ಆ್ಯಪ್ನಗರ

ಕೆಎಸ್‌ಆರ್‌ಟಿಸಿ ಶಿವಮೊಗ್ಗ ಘಟಕಕ್ಕೆ ಪ್ರಥಮ ಬಹುಮಾನ

ಜಿಲ್ಲಾಡಳಿತವು ನಡೆಸಿದ ಕನ್ನಡ ರಾಜ್ಯೋತ್ಸವದ ಸ್ತಬ್ಧಚಿತ್ರಗಳ ಮೆರವಣಿಗೆಯಲ್ಲಿಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಶಿವಮೊಗ್ಗ ಘಟಕವು ಸತತ 7ನೇ ವರ್ಷ ಪ್ರಥಮ ಬಹುಮಾನಕ್ಕೆ ಪಾತ್ರವಾಯಿತು.

Vijaya Karnataka 2 Nov 2019, 5:00 am
ಶಿವಮೊಗ್ಗ: ಜಿಲ್ಲಾಡಳಿತವು ನಡೆಸಿದ ಕನ್ನಡ ರಾಜ್ಯೋತ್ಸವದ ಸ್ತಬ್ಧಚಿತ್ರಗಳ ಮೆರವಣಿಗೆಯಲ್ಲಿಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಶಿವಮೊಗ್ಗ ಘಟಕವು ಸತತ 7ನೇ ವರ್ಷ ಪ್ರಥಮ ಬಹುಮಾನಕ್ಕೆ ಪಾತ್ರವಾಯಿತು.
Vijaya Karnataka Web 1SMG10080147


ಬಸ್ಸಿನ ಮೇಲೆ ಕನ್ನಡ ನಾಡು, ನುಡಿ, ಸಾಹಿತ್ಯ, ಸಂಸ್ಕೃತಿ, ಶ್ರೀಮಂತಿಕೆಯನ್ನು ಸಾರುವುದರ ಜತೆಗೆ ಸ್ವಚ್ಛತೆ, ಮಾಲಿನ್ಯ ನಿಯಂತ್ರಣ, ಸಂಸ್ಥೆಯಲ್ಲಿಸಾರ್ವಜನಿಕರಿಗೆ ಒದಗಿಸುವ ವಿವಿಧ ಸೌಲಭ್ಯಗಳಾದ ಶಾಲೆ ಮಕ್ಕಳಿಗೆ ಉಚಿತ ಬಸ್‌ಪಾಸ್‌, ಹಿರಿಯನಾಗರಿಕರಿಗೆ ರಿಯಾಯಿತಿ ಸೌಲಭ್ಯ, ಅಪಘಾತ ವಿಮೆ ಇತರೆ ಸೌಲಭ್ಯಗಳ ಬಗ್ಗೆ ಮಾಹಿತಿ ಒದಗಿಸಲಾಗಿತ್ತು.

ಅಷ್ಟೇ ಅಲ್ಲದೆ ಸಂಸ್ಥೆಯ ಸಿಬ್ಬಂದಿ ನಾಡಿನ ಭವ್ಯತೆಯನ್ನು ಮೆರೆದ ಗಣ್ಯರ ವೇಷಗಳನ್ನು ತೊಟ್ಟು ಸಂಭ್ರಮಿಸಿದರು. ಸಂಸ್ಥೆಯ ಕಾರ್ಮಿಕರು ಕನ್ನಡ ಕ್ರಿಯಾ ಸಮಿತಿ ನೇತೃತ್ವದಲ್ಲಿಪ್ರತಿವರ್ಷ ಕನ್ನಡ ರಾಜ್ಯೋತ್ಸವದಂದು ಸ್ತಬ್ಧಚಿತ್ರವನ್ನು ಪ್ರದರ್ಶಿಸುತ್ತಾ ಬಂದಿದ್ದಾರೆ. ವಿಶೇಷವೆಂದರೆ ಸ್ತಬ್ಧಚಿತ್ರಗಳ ಮೆರವಣಿಗೆ ಆರಂಭವಾದ ವರ್ಷದಿಂದ ನಿರಂತರವಾಗಿ ಪ್ರಥಮ ಬಹುಮಾನ ಪಡೆದುಕೊಂಡಿದ್ದಾರೆ.

ರಾಜ್ಯೋತ್ಸವದಲ್ಲಿಇಡೀ ಘಟಕದ ಅಧಿಕಾರಿಗಳು ಮತ್ತು ಸಿಬ್ಬಂದಿ ಶ್ರಮ ವಹಿಸಿ ಕೆಲಸ ಮಾಡುತ್ತಾ ಬಂದಿರುವುದರಿಂದ ಇದು ಸಾಧ್ಯವಾಗಿದೆ ಎನ್ನುತ್ತಾರೆ ಕನ್ನಡ ಕ್ರಿಯಾ ಸಮಿತಿ ಮುಖಂಡರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ