ಆ್ಯಪ್ನಗರ

ಮೈತ್ರಿ ಅಭ್ಯರ್ಥಿ ಗೆಲ್ಲಿಸಿ ಋುಣ ತೀರಿಸಿ: ತಲ್ಲೂರು

ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಮೈತ್ರಿ ಸರಕಾರದ ಕೊಡುಗೆಗಳನ್ನು ಜನರ ಮನೆಬಾಗಿಲಿಗೆ ತಲುಪಿಸಿ ಮಧು ಬಂಗಾರಪ್ಪ ಅವರನ್ನು 1 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಲಾಗುವುದು ಎಂದು ಕಾಂಗ್ರೆಸ್‌ ಮುಖಂಡ ರಾಜು ಎಂ.ತಲ್ಲೂರು ಹೇಳಿದರು.

Vijaya Karnataka 10 Apr 2019, 5:00 am
ಸೊರಬ: ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಮೈತ್ರಿ ಸರಕಾರದ ಕೊಡುಗೆಗಳನ್ನು ಜನರ ಮನೆಬಾಗಿಲಿಗೆ ತಲುಪಿಸಿ ಮಧು ಬಂಗಾರಪ್ಪ ಅವರನ್ನು 1 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಲಾಗುವುದು ಎಂದು ಕಾಂಗ್ರೆಸ್‌ ಮುಖಂಡ ರಾಜು ಎಂ.ತಲ್ಲೂರು ಹೇಳಿದರು.
Vijaya Karnataka Web let alliance candidate win thallur
ಮೈತ್ರಿ ಅಭ್ಯರ್ಥಿ ಗೆಲ್ಲಿಸಿ ಋುಣ ತೀರಿಸಿ: ತಲ್ಲೂರು


ಪಟ್ಟಣದ ಕಾಂಗ್ರೆಸ್‌ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಾವುದೇ ಜಾತಿ, ಮತ, ಧರ್ಮ ಭೇದ ಮಾಡದೆ ಎಲ್ಲ ವರ್ಗದವರಿಗೂ ತಲುಪುವಂತಹ ಯೋಜನೆಗಳನ್ನು ಜಾರಿಗೊಳಿಸಿ ರಾಜ್ಯದ ಪ್ರಗತಿಗೆ ಮುನ್ನಡಿ ಬರೆದರು. ಹಾಗೆಯೇ ಇಂದು ಮೈತ್ರಿ ಸರಕಾರ ಕೂಡ ರೈತರ ಸಾಲ ಮನ್ನಾ ಹಾಗೂ ರಾಜ್ಯದ ಅಭಿವೃದ್ಧಿಗೆ ಒತ್ತು ನೀಡಿದೆ ಎಂದರು.

ರಾಜ್ಯದಲ್ಲಿ 40 ಲಕ್ಷ ಮಡಿವಾಳ ಸಮಾಜದ ಜನರಿದ್ದು, ಕಾಂಗ್ರೆಸ್‌ ಪಕ್ಷ ಸಮಾಜಕ್ಕೆ ಟಿಕೆಟ್‌ ನೀಡಿ ರಾಜಕೀಯವಾಗಿ ಗುರುತಿಸಿದೆ. ಈ ದಿಸೆಯಲ್ಲಿ ಕಾಂಗ್ರೆಸ್‌ ಪಕ್ಷ ದ ಮೇಲೆ ಮಡಿವಾಳ ಸಮಾಜದ ಋುಣವಿದ್ದು, ರಾಜ್ಯದ ಕಾಂಗ್ರೆಸ್‌, ಜೆಡಿಎಸ್‌ ಅಭ್ಯರ್ಥಿಗಳ ಜತೆಗೆ ಜಿಲ್ಲೆಯ ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪ ಅವರನ್ನು ಗೆಲ್ಲಿಸುವ ಮೂಲಕ ಋುಣ ತೀರಿಸಬೇಕಿದೆ ಎಂದರು.

ತಾಲೂಕು ಹಿಂದುಳಿದ ವರ್ಗದ ಅಧ್ಯಕ್ಷ ಅಣ್ಣಪ್ಪ ಹಾಲಘಟ್ಟ, ಪ್ರಧಾನ ಕಾರ್ಯದರ್ಶಿ ಡಿ.ಕೆ.ಹಿರಿಯಣ್ಣ, ಉಪಾಧ್ಯಕ್ಷ ಪುಟ್ಟಪ್ಪ ಪುರದೂರು, ಕಿಸಾನ್‌ ಸೆಲ್‌ ಅಧ್ಯಕ್ಷ ಹುಚ್ಚರಾಯಪ್ಪ ಕುಂದಗಸವಿ, ಅಣ್ಣಪ್ಪ ಬೆನ್ನೂರು, ಬಂಗಾರಪ್ಪ, ಕಾಳಪ್ಪ, ಗುರುಮೂರ್ತಿ, ಸುರೇಶ್‌, ಇರ್ಫಾನ್‌ ಬಾಷಾ ಮತ್ತಿತರರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ