ಆ್ಯಪ್ನಗರ

ವಿದ್ಯಾರ್ಥಿಗಳ ಆರೋಗ್ಯ ರಕ್ಷಣೆಗೆ ಶಿಕ್ಷ ಕರು ನೆರವಾಗಲಿ

ಆರೋಗ್ಯ ಇಲಾಖೆ ಸಿಬ್ಬಂದಿ ಹಾಗು ಅಧಿಕಾರಿಗಳು ಶಾಲಾ ಮಕ್ಕಳಿಗೆ ಆರೋಗ್ಯ ತಪಾಸಣೆಗೆ ಬಂದಾಗ ಶಿಕ್ಷ ಕರು ಸಹಕರಿಸಬೇಕು ಎಂದು ತಹಸೀಲ್ದಾರ್‌ ಸೋಮಶೇಖರ್‌ ಸೂಚಿಸಿದರು.

Vijaya Karnataka 26 Jul 2019, 5:00 am
ಭದ್ರಾವತಿ: ಆರೋಗ್ಯ ಇಲಾಖೆ ಸಿಬ್ಬಂದಿ ಹಾಗು ಅಧಿಕಾರಿಗಳು ಶಾಲಾ ಮಕ್ಕಳಿಗೆ ಆರೋಗ್ಯ ತಪಾಸಣೆಗೆ ಬಂದಾಗ ಶಿಕ್ಷ ಕರು ಸಹಕರಿಸಬೇಕು ಎಂದು ತಹಸೀಲ್ದಾರ್‌ ಸೋಮಶೇಖರ್‌ ಸೂಚಿಸಿದರು.
Vijaya Karnataka Web lets help the students health care
ವಿದ್ಯಾರ್ಥಿಗಳ ಆರೋಗ್ಯ ರಕ್ಷಣೆಗೆ ಶಿಕ್ಷ ಕರು ನೆರವಾಗಲಿ


ಅವರು ಬುಧವಾರ ಮಿನಿ ವಿಧಾನಸೌಧ ಸಭಾಂಗಣದಲ್ಲಿ ತ್ರೈಮಾಸಿಕ ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಮತ್ತು ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮ ಹಾಗೂ ಸಾಂಕ್ರಾಮಿಕ ರೋಗಗಳ ಸಭೆಯಲ್ಲಿ ಮಾತನಾಡಿದರು.

ಸಾಂಕ್ರಾಮಿಕ ರೋಗ ತಡೆಗಟ್ಟಲು ಗುಜರಿ ಅಂಗಡಿಗಳಲ್ಲಿ ಹಾಗೂ ಗ್ಯಾರೇಜ್‌ಗಳಲ್ಲಿನ ಟೈರ್‌ಗಳಲ್ಲಿ ನೀರು ನಿಲ್ಲದಂತೆ ವಿಲೇವಾರಿ ಮಾಡಲು ನಗರಸಭೆಗೆ ತಿಳಿಸಿದ ಅವರು, ಪಾಲನೆ ಉಲ್ಲಂಘನೆ ಮಾಡಿದ ಮಾಲೀಕರಿಗೆ ದಂಡ ಹಾಕಲು ಸೂಚಿಸಿದರು.

ಆರ್‌ಬಿಎಸ್‌ಕೆ ವೈದ್ಯಾಧಿಕಾರಿ ಡಾ.ದತ್ತಾತ್ರೇಯ ಮಾತನಾಡಿ, ತಾಲೂಕಿನ ಎಲ್ಲ ಶಾಲೆಗಳಿಗೆ ವರ್ಷಕ್ಕೆ ಎರಡು ಬಾರಿ ಭೇಟಿ ಮಾಡಿ, ಮಕ್ಕಳಿಗೆ ಆರೋಗ್ಯ ತಪಾಸಣೆ ಮಾಡಲಾಗುತ್ತಿದೆ. ಹೆಚ್ಚಿನ ತೊಂದರೆಗಳು ಕಂಡುಬಂದಲ್ಲಿ ಅಂತವರನ್ನು ಉನ್ನತ ಆಸ್ಪತ್ರೆಗೆ ಕಳುಹಿಸಿಕೊಡಲಾಗುತ್ತಿದೆ. ಎಲ್ಲ ಮಕ್ಕಳ ಹೆಸರು, ತೂಕ, ಎತ್ತರ, ಆರೋಗ್ಯದ ಎಲ್ಲ ಮಾಹಿತಿಯನ್ನು ಆನ್‌ಲೈನ್‌ನಲ್ಲಿ ನಮೂದಿಸಲಾಗುವುದು. ಜತೆಗೆ ಪಿಯುಸಿ ವಿದ್ಯಾರ್ಥಿಗಳಿಗೂ ಸಹ ತಪಾಸಣೆ ಮಾಡಿ ಆನ್‌ ಲೈನ್‌ನಲ್ಲಿ ನಮೂದಿಸಲಾಗುವುದು ಎಂದರು.

ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ಆರ್‌.ಗಾಯತ್ರಿ ಮಾತನಾಡಿ, ಪ್ರಸ್ತುತ ವರ್ಷದಲ್ಲಿ ಮಲೇರಿಯಾ ಪ್ರಕರಣ ಕಂಡುಬಂದಿಲ್ಲ. ಇದುವರೆವಿಗೂ 22 ಡೆಂಗೆ, 33 ಚಿಕನ್‌ಗುನ್ಯಾ, 25 ಎಚ್‌1ಎನ್‌1 ಪ್ರಕರಣ ಪತ್ತೆಯಾಗಿದ್ದು, ಅದನ್ನು ತಡೆಗಟ್ಟಲು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜಂತುಹುಳು ತಡೆಗಟ್ಟಲು ಸೆಪ್ಟೆಂಬರ್‌ನಲ್ಲಿ 1ರಿಂದ 19 ವರ್ಷದವರಿಗೆ ಜಂತುಹುಳು ಮಾತ್ರೆಗಳನ್ನು ನೀಡಲಾಗುವುದು. ಇದಕ್ಕೆ ಶಾಲಾ ಶಿಕ್ಷ ಕರು ಸಹಕರಿಸುವಂತೆ ತಿಳಿಸಿದ ಅವರು, ಹೆಣ್ಣು ಮಕ್ಕಳ ಹಾಸ್ಟೆಲ್‌ಗಳಲ್ಲಿ ವಾರ್ಡನ್‌ಗಳು ಮಕ್ಕಳ ಮೇಲೆ ಹೆಚ್ಚಿನ ನಿಗಾ ವಹಿಸಬೇಕು. ಬಾಲ್ಯ ವಿವಾಹ ಕಂಡು ಬಂದರೆ ಅದನ್ನು ತಡೆಯಲು ಸಂಬಂಧಪಟ್ಟವರ ಗಮನಕ್ಕೆ ತರುವಂತೆ ಹೇಳಿದರು.

ರಾಜ್ಯ ಸರಕಾರಿ ನೌಕರರ ಸಂಘದ ಉಪಾಧ್ಯಕ್ಷ ನೀಲೇಶ್‌ರಾಜ್‌, ಸಿಡಿಪಿಒ ಸುರೇಶ್‌, ಡಾ.ದೇವಾನಂದ, ನಗರಸಭೆ ಪರಿಸರ ಎಂಜಿನಿಯರ್‌ ರುದ್ರೇಗೌಡ, ಡಾ. ವರುಣ್‌, ಡಾ.ಜ್ಯೋತಿ ಮತ್ತು ಆರೋಗ್ಯ ಇಲಾಖೆ ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ