತಾ ಸೋಮಲ್‌ ಸೂಚನೆ ನೀಡಿದರು.

Vijaya Karnataka 7 Dec 2018, 5:00 am
ಶಿವಮೊಗ್ಗ: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಎಲ್‌ಇಡಿ ಬೀದಿ ದೀಪಗಳ ನಿರ್ವಹಣೆಗೆ ಪಾಲಿಕೆ ಆಯುಕ್ತೆ ಚಾರುಲತಾ ಸೋಮಲ್‌ ಸೂಚನೆ ನೀಡಿದರು.
Vijaya Karnataka Web instruction to maintain street light
ಬೀದಿ ದೀಪ ನಿರ್ವಹಣೆಗೆ ಸೂಚನೆ


ಇಲ್ಲಿನ ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಗುರುವಾರ ನಡೆದ 'ಮಹಾನಗರ ಪಾಲಿಕೆ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ'ಯಲ್ಲಿ ಮಾತನಾಡಿದ ಅವರು, ಎಲ್‌ಇಡಿ ಬೀದಿ ದೀಪಗಳ ನಿರ್ವಹಣೆ ಸಂಬಂಧ ಸಮಸ್ಯೆಯಾಗುತ್ತಿರುವ ಬಗ್ಗೆ ಉಪ ಮೇಯರ್‌ ಚನ್ನಬಸಪ್ಪ ಅವರು ಸಭೆಯ ಗಮನಕ್ಕೆ ತಂದಿದ್ದಾರೆ. ಪಾಲಿಕೆಯ ಅಧಿಕಾರಿಗಳು ಇದರ ಬಗ್ಗೆ ಗಮನ ಹರಿಸಬೇಕೆಂದು ತಾಕೀತು ಮಾಡಿದರು.

ನಿರ್ವಹಣೆಯ ಜವಾಬ್ದಾರಿ ಬೆಂಗಳೂರು ಮೂಲದ ಗುತ್ತಿಗೆದಾರರದ್ದಾಗಿದ್ದು, ಅವರಿಗೆ ಈ ಕುರಿತು ತಿಳಿಸಲಾಗಿದೆ. ನೋಟಿಸ್‌ ಕೂಡ ನೀಡಲಾಗಿದೆ. ಇವೆಲ್ಲವುಗಳ ಮಧ್ಯೆ ಸಾರ್ವಜನಿಕರು ಕಷ್ಟ ಪಡುವಂತಾಗಿದೆ ಎಂದು ಚನ್ನಬಸಪ್ಪ ಹೇಳಿದರು.

ನಗರದ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಬೇಕು. ಅದಕ್ಕಾಗಿ ಎಲ್ಲ ರಸ್ತೆಗಳ ಕಾಮಗಾರಿಗಳಿಗೆ ಟೆಂಡರ್‌ ಕರೆಯಬೇಕು. ಚುನಾವಣೆಗೂ ಮುನ್ನವೇ ಈ ಕೆಲಸವಾದ್ದಲ್ಲಿ ಅಭಿವೃದ್ಧಿಗೆ ಯಾವುದೇ ರೀತಿಯ ಸಮಸ್ಯೆ ಆಗುವುದಿಲ್ಲ ಎಂಬ ಅಭಿಪ್ರಾಯ ವ್ಯಕ್ತವಾಯಿತು. ಒಂದು ವಾರದಲ್ಲಿ ನಗರದಲ್ಲಿರುವ ಎಲ್ಲ ಟ್ಯಾಂಕ್‌ಗಳಲ್ಲೂ ನೀರು ಲಭ್ಯವಿರುವಂತೆ ಕ್ರಮಕೈಗೊಳ್ಳಬೇಕು. ಯಾವುದೇ ಸಮಸ್ಯೆ ಇದ್ದರೂ ಅದಕ್ಕೆ ಪರಿಹಾರ ಕಂಡುಕೊಳ್ಳಬೇಕು ಎಂದು ಮೇಯರ್‌ ಲತಾಗಣೇಶ್‌ ಹೇಳಿದರು. ಕಂದಾಯ, ಆರೋಗ್ಯ, ಕಾಮಗಾರಿ, ನಲ್ಮ್‌ ಸೇರಿದಂತೆ ಒಟ್ಟು 8 ವಿಷಯಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಮೇಯರ್‌ ಲತಾ ಗಣೇಶ್‌ ಇತರರಿದ್ದರು.

===============

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ