ಆ್ಯಪ್ನಗರ

ಐಟಿಗೆ ಸಿಕ್ಕಿದ್ದು ಅಪ್ಪಾಜಿಗೌಡರ ದುಡ್ಡು

ರಾಜ್ಯದೆಲ್ಲೆಡೆ ಕುತೂಹಲ ಮೂಡಿಸಿದ್ದ ಕಾರಿನ ಸ್ಟೆಪ್ನಿಯಲ್ಲಿ ಐಟಿ ಅಧಿಕಾರಿಗಳು ಪತ್ತೆ ಮಾಡಿದ 2.3 ಕೋಟಿ ರೂ. ಹಣ ಭದ್ರಾವತಿ ಮಾಜಿ ಶಾಸಕ ಎಂ.ಜೆ.ಅಪ್ಪಾಜಿ ಅವರದ್ದು ಎಂಬುದನ್ನು ಐಟಿ ಅಧಿಕಾರಿಗಳು ದೃಢಪಡಿಸಿದ್ದಾರೆ.

Vijaya Karnataka 24 Apr 2019, 5:00 am
ಶಿವಮೊಗ್ಗ : ರಾಜ್ಯದೆಲ್ಲೆಡೆ ಕುತೂಹಲ ಮೂಡಿಸಿದ್ದ ಕಾರಿನ ಸ್ಟೆಪ್ನಿಯಲ್ಲಿ ಐಟಿ ಅಧಿಕಾರಿಗಳು ಪತ್ತೆ ಮಾಡಿದ 2.3 ಕೋಟಿ ರೂ. ಹಣ ಭದ್ರಾವತಿ ಮಾಜಿ ಶಾಸಕ ಎಂ.ಜೆ.ಅಪ್ಪಾಜಿ ಅವರದ್ದು ಎಂಬುದನ್ನು ಐಟಿ ಅಧಿಕಾರಿಗಳು ದೃಢಪಡಿಸಿದ್ದಾರೆ.
Vijaya Karnataka Web it has got the money of appaji gowda
ಐಟಿಗೆ ಸಿಕ್ಕಿದ್ದು ಅಪ್ಪಾಜಿಗೌಡರ ದುಡ್ಡು


ಸ್ಟೆಪ್ನಿಯಲ್ಲಿ ಹಣ ತುಂಬಿಕೊಂಡು ಕಾರಿನಲ್ಲಿ ಸಾಗಿಸುತ್ತಿದ್ದಾಗ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬೆಂಗಳೂರು ನೆಲಮಂಗಲದ ಬಳಿ ಕಾರನ್ನು ಬೆನ್ನಟ್ಟಿ ಹಿಡಿದಿದ್ದರು. ಕಾರು ಚಾಲಕ ಮತ್ತು ಅದರೊಳಗಿದ್ದ ಇತರರನ್ನು ವಿಚಾರಣೆಗೆ ಒಳಪಡಿಸಿದಾಗ ಅಪ್ಪಾಜಿಗೌಡರದ್ದೆಂದು ಒಪ್ಪಿಕೊಂಡಿದ್ದರು.

ಈ ಹಿನ್ನೆಲೆಯಲ್ಲಿ ಆದಾಯ ತೆರಿಗೆ ಇಲಾಖೆಯು ಅಪ್ಪಾಜಿ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ಜಾರಿ ಮಾಡಿತ್ತು. ಅಪ್ಪಾಜಿ ಅವರು ಶಿವಮೊಗ್ಗದಲ್ಲಿರುವ ಐಟಿ ಕಚೇರಿಗೆ ಸೋಮವಾರ ವಿಚಾರಣೆಗೆ ಹಾಜರಾಗಿ ತಮ್ಮ ಹೇಳಿಕೆಗಳನ್ನು ನೀಡಿದ್ದಾರೆ. ಬೆಂಗಳೂರು ಎಚ್‌ಬಿಆರ್‌ ಬಡಾವಣೆಯಲ್ಲಿನ ನಿವೇಶನವನ್ನು 10 ತಿಂಗಳ ಹಿಂದೆ ಮಾರಾಟ ಮಾಡಲಾಗಿತ್ತು. ನಿವೇಶನ ಖರೀದಿಸಿದವರು ತಡವಾಗಿ ನಗದು ರೂಪದಲ್ಲಿ ಕೊಟ್ಟಿದ್ದರಿಂದ ಚುನಾವಣೆ ಕಾರಣಕ್ಕೆ ಸ್ಟೆಪ್ನಿಯಲ್ಲಿ ಇಟ್ಟು ತರಲಾಗುತ್ತಿತ್ತು ಎಂದು ಅಧಿಕಾರಿಗಳ ಬಳಿ ಒಪ್ಪಿಕೊಂಡಿದ್ದಾರೆ ಎಂದು ಗೊತ್ತಾಗಿದೆ.

ನಿವೇಶನ ಮಾರಾಟಕ್ಕೆ ಸಂಬಂಧಿಸಿದ ಪೂರಕ ದಾಖಲೆಗಳನ್ನು ಹಾಜರುಪಡಿಸುವಂತೆ ಐಟಿ ಅಧಿಕಾರಿಗಳು ಸೂಚನೆ ನೀಡಿದ್ದು ಅಪ್ಪಾಜಿಗೌಡರು ಬುಧವಾರ ದಾಖಲೆಗಳನ್ನು ಸಲ್ಲಿಸಲು ಒಪ್ಪಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ