ಆ್ಯಪ್ನಗರ

ಪಶ್ಚಿಮಘಟ್ಟ ವ್ಯಾಪ್ತಿಯಲ್ಲಿ ಜೋರು ಮಳೆ

ವಾಯುಭಾರ ಕುಸಿತದ ಪರಿಣಾಮವಾಗಿ ತಡವಾಗಿಯಾದರೂ ಮಲೆನಾಡು ಮಳೆ ಕಾಣುವಂತಾಗಿದೆ.

Vijaya Karnataka 14 Jun 2019, 5:00 am
ಶಿವಮೊಗ್ಗ: ವಾಯುಭಾರ ಕುಸಿತದ ಪರಿಣಾಮವಾಗಿ ತಡವಾಗಿಯಾದರೂ ಮಲೆನಾಡು ಮಳೆ ಕಾಣುವಂತಾಗಿದೆ.
Vijaya Karnataka Web SMG-1306-2-15-13SMG5


ಪಶ್ಚಿಮಘಟ್ಟಗಳ ಸಾಲಿನಲ್ಲಿ ಬರುವ ಹೊಸನಗರ ಮತ್ತು ಸಾಗರ ತಾಲೂಕಿನಲ್ಲಿ ಎರಡು ದಿನಗಳಿಂದ ಮಳೆ ಸುರಿಯುತ್ತಿದೆ. ಅದರಲ್ಲೂ ಯಡೂರು, ಮಾಸ್ತಿಕಟ್ಟೆ, ಹುಲಿಕಲ್‌ ಪ್ರದೇಶದಲ್ಲಿ ಗುರುವಾರ ಧಾರಾಕಾರ ಮಳೆ ಸುರಿಯಿತು. ತೀರ್ಥಹಳ್ಳಿ, ಶಿಕಾರಿಪುರ ಮತ್ತು ಸೊರಬ ತಾಲೂಕಿನಲ್ಲಿ ಮಳೆ ಸಾಧಾರಣವಾಗಿದೆ. ಆದರೆ, ಅರೆ ಮಲೆನಾಡು ಪ್ರದೇಶವಾದ ಶಿವಮೊಗ್ಗ ಮತ್ತು ಭದ್ರಾವತಿಯಲ್ಲಿ ಮಳೆ ಬದಲಾಗಿ ಜೋರಾಗಿ ಗಾಳಿ ಬೀಸುತ್ತಿದೆ.

ಪಶ್ಚಿಮಘಟ್ಟದಲ್ಲಿ ಮಳೆಯಾಗುತ್ತಿರುವುದರಿಂದ ಲಿಂಗನಮಕ್ಕಿ, ವರಾಹಿ, ಚಕ್ರಾ, ಸಾವೇಹಕ್ಲು ಜಲಾಶಯಗಳಿಗೆ ಒಳಹರಿವು ಆರಂಭವಾಗಿದೆಯಾದರೂ ತುಂಗಾ ಮತ್ತು ಭದ್ರಾ ಜಲಾಶಯಗಳಿಗೆ ಇನ್ನೂ ಹೊಸ ನೀರು ಬಂದಿಲ್ಲ.

ಮಾಹಿತಿ ಪ್ರಕಾರ ಗುರುವಾರ ಬೆಳಗ್ಗೆ 8ಗಂಟೆಗೆ ಅಂತ್ಯವಾದಂತೆ ಕಳೆದ 24 ಗಂಟೆಗಳಲ್ಲಿ ಹುಲಿಕಲ್‌ನಲ್ಲಿ ಅತಿಹೆಚ್ಚು 69 ಮಿ.ಮೀ. ಮಳೆಯಾಗಿದೆ. ಮಾಣಿಯಲ್ಲಿ 60 ಮಿ.ಮೀ., ಸಾಗರದಲ್ಲಿ 51.9, ಹೊಸನಗರದಲ್ಲಿ 35.7, ತೀರ್ಥಹಳ್ಳಿಯಲ್ಲಿ 17.6, ಸೊರಬದಲ್ಲಿ 16.5, ಶಿಕಾರಿಪುರದಲ್ಲಿ 9.4, ಶಿವಮೊಗ್ಗ ಮತ್ತು ಭದ್ರಾವತಿಯಲ್ಲಿ ತಲಾ 3 ಮಿ.ಮೀ. ಮಳೆಯಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ