ಆ್ಯಪ್ನಗರ

ಭೂ ಮಂಜೂರಾತಿಯಲ್ಲಿ ಅಕ್ರಮ: ಮೂವರು ಅಮಾನತು

ಬಗರ್‌ಹುಕುಂ ಸಾಗುವಳಿ ಭೂಮಿ ಮಂಜೂರಾತಿಯಲ್ಲಿ ನಿಯಮಮೀರಿ ಕರ್ತವ್ಯ ಲೋಪ ಎಸಗಿದ ಆಪಾದನೆ ಮೇಲೆ ಮೂವರು ಗುಮಾಸ್ತರನ್ನು ಸೇವೆಯಿಂದ ಅಮಾನತುಗೊಳಿಸಿ ಜಿಲ್ಲಾಧಿಕಾರಿ ಕೆ.ಎ.ದಯಾನಂದ್‌ ಅವರು ಬುಧವಾರ ಆದೇಶ ಹೊರಡಿಸಿದ್ದಾರೆ.

Vijaya Karnataka 31 May 2019, 5:00 am
ಶಿವಮೊಗ್ಗ : ಬಗರ್‌ಹುಕುಂ ಸಾಗುವಳಿ ಭೂಮಿ ಮಂಜೂರಾತಿಯಲ್ಲಿ ನಿಯಮಮೀರಿ ಕರ್ತವ್ಯ ಲೋಪ ಎಸಗಿದ ಆಪಾದನೆ ಮೇಲೆ ಮೂವರು ಗುಮಾಸ್ತರನ್ನು ಸೇವೆಯಿಂದ ಅಮಾನತುಗೊಳಿಸಿ ಜಿಲ್ಲಾಧಿಕಾರಿ ಕೆ.ಎ.ದಯಾನಂದ್‌ ಅವರು ಬುಧವಾರ ಆದೇಶ ಹೊರಡಿಸಿದ್ದಾರೆ.
Vijaya Karnataka Web land acquisition three suspended
ಭೂ ಮಂಜೂರಾತಿಯಲ್ಲಿ ಅಕ್ರಮ: ಮೂವರು ಅಮಾನತು


ಶಿಕಾರಿಪುರ ತಾಲೂಕು ಕಚೇರಿಯ ಆಶಾ, ಸೊರಬ ತಾಲೂಕು ಕಚೇರಿಯ ಮೀನಾಕ್ಷಿ ಮತ್ತು ತೀರ್ಥಹಳ್ಳಿ ತಾಲೂಕು ಕಚೇರಿಯ ಜಗದೀಶ್‌ ಅಮಾನತುಗೊಂಡವರು. ಇವರು ಈ ಹಿಂದೆ ಭದ್ರಾವತಿ ತಾಲೂಕು ಕಚೇರಿಯಲ್ಲಿ ಕಾರ್ಯನಿರ್ವಹಿಸುವಾಗ ಬಗರ್‌ಹುಕುಂ ಸಾಗುವಳಿ ಭೂಮಿ, 94ಸಿ ಮತ್ತು 94ಸಿಸಿ ಮಂಜೂರಾತಿಯಲ್ಲಿ ನಿಯಮಗಳನ್ನು ಗಾಳಿಗೆ ತೂರಿ ಅಕ್ರಮ ಎಸಗಿದ್ದರು ಎನ್ನಲಾಗಿದೆ. ಸಾರ್ವಜನಿಕರ ದೂರು ಹಿನ್ನೆಲೆಯಲ್ಲಿ ಈ ಹಿಂದಿನ ಉಪ ವಿಭಾಗಾಧಿಕಾರಿಗಳು ತನಿಖೆ ನಡೆಸಿ ನೋಟಿಸ್‌ ಜಾರಿಗೊಳಿಸಿದ್ದರು. ಅದಾದ ಬಳಿಕವೂ ಅದೇ ರೀತಿಯ ಪ್ರಕರಣಗಳು ಮರುಕಳಿಸಿದ ಹಿನ್ನೆಲೆಯಲ್ಲಿ ಅಮಾನತುಗೊಳಿಸುವಂತೆ ಡಿಸಿಗೆ ಶಿಫಾರಸು ಮಾಡಿದ್ದರು. ಉಪ ವಿಭಾಗಾಧಿಕಾರಿಯವರ ವರದಿ ಅನ್ವಯ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ