ಆ್ಯಪ್ನಗರ

ನೆರೆ ಪೀಡಿತರಿಗೆ ಕೆಪಿಸಿಸಿ ಸಾಂತ್ವನ

ನಗರದಲ್ಲಿ ಅತಿವೃಷ್ಟಿ ಮತ್ತು ಪ್ರವಾಹದಿಂದ ಹಾನಿಗೊಳಗಾದ ಪ್ರದೇಶಗಳಿಗೆ ರಾಜ್ಯ ಕಾಂಗ್ರೆಸ್‌ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಅವರು ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Vijaya Karnataka 20 Aug 2019, 5:00 am
ಶಿವಮೊಗ್ಗ: ನಗರದಲ್ಲಿ ಅತಿವೃಷ್ಟಿ ಮತ್ತು ಪ್ರವಾಹದಿಂದ ಹಾನಿಗೊಳಗಾದ ಪ್ರದೇಶಗಳಿಗೆ ರಾಜ್ಯ ಕಾಂಗ್ರೆಸ್‌ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಅವರು ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
Vijaya Karnataka Web SMG-1908-2-15-19SMG3


ಬಾಪೂಜಿನಗರ, ರಾಜೀವ್‌ಗಾಂಧಿ ಬಡಾವಣೆ, ಮೆಹಬೂಬ್‌ ನಗರ, ಇಮಾಮ್‌ಬಾಡ, ಕುಂಬಾರಗುಂಡಿ, ಸೀಗೆಹಟ್ಟಿ ಮುಂತಾದ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ನೆಲಸಮವಾದ ಮನೆಗಳನ್ನು ವೀಕ್ಷಿಸಿ ಸಂತ್ರಸ್ತರಿಗೆ ಸಾಂತ್ವನ ಹೇಳಿದರು.

ಇದೇ ಸಂದರ್ಭ ಪಕ್ಷ ಮುಖಂಡರಿಗೆ 'ಸರಕಾರ ಸಂತ್ರಸ್ತರಿಗೆ ಪರಿಹಾರ ಘೋಷಿಸಿದೆ. ಎಲ್ಲ ಸಂತ್ರಸ್ತರಿಗೆ ನೆರವು ಒದಗಿಸುವ ನಿಟ್ಟಿನಲ್ಲಿ ಮುಖಂಡರು ನಿಗಾ ವಹಿಸಬೇಕು. ಅಕಸ್ಮಾತ್‌ ಸಮೀಕ್ಷೆಯಲ್ಲಿ ಸಂತ್ರಸ್ತರ ಹೆಸರು ಕೈಬಿಟ್ಟು ಹೋಗಿದ್ದಲ್ಲಿ ಅಧಿಕಾರಿಗಳ ಗಮನ ಸೆಳೆದು ಹೆಸರು ಸೇರಿಸಬೇಕು. ಯಾವ ಸಂತ್ರಸ್ತರಿಗೂ ವಂಚನೆಯಾಗದಂತೆ ನೋಡಿಕೊಳ್ಳಬೇಕು' ಎಂದು ಸೂಚನೆ ನೀಡಿದರು.

ಇದೇ ಸಂದರ್ಭ ನೆರೆ ಸಂತ್ರಸ್ತರಿಗೆ ಕಾಂಗ್ರೆಸ್‌ ವತಿಯಿಂದ ಆಹಾರ ಸಾಮಗ್ರಿ ಮತ್ತು ಅಗತ್ಯ ಪರಿಕರಗಳನ್ನು ವಿತರಿಸಲಾಯಿತು. ಮೂರು ದಿನಗಳ ಹಿಂದೆ ಸಹ ಏಳೆಂಟು ವಾಹನಗಳಲ್ಲಿ ಆಹಾರ ಸಾಮಗ್ರಿ ಮತ್ತು ಅಗತ್ಯ ಪರಿಕರಗಳನ್ನು ವಿತರಿಸಲಾಗಿತ್ತು. ಆಹಾರ ಸಾಮಗ್ರಿ ತಲುಪದವರಿಗೆ ಸೋಮವಾರ ವಿತರಿಸಲಾಯಿತು.

ಇದಕ್ಕೂ ಮೊದಲು ಅವರು ಪಕ್ಷದ ಜಿಲ್ಲಾ ಕಚೇರಿಯಲ್ಲಿ ಕಾರ್ಯಕರ್ತರ ಸಭೆ ನಡೆಸಿದರು. ಪಕ್ಷದ ಜಿಲ್ಲಾಧ್ಯಕ್ಷ ಎಚ್‌.ಎಸ್‌.ಸುಂದರೇಶ್‌, ವಿಧಾನಪರಿಷತ್‌ ಸದಸ್ಯ ಆರ್‌.ಪ್ರಸನ್ನಕುಮಾರ್‌, ಜೀವ ವೈವಿಧ್ಯಮಂಡಳಿ ಅಧ್ಯಕ್ಷ ಎಸ್‌.ಪಿ.ಶೇಷಾದ್ರಿ, ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್‌, ಜಿಲ್ಲಾ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಅನಿತಾಕುಮಾರಿ, ಮುಖಂಡರಾದ ಎನ್‌.ರಮೇಶ್‌, ಬಿ.ಎ. ರಮೇಶ್‌ ಹೆಗ್ಡೆ ಮತ್ತಿತರರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ