ಆ್ಯಪ್ನಗರ

‘ಮಕ್ಕಳ ಭವಿಷ್ಯಕ್ಕಾಗಿ ನಿಗಾ ಇಡಿ’

ಶಿಕ್ಷ ಕರ ಶ್ರಮದೊಂದಿಗೆ ಪೋಷಕರು ಕೈಜೋಡಿಸಿದರೆ ಮಕ್ಕಳ ಭವಿಷ್ಯ ಉಜ್ವಲಗೊಳ್ಳಲಿದೆ ಎಂದು ತ್ಯಾಗರ್ತಿ ಗ್ರಾಮಪಂಚಾಯಿತಿ ಸದಸ್ಯರಾದ ಕೆ.ಬಿ.ಗಣಪತಿ ಹೇಳಿದರು.

Vijaya Karnataka 23 Dec 2018, 5:00 am
ತ್ಯಾಗರ್ತಿ: ಶಿಕ್ಷ ಕರ ಶ್ರಮದೊಂದಿಗೆ ಪೋಷಕರು ಕೈಜೋಡಿಸಿದರೆ ಮಕ್ಕಳ ಭವಿಷ್ಯ ಉಜ್ವಲಗೊಳ್ಳಲಿದೆ ಎಂದು ತ್ಯಾಗರ್ತಿ ಗ್ರಾಮಪಂಚಾಯಿತಿ ಸದಸ್ಯರಾದ ಕೆ.ಬಿ.ಗಣಪತಿ ಹೇಳಿದರು.
Vijaya Karnataka Web SMR-21tgt3


ಸಾಗರ ತಾಲೂಕಿನ ತ್ಯಾಗರ್ತಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಏರ್ಪಡಿಸಿದ್ದ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಅವರು ಮಾತನಾಡಿದರು. ಮಕ್ಕಳಲ್ಲಿ ಹಲವು ಪ್ರತಿಭೆಗಳು ಅಡಗಿದೆ. ಪ್ರತಿಭೆಗಳ ಅನಾವರಣಕ್ಕೆ ಇಂತಹ ವೇದಿಕೆ ಸಹಕಾರಿ. ಶಾಲೆಗೆ ಮಕ್ಕಳನ್ನು ಕಳುಹಿಸಿದರೆ ಮಾತ್ರ ವಿದ್ಯಾವಂತರಾಗುತ್ತಾರೆ ಎಂದು ಸುಮ್ಮನಿರಬಾರದು. ಮಕ್ಕಳನ್ನು ಸ್ಪರ್ಧಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಬೇಕೆಂದರು.

ಅಧ್ಯಕ್ಷ ತೆ ವಹಿಸಿದ್ದ ಎಸ್‌ಡಿಎಂಸಿ ಅಧ್ಯಕ್ಷ ಲಕ್ಷ್ಮೀಕಾಂತ್‌ ಮಾತನಾಡಿ, ಪೋಷಕರ ಸಭೆಗಳಿಗೆ ಪಾಲ್ಗೊಂಡು ಮಕ್ಕಳ ಕಾರ‍್ಯಚಟುವಟಿಕೆ ಅಭಿವೃದ್ಧಿಪಡಿಸಲು ಸಲಹೆ, ಸೂಚನೆ ನೀಡಬೇಕೆಂದು ಮನವಿ ಮಾಡಿದರು. ವಿದ್ಯೆ ಯಾರೂ ಕದಿಯಲಾಗದು ಎಂದು ರಕ್ಷ ಣಾ ವೇದಿಕೆಯ ಗೋಪಿನಾಥ್‌ ಹೇಳಿದರು. ತ್ಯಾಗರ್ತಿ ವ್ಯವಸಾಯ ಸೇವಾ ಸಹಕಾರ ಸಂಘದ ಮಾಜಿ ಅಧ್ಯಕ್ಷ ರಾದ ಎನ್‌.ಶ್ರೀಧರಮೂರ್ತಿ ಅವರನ್ನು ಸನ್ಮಾನಿಸಲಾಯಿತು. ತ್ಯಾಗರ್ತಿ ಗ್ರಾ.ಪಂ.ಅಧ್ಯಕ್ಷ ರೇವಪ್ಪ ದೀಪ ಬೆಳಗಿಸಿ ಕಾರ‍್ಯಕ್ರಮ ಉದ್ಘಾಟಿಸಿದರು. ಗ್ರಾ.ಪಂ.ಉಪಾಧ್ಯಕ್ಷ ರಾದ ಲೀಲಾವತಿ, ಸದಸ್ಯ ಗಿರೀಶ್‌, ಗ್ರಾ.ಪಂ.ಮಾಜಿ ಅಧ್ಯಕ್ಷ ಸಾಜೀಮ್ಯಾಥ್ಯೂ, ಯುವಜನ ಬಳಗದ ಅಧ್ಯಕ್ಷ ಇಸಾಕ್‌, ಎಸ್‌ಡಿಎಂಸಿ ಸದಸ್ಯರಾದ ಸವಿತಾ, ಭಾರತಿ, ಶಾಲೆ ಮುಖ್ಯ ಶಿಕ್ಷ ಕರು ಹಾಗೂ ಸಹ ಶಿಕ್ಷ ಕರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ