ಆ್ಯಪ್ನಗರ

ಪ್ರಯತ್ನದಿಂದ ಗುರಿ ತಲುಪಲು ಸಾಧ್ಯ

ವಿದ್ಯಾರ್ಥಿಗಳು ಕಲಿಕೆಗೆ ಹೆಚ್ಚು ಒತ್ತು ನೀಡುವುದು ಅವಶ್ಯಕ. ಓದಿನ ಜತೆಗೆ ಪಠ್ಯೇತರ ಚಟುವಟಿಕೆ ಅಳವಡಿಸಿಕೊಳ್ಳುವಂತಾಗಬೇಕೆಂದು ಶಾಸಕ ಬಿ.ಕೆ.ಸಂಗಮೇಶ್ವರ್‌ ಹೇಳಿದರು.

Vijaya Karnataka 6 Jan 2020, 5:00 am
ಭದ್ರಾವತಿ: ವಿದ್ಯಾರ್ಥಿಗಳು ಕಲಿಕೆಗೆ ಹೆಚ್ಚು ಒತ್ತು ನೀಡುವುದು ಅವಶ್ಯಕ. ಓದಿನ ಜತೆಗೆ ಪಠ್ಯೇತರ ಚಟುವಟಿಕೆ ಅಳವಡಿಸಿಕೊಳ್ಳುವಂತಾಗಬೇಕೆಂದು ಶಾಸಕ ಬಿ.ಕೆ.ಸಂಗಮೇಶ್ವರ್‌ ಹೇಳಿದರು.
Vijaya Karnataka Web it is possible to reach the goal with effort
ಪ್ರಯತ್ನದಿಂದ ಗುರಿ ತಲುಪಲು ಸಾಧ್ಯ


ಅವರು ಶನಿವಾರ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನದಡಿ ಹಳೇನಗರದ ಸಂಚಿಯ ಹೊನ್ನಮ್ಮ ಸ್ಮಾರಕ ಸರಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ2019-20 ನೇ ಸಾಲಿನ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರ ಬೆಳೆಸಿಕೊಳ್ಳಬೇಕು. ನಿರಂತರ ಪ್ರಯತ್ನದಿಂದ ಉನ್ನತಗುರಿಮುಟ್ಟಬೇಕು. ಪ್ರತಿಯೊಬ್ಬರು ಛಲ ಹೊಂದಿರುವುದು ಅಗತ್ಯ ಎಂದರು.ಪ್ರೌಢಶಾಲೆ ಉಪ ಪ್ರಾಂಶುಪಾಲರಾದ ಶಾಂತಮ್ಮ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾಸಹಕಾರಿ ಯೂನಿಯನ್‌ ಅಧ್ಯಕ್ಷ ಎಚ್‌.ಎಲ್‌.ಷಡಾಕ್ಷರಿ, ಲಯನ್ಸ್‌ ಸಂಸ್ಥೆಯ ಕೆ.ಸಿ.ವೀರಭದ್ರಪ್ಪ, ಮುಷಾಪೀರ್‌ ಭಾಷಾ ಇತರರು ಮಾತನಾಡಿದರು. ಶಿಕ್ಷಕಿ ಲಕ್ಷಿತ್ರ್ಮೕ ವಾರ್ಷಿಕ ವರದಿ ವಾಚಿಸಿದರು. ಶಾಲಾಭಿವೃದ್ಧಿ ಸಮಿತಿ ಕಾರಾರ‍ಯಧ್ಯಕ್ಷ ಲೋಕೇಶ್‌ ಕುಂಬಾರ್‌, ಸುಜಾತ, ಪ್ರಹ್ಲಾದ್‌ ಆಚಾರ್‌, ಪತ್ರಕರ್ತರಾದ ಅನಂತಕುಮಾರ್‌, ಆರ್‌.ವಿ.ಕೃಷ್ಣ ಇತರರು ಇದ್ದರು. ಇದೇ ಸಂದರ್ಭ ಕಳೆದ 2018-19ನೇ ಸಾಲಿನಲ್ಲಿಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಿ ಪುರಸ್ಕರಿಸಲಾಯಿತು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ‍್ಯಕ್ರಮ ನೆರವೇರಿತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ