ಆ್ಯಪ್ನಗರ

ಪರಿಶಿಷ್ಟ ಪಂಗಡಕ್ಕೆ ಕುರುಬ ಸಮಾಜ ಸೇರಿಸಲು ಹೋರಾಟ: ರಾಜ್ಯಾದ್ಯಂತ 5 ಸಮಾವೇಶ ನಡೆಸುತ್ತೇವೆ ಎಂದ ಈಶ್ವರಪ್ಪ

ಶಿವಮೊಗ್ಗ ಜಿಲ್ಲೆಯ ವಿವಿಧ ತಾಲೂಕುಗಳ ಚುನಾಯಿತ ಜನಪ್ರತಿನಿಧಿಗಳು, ಸಮಾಜದ ಪ್ರಮುಖ ಮುಖಂಡರ ಸಭೆಯಲ್ಲಿ ಹೋರಾಟ ಸಮಿತಿಯ ಖಂಚಾಚಿ ಕೆ.ಇ.ಕಾಂತೇಶ್ ಹೋರಾಟದ ರೂಪುರೇಷೆ ವಿವರಿಸಿದರು. ಅದಕ್ಕಾಗಿ ಜಿಲ್ಲೆಯಲ್ಲೂ ಶೀಘ್ರ ಹೋರಾಟ ಸಮಿತಿ ರಚಿಸಬೇಕು ಎಂದು ಮುಖಂಡರು ಸಲಹೆ ನೀಡಿದರು.

Vijaya Karnataka Web 29 Oct 2020, 6:39 pm
ಶಿವಮೊಗ್ಗ: ಕುರುಬ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಐವರು ಶ್ರೀಗಳ ಸಾನ್ನಿಧ್ಯದಲ್ಲಿ ರಾಜ್ಯಾದ್ಯಂತ ಐದು ಸಮಾವೇಶ ನಡೆಸಲಾಗುವುದು ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
Vijaya Karnataka Web ಕೆಎಸ್ ಈಶ್ವರಪ್ಪ
ಕೆಎಸ್ ಈಶ್ವರಪ್ಪ


ನಗರದ ಬಾಲರಾಜ್ ಅರಸ್ ರಸ್ತೆಯಲ್ಲಿ ಕುರುಬರ ಹಾಸ್ಟೆಲ್‌ನಲ್ಲಿ ಗುರುವಾರ ಹಮ್ಮಿಕೊಂಡಿದ್ದ ಜಿಲ್ಲೆಯ ಕುರುಬ ಸಮಾಜದ ಮುಖಂಡರ ಸಭೆಯಲ್ಲಿ ಕೆಎಸ್‌ ಈಶ್ವರಪ್ಪ ಮಾತನಾಡಿದರು.

ಮುಂದಿನ ಮೂರು ತಿಂಗಳ ಹೋರಾಟದ ರೂಪುರೇಷೆ ಸಿದ್ಧಪಡಿಸಲಾಗುವುದು ಎಂದರು.

ಕಾಗಿನೆಲೆಯಲ್ಲಿ ನ.8ರಂದು ಸಮಾಜದ ಮಹಿಳಾ ಸಮಾವೇಶ ನಡೆಯಲಿದೆ. ಮಹಿಳಾ ಸಮಾವೇಶಕ್ಕೆ ಜಿಲ್ಲೆಯಿಂದ 20 ಬಸ್‌ಗಳಲ್ಲಿ ಮಹಿಳೆಯರು ತೆರಳಲಿದ್ದಾರೆ. ಜನವರಿ 3 ರಂದು ಚಿತ್ರದುರ್ಗ, ಹಾವೇರಿ, ಶಿವಮೊಗ್ಗ ಜಿಲ್ಲೆಗಳನ್ನು ಒಳಗೊಂಡ 7 ಜಿಲ್ಲೆಗಳ ಸಮಾವೇಶ ದಾವಣಗೆರೆಯಲ್ಲಿ ಹಮ್ಮಿಕೊಳ್ಳುವ ಯೋಚನೆ ಇದೆ ಎಂದರು.

ಐವರು ಶ್ರೀಗಳ ಮಾರ್ಗದರ್ಶನ

ಕುರುಬ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡಲು ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳಲಾಗಿದೆ. ಎಲ್ಲ ಜಿಲ್ಲೆಗಳ ಮುಖಂಡರ ಅಭಿಪ್ರಾಯ ಸಂಗ್ರಹಿಸಲಾಗಿದೆ. ಐವರು ಶ್ರೀಗಳ ಮಾರ್ಗದರ್ಶನದಲ್ಲಿ ಸಮಾವೇಶ ನಡೆಯಲಿದೆ ಎಂದು ತಿಳಿಸಿದರು.

ಜಿಲ್ಲೆಯ ವಿವಿಧ ತಾಲೂಕುಗಳ ಚುನಾಯಿತ ಜನಪ್ರತಿನಿಧಿಗಳು, ಸಮಾಜದ ಪ್ರಮುಖ ಮುಖಂಡರ ಸಭೆಯಲ್ಲಿ ಹೋರಾಟ ಸಮಿತಿಯ ಖಂಚಾಚಿ ಕೆ.ಇ.ಕಾಂತೇಶ್ ಹೋರಾಟದ ರೂಪುರೇಷೆ ವಿವರಿಸಿದರು.

ಹೋರಾಟ ಸಮಿತಿ ರಚಿಸಲು ಸಲಹೆ

ಕುರುಬ ಸಮಾಜಕ್ಕೆ ಆರ್ಥಿಕ, ರಾಜಕೀಯ ಮತ್ತು ಶೈಕ್ಷಣಿಕವಾಗಿ ಅನುಕೂಲವಾಗಬೇಕಾದರೆ ಪರಿಶಿಷ್ಟ ಪಂಗಡಕ್ಕೆ ಸೇರಲೇಬೇಕು. ಅದಕ್ಕಾಗಿ, ಹೋರಾಟ ಅನಿವಾರ್ಯ. ಎಲ್ಲ ಸಮಾಜದವರು ಬಂಧುಗಳು ಒಟ್ಟಾಗಿ ಮುಂದಿನ ಹೋರಾಟದ ರೂಪುರೇಷೆಗಳನ್ನು ರೂಪಿಸಬೇಕು. ಅದಕ್ಕಾಗಿ ಜಿಲ್ಲೆಯಲ್ಲೂ ಶೀಘ್ರ ಹೋರಾಟ ಸಮಿತಿ ರಚಿಸಬೇಕು ಎಂದು ಮುಖಂಡರು ಸಲಹೆ ನೀಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ