ಆ್ಯಪ್ನಗರ

ಮಾರ್ಚ್ 5 ರಂದು ರಾಜ್ಯ ಬಜೆಟ್ : ಈ ಬಾರಿ ರೈತ ಪರ ಆಯವ್ಯಯ ಎಂದ ಬಿಎಸ್‌ವೈ

ಮಾರ್ಚ್ 5 ರಂದು ರಾಜ್ಯ ಬಜೆಟ್‌ ಮಂಡನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು ಬಜೆಟ್ ಮಂಡನೆಗಾಗಿ ಎಲ್ಲಾ ತಯಾರಿಗಳು ನಡೆಯುತ್ತಿದ್ದು ಫೆಬ್ರವರಿ ತಿಂಗಳಲ್ಲಿ ರೂಪುರೇಷೆ ಅಂತಿಮಗೊಳ್ಳಲಿದೆ ಎಂದರು.

Vijaya Karnataka Web 15 Jan 2020, 12:34 pm
ಶಿವಮೊಗ್ಗ: ಮಾರ್ಚ್ ಐದರಂದು ರಾಜ್ಯ ಬಜೆಟ್‌ ಮಂಡನೆ ಮಾಡಲಿದ್ದೇನೆ ಎಂದು ಸಿಎಂ ಬಿಎಸ್‌ ಯಡಿಯೂರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು ಬಜೆಟ್‌ ಮಂಡನೆಗಾಗಿ ಎಲ್ಲಾ ರೀತಿಯ ತಯಾರಿಗಳು ನಡೆಯುತ್ತಿವೆ ಎಂದರು.
Vijaya Karnataka Web karnataka state budget will be on march 5 says bs yeddyurappa
ಮಾರ್ಚ್ 5 ರಂದು ರಾಜ್ಯ ಬಜೆಟ್ : ಈ ಬಾರಿ ರೈತ ಪರ ಆಯವ್ಯಯ ಎಂದ ಬಿಎಸ್‌ವೈ



ಈ ಬಾರಿಯ ಬಜೆಟ್‌ನಲ್ಲಿ ಕೃಷಿಗೆ ಹೆಚ್ಚಿನ ಒತ್ತನ್ನು ನೀಡಲಾಗುವುದು. ಅಲ್ಲದೆ ಪರಿಶಿಷ್ಟ ಜಾತಿ ವರ್ಗ ಹಾಗೂ ಹಿಂದುಳಿದ ವರ್ಗಕ್ಕೆ ಆದ್ಯತೆಯನ್ನು ಬಜೆಟ್‌ನಲ್ಲಿ ನೀಡಲಾಗುವುದು ಎಂದಿದ್ದಾರೆ. ಬಜೆಟ್‌ ಕುರಿತಾಗಿ ಸಮಗ್ರವಾದ ರೂಪುರೇಷೆ ತಯಾರಾಗುತ್ತಿದ್ದು ಫೆಬ್ರವರಿ ಕೊನೆಯಲ್ಲಿ ಒಂದು ರೂಪಕ್ಕೆ ಬರುತ್ತದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.

ಸಂಪುಟ ವಿಸ್ತರಣೆ ವಿಳಂಬ ಕುರಿತಾಗಿ ಮಾತನಾಡಿ, ಸಂಪುಟ ವಿಸ್ತರಣೆಯನ್ನು ಶೀಘ್ರದಲ್ಲೇ ಮಾಡಲಾಗುವುದು ಎಂಬ ಭರವಸೆ ನೀಡಿದ್ದಾರೆ. ಅಮಿತ್ ಶಾ ಅವರು ಜನವರಿ 18 ರಂದು ರಾಜ್ಯಕ್ಕೆ ಆಗಮಿಸಲಿದ್ದು ಅವರ ಜೊತೆಗೆ ಚರ್ಚೆ ನಡೆಸಿ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದರು.

ಸಂಪುಟ ವಿಸ್ತರಣೆ ಮತ್ತಷ್ಟು ವಿಳಂಬ ? ಗೊಂದಲದಲ್ಲಿದ್ದಾರೆ ನೂತನ ಶಾಸಕರು

ಸಂಪುಟ ವಿಸ್ತರಣೆ ವಿಳಂಬ ಆಗುತ್ತಿರುವ ಹಿನ್ನೆಲೆಯಲ್ಲಿ ನೂತನ ಬಿಜೆಪಿ ಶಾಸಕರಲ್ಲೂ ಅಸಮಾಧಾನ ಮನೆಮಾಡಿದ್ದು ಸಿಎಂ ಮೇಲೆ ಒತ್ತಡ ಹೇರುತ್ತಿದ್ದಾರೆ. ಆದರೆ ಕೇಂದ್ರ ನಾಯಕರ ಜೊತೆಗಿನ ಮಾತುಕತೆಗೆ ಬಿಎಸ್‌ವೈಗೆ ಸಮಯ ನೀಡುತ್ತಿಲ್ಲ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಲಿರುವ ಅಮಿತ್ ಶಾ ಜೊತೆಗೆ ಮಾತುಕತೆ ನಡೆಸಿದ ಬಳಿಕ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.

ಇದೇ ವೇಳೆ ರಾಜ್ಯದ ಜನರಿಗೆ ಸಂಕ್ರಾಂತಿ ಹಬ್ಬದ ಶುಭಾಶಯಗಳನ್ನು ಕೋರಿದ ಅವರು ಸಾಮಾನ್ಯವಾಗಿ ಹಬ್ಬದ ದಿನದಂದು ಬೇರೆಲ್ಲೋ ಇರುತ್ತಿದ್ದೆ ಆದರೆ ಇವತ್ತು ಶಿವಮೊಗ್ಗದಲ್ಲಿ ಇದ್ದು ಸಂಕ್ರಾಂತಿ ಹಬ್ಬವನ್ನು ಆಚರಣೆ ಮಾಡುತ್ತಿರುವುದು ಖುಷಿ ತಂದಿದೆ ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ