ಆ್ಯಪ್ನಗರ

ಎನ್‌ಪಿಎಸ್‌ ವಿರೋಧಿಸಿ ಬೃಹತ್‌ ಪಾದಯಾತ್ರೆ

ನೂತನ ಪಿಂಚಣಿ ಯೋಜನೆ ಕೈಬಿಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸರಕಾರಿ ಎನ್‌ಪಿಎಸ್‌ ನೌಕರರ ಸಂಘದಿಂದ ಡಿ.12ರಂದು ಬೆಳಗ್ಗೆ 8.30ಕ್ಕೆ ಬೆಳಗಾವಿ ಚಲೋ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಕೆ.ಎನ್‌.ರಾಘವೇಂದ್ರ ಹೇಳಿದರು.

Vijaya Karnataka 9 Dec 2018, 5:00 am
ಶಿವಮೊಗ್ಗ: ನೂತನ ಪಿಂಚಣಿ ಯೋಜನೆ ಕೈಬಿಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸರಕಾರಿ ಎನ್‌ಪಿಎಸ್‌ ನೌಕರರ ಸಂಘದಿಂದ ಡಿ.12ರಂದು ಬೆಳಗ್ಗೆ 8.30ಕ್ಕೆ ಬೆಳಗಾವಿ ಚಲೋ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಕೆ.ಎನ್‌.ರಾಘವೇಂದ್ರ ಹೇಳಿದರು.
Vijaya Karnataka Web large marchfast against nps
ಎನ್‌ಪಿಎಸ್‌ ವಿರೋಧಿಸಿ ಬೃಹತ್‌ ಪಾದಯಾತ್ರೆ


ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಎನ್‌ಪಿಎಸ್‌ ಜಾರಿಯಿಂದ ಹೊಸದಾಗಿ ಸರಕಾರಿ ನೌಕರರಿಗೆ ಸೇರಿದವರಿಗೆ ಪಿಂಚಣಿ ಇಲ್ಲವಾಗಿದೆ. ರಾಜ್ಯ ಸರಕಾರಿ ನೌಕರರಿಗೆ ನಿಗದಿತ ಪಿಂಚಣಿ ರದ್ದು ಪಡಿಸಿ ಅದರ ಬದಲು ನೂತನ ಪಿಂಚಣಿ ಯೋಜನೆ ಎಂಬ ವಂತಿಗೆ ಆಧಾರಿತ ಪಿಂಚಣಿ ಯೋಜನೆ ಜಾರಿಗೆ ತರಲಾಗಿದೆ. ಇದರಿಂದ ಅನೇಕ ಸಮಸ್ಯೆಗಳು ಉಂಟಾಗಿದೆ ಎಂದು ದೂರಿದರು. ಅವೈಜ್ಞಾನಿಕವಾಗಿರುವ ಈ ಯೋಜನೆ ಕೈಬಿಡುವಂತೆ ಒತ್ತಾಯಿಸಿ ಹಿರೆಬಾಗವಾಡಿಯ ಬಸವೇಶ್ವರ ವೃತ್ತದಿಂದ ಬೆಳಗಾವಿ ಸುವರ್ಣ ಸೌಧದವರೆಗೆ ಒತ್ತಾಯಿಸಿ ಜಿಲ್ಲಾ ಮತ್ತು ತಾಲೂಕು ಘಟಕಗಳ ಸಹಯೋಗದಲ್ಲಿ ಬೃಹತ್‌ ಪಾದಯಾತ್ರೆ ಹಾಗೂ ಅಹೋರಾತ್ರಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದರು. ಗೋಷ್ಠಿಯಲ್ಲಿ ಪ್ರಮುಖರಾದ, ಎಸ್‌.ಪ್ರಭಾಕರ್‌, ಕೃಷ್ಣಮೂರ್ತಿ, ನಾಗರಾಜ್‌ ಪರಿಸರ ಮತ್ತಿತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ