ಆ್ಯಪ್ನಗರ

ಕುವೆಂಪು ವಿವಿ ದೂರಶಿಕ್ಷಣ ಮುಂದುವರಿಕೆಗೆ ನಿಯೋಗ ಮನವಿ

ಕುವೆಂಪು ವಿಶ್ವವಿದ್ಯಾಲಯವು ತನ್ನ ದೂರಶಿಕ್ಷಣವನ್ನು ಮುಂದುವರಿಸಲು ಅನುಮತಿ ದೊರಕಿಸಿಕೊಡಬೇಕೆಂದು ನಿಯೋಗ ಮಾಡಿಕೊಂಡ ಮನವಿಗೆ ಸಂಸದ ಬಿ.ವೈ.ರಾಘವೇಂದ್ರ ಮತ್ತು ಕೆ.ಎಸ್‌.ಈಶ್ವರಪ್ಪ ಸ್ಪಂದಿಸಿದ್ದಾರೆ.

Vijaya Karnataka Web 15 Jul 2020, 5:29 pm
ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯವು ತನ್ನ ದೂರಶಿಕ್ಷಣವನ್ನು ಮುಂದುವರಿಸಲು ಅನುಮತಿ ದೊರಕಿಸಿಕೊಡಬೇಕೆಂದು ನಿಯೋಗ ಮಾಡಿಕೊಂಡ ಮನವಿಗೆ ಸಂಸದ ಬಿ.ವೈ.ರಾಘವೇಂದ್ರ ಮತ್ತು ಜಿಲ್ಲಾಉಸ್ತುವಾರಿ ಸಚಿವ ಕೆ.ಎಸ್‌.ಈಶ್ವರಪ್ಪ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.
Vijaya Karnataka Web kuvempu university


ಪ್ರತ್ಯೇಕವಾಗಿ ತಮ್ಮನ್ನು ಭೇಟಿ ಮಾಡಿದ ಕುವೆಂಪು ವಿವಿ ಕುಲಪತಿ ಪ್ರೊ.ಬಿ.ಪಿ.ವೀರಭದ್ರಪ್ಪ ನೇತೃತ್ವದ ನಿಯೋಗದ ಮನವಿಗೆ ಸ್ಪಂದಿಸಿದ ಅವರಿಬ್ಬರು ಮುಖ್ಯಮಂತ್ರಿ ಮತ್ತು ಉನ್ನತ ಶಿಕ್ಷಣ ಸಚಿವರ ಬಳಿ ಚರ್ಚಿಸಿ ಸಕಾರಾತ್ಮಕ ನಿರ್ಧಾರ ತಳೆಯಲು ಯತ್ನಿಸುವುದಾಗಿ ಭರವಸೆ ನೀಡಿದರು. ವಿವಿಯ ದೂರಶಿಕ್ಷಣವು ಸಾವಿರಾರು ಉನ್ನತ ಶಿಕ್ಷಣದ ಆಕಾಂಕ್ಷಿಗಳಿಗೆ ಭರವಸೆಯಾಗಿ ಕಾರ್ಯನಿರ್ವಸುತ್ತಿತ್ತು. ಇತ್ತೀಚೆಗೆ ನಡೆದ ಸಚಿವ ಸಂಪುಟದ ಸಭೆಯಲ್ಲಿಕರ್ನಾಟಕದ ಸಾಂಪ್ರದಾಯಿಕ ವಿಶ್ವವಿದ್ಯಾಲಯಗಳು ದೂರಶಿಕ್ಷಣದ ಮೂಲಕ ನಡೆಸುತ್ತಿರುವ ಕೋರ್ಸುಗಳಿಗೆ ಅನುಮತಿ ರದ್ದುಗೊಳಿಸಿ, ಕರ್ನಾಟಕ ರಾಜ್ಯ ಮುಕ್ತ ವಿಶ್ವದ್ಯಾಲಯ ಮಾತ್ರ ದೂರಶಿಕ್ಷಣ ನೀಡಲು ಅವಕಾಶ ಕಲ್ಪಿಸುವುದಾಗಿ ಕೈಗೊಂಡಿರುವ ನಿರ್ಧಾರವನ್ನು ಹಿಂಪಡೆದು ದೂರಶಿಕ್ಷಣ ಮುಂದುವರಿಸಲು ಅನುಮತಿ ನೀಡಬೇಕೆಂದು ಮನವಿ ಸಲ್ಲಿಸಲಾಗಿದೆ.

ಕುಲಸಚಿವ ಪೊ›.ಎಸ್‌.ಎಸ್‌.ಪಾಟೀಲ್‌, ಪರೀಕ್ಷಾಂಗ ಕುಲಸಚಿವ ಪೊ›.ವೆಂಕಟೇಶ್ವರುಲು, ದೂರಶಿಕ್ಷಣ ನಿರ್ದೇಶನಾಲಯದ ನಿರ್ದೇಶಕ ಡಾ.ಜೆ.ನಾರಾಯಣ್‌, ಸಿಂಡಿಕೇಟ್‌ ಸದಸ್ಯರಾದ ಬಳ್ಳೆಕೆರೆ ಸಂತೋಷ್‌, ಎಚ್‌.ಬಿ.ರಮೇಶ್‌ ಬಾಬು, ಧರ್ಮಪ್ರಸಾದ್‌, ರಾಮಲಿಂಗಪ್ಪ, ಎಸ್‌.ಆರ್‌.ನಾಗರಾಜ್‌, ಡಾ.ಕಿರಣ್‌ ದೇಸಾಯಿ ಮತ್ತಿತರರು ಉಪಸ್ಥಿತರಿದ್ದರು.

ಕುವೆಂಪು ವಿವಿಯು ದೂರಶಿಕ್ಷಣವನ್ನು ಮುಂದುವರೆಸಲು ಅನುಮತಿ ದೊರಕಿಸಿಕೊಡಬೇಕೆಂದು ವಿವಿ ಕುಲಪತಿ ಪ್ರೊ.ಬಿ.ಪಿ.ವೀರಭದ್ರಪ್ಪ ನೇತೃತ್ವದ ನಿಯೋಗವು ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಅವರನ್ನು ಬುಧವಾರ ಭೇಟಿ ಮಾಡಿ ಮನವಿ ಮಾಡಿಕೊಂಡಿತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ