ಸಾಗರ: ವಿಧಾನಸಭಾ ಕ್ಷೇತ್ರದ ಚುನಾವಣೆ ನಿರೀಕ್ಷೆಯಲ್ಲಿ ರಾಜಕೀಯ ಪಕ್ಷ ಗಳು ತಮ್ಮ ಅಭ್ಯರ್ಥಿಯ ಪಟ್ಟಿಯನ್ನು ಅಂತಿಮಗೊಳಿಸುವ ಲೆಕ್ಕಾಚಾರದಲ್ಲಿವೆ. ಟಿಕೆಟ್ ಆಕಾಂಕ್ಷಿ ಎಂದು ಹೇಳಿಕೊಳ್ಳುವ ಕೆಲವರಿಗೆ 'ಸದ್ಯಕ್ಕೆ ಸುಮ್ಮನಿರು ಮುಂದೆ ನೋಡುವ' ಎಂದು ಬಾಯಿ ಮುಚ್ಚಿಸುವ ಕೆಲಸ ಸಹ ಕೆಲವು ರಾಜಕೀಯ ಪಕ್ಷ ಗಳು ಮಾಡಿವೆ. ಈ ನಡುವೆ ಬಿಜೆಪಿಯಲ್ಲಿನ ಟಿಕೆಟ್ನ ಪ್ರಬಲ ಆಕಾಂಕ್ಷಿ ಹರತಾಳು ಹಾಲಪ್ಪ ಸಾಗರದಲ್ಲಿ ಮನೆ ಮಾಡಿ ವಾಸ್ತವ್ಯ ಹೂಡಿದ್ದಾರೆ.
ಕಾಂಗ್ರೆಸ್ನಲ್ಲಿ ಟಿಕೆಟ್ಗೆ ಅರ್ಜಿ ಸಲ್ಲಿಸಲು ಮಾ.16 ಅಂತಿಮ ದಿನವಾಗಿತ್ತು. ಕ್ಷೇತ್ರದಲ್ಲಿ ಕಾಗೋಡು ತಿಮ್ಮಪ್ಪ ತಮ್ಮ ಪರಮ ಶಿಷ್ಯ ಬಿ.ಆರ್.ಜಯಂತ್ ಅವರ ಹೆಸರನ್ನು ಸೂಚಿಸಲಿದ್ದಾರೆ ಎಂಬ ಗಾಳಿಸುದ್ದಿ ಸಹ ಕ್ಷೇತ್ರದಲ್ಲಿತ್ತು. ಕಲಗೋಡು ರತ್ನಾಕರ ಅವರು ಮತ್ತೊಬ್ಬ ಆಕಾಂಕ್ಷಿ ಎಂಬ ಮಾತು ಸಹ ಕೇಳಿ ಬರುತ್ತಿತ್ತು. ಈ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಚಿವ ಮಹಾದೇವಪ್ಪ ಅವರ ಸಲಹೆ ಮೇರೆಗೆ ಕಾಗೋಡು ತಿಮ್ಮಪ್ಪ ಮಾತ್ರ ಅರ್ಜಿ ಸಲ್ಲಿಸಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
ಕಾಗೋಡು ಏಕೈಕ ಹೆಸರು:
ಕ್ಷೇತ್ರದಲ್ಲಿ ಕಾಗೋಡು ತಿಮ್ಮಪ್ಪ ಅವರ ಹೆಸರನ್ನು ಮಾತ್ರ ವೀಕ್ಷ ಕರ ತಂಡ ಅಂತಿಮಗೊಳಿಸಿ ಹೈಕಮಾಂಡಿಗೆ ಕಳಿಸಿದೆ. ಜತೆಗೆ ವಿಧಾನ ಪರಿಷತ್ ಮಾಜಿ ಸದಸ್ಯೆ ಪ್ರಫುಲ್ಲಾ ಮಧುಕರ್ ಮತ್ತು ವಕ್ತಾರ ಕೆ.ದಿವಾಕರ್ ಅವರ ಪ್ರಸ್ತಾಪವಿದ್ದರೂ ಕಾಗೋಡು ತಿಮ್ಮಪ್ಪ ಮಾತ್ರ ಏಕೈಕ ಆಕಾಂಕ್ಷಿಯಾಗಿ ವೀಕ್ಷ ಕರ ಪಟ್ಟಿಯಲ್ಲಿ ಉಳಿದುಕೊಂಡಿದ್ದಾರೆ. ಈ ಎಲ್ಲ ವಿದ್ಯಮಾನಗಳಿಂದಾಗಿ ಕಾಂಗ್ರೆಸ್ ಪಕ್ಷ ಸಾಗರ ಕ್ಷೇತ್ರದಲ್ಲಿ ಕಾಗೋಡು ತಿಮ್ಮಪ್ಪ ಅವರನ್ನು ಕಣಕ್ಕಿಳಿಸಲು ಸಜ್ಜಾಗಿದೆ.
ಉಳಿದಂತೆ ತೀರ್ಥಹಳ್ಳಿ ಕ್ಷೇತ್ರದಲ್ಲಿ ಸಹ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರೊಬ್ಬರ ಹೆಸರು ಮಾತ್ರ ಅಂತಿಮ ಪಟ್ಟಿಯಲ್ಲಿದೆ. ಶಿಕಾರಿಪುರ ಮತ್ತು ಶಿವಮೊಗ್ಗದಲ್ಲಿ ತಲಾ 5, ಸೊರಬದಲ್ಲಿ 8 ಭದ್ರಾವತಿಯಲ್ಲಿ 4 ಹಾಗೂ ಶಿವಮೊಗ್ಗ ಗ್ರಾಮಾಂತರದಲ್ಲಿ 3 ಆಕಾಂಕ್ಷಿಗಳ ಪಟ್ಟಿಯನ್ನು ಕಾಂಗ್ರೆಸ್ ಅಂತಿಮಗೊಳಿಸಿ ಹೈಕಮಾಂಡ್ಗೆ ಕಳಿಸಿಕೊಟ್ಟಿದೆ ಎನ್ನಲಾಗುತ್ತಿದೆ.
ಸಾಗರದಲ್ಲಿ ಕಾಂಗ್ರೆಸ್ ಟಿಕೆಟ್ ಬಯಸಿದ್ದ ಕೆ.ದಿವಾಕರ್ ಅವರ ಹೆಸರನ್ನು ಶಿವಮೊಗ್ಗದ ಆಕಾಂಕ್ಷಿಗಳ ಪಟ್ಟಿಯಲ್ಲಿ ಸೇರಿಸಲಾಗಿದೆ ಎಂದು ಸ್ಥಳೀಯ ಕಾಂಗ್ರೆಸ್ ಮೂಲಗಳು ತಿಳಿಸಿದೆ. ಈ ಮೂಲಕ ಸಾಗರ ಕ್ಷೇತ್ರದಲ್ಲಿ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ನಿಗದಿಗೊಳಿಸಿಕೊಳ್ಳುವ ಮೂಲಕ ಚುನಾವಣೆಯ ಸಿದ್ಧತೆ ಮಾಡಿಕೊಂಡಿದೆ.
ಕಾಗೋಡು ಹೆಸರು ಮಾತ್ರ ಇದೆ
ಸಾಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯ್ಕೆ ಮಾಡಲು ಕೇಂದ್ರಕ್ಕೆ ಕಳಿಸಲಾದ ಪಟ್ಟಿಯಲ್ಲಿ ಸಚಿವ ಕಾಗೋಡು ತಿಮ್ಮಪ್ಪ ಅವರೊಬ್ಬರ ಹೆಸರು ಮಾತ್ರ ಇದೆ. ಹಿರಿಯರಾದ ತಿಮ್ಮಪ್ಪ ಅವರ ಹೆಸರನ್ನು ಮಾತ್ರ ವೀಕ್ಷ ಕರು ಉಳಿಸಿಕೊಂಡಿದ್ದಾರೆ. ತೀರ್ಥಹಳ್ಳಿ ಕ್ಷೇತ್ರದಲ್ಲಿ ಸಹ ಕಿಮ್ಮನೆ ರತ್ನಾಕರ ಅವರೊಬ್ಬರ ಹೆಸರು ಆಕಾಂಕ್ಷಿಗಳ ಪಟ್ಟಿಯಲ್ಲಿದೆ.
-ತಿ.ನಾ.ಶ್ರೀನಿವಾಸ, ಕಾಂಗ್ರೆಸ್ ಜಿಲ್ಲಾಧ್ಯಕ್ಷ
ಕಾಂಗ್ರೆಸ್ನಲ್ಲಿ ಟಿಕೆಟ್ಗೆ ಅರ್ಜಿ ಸಲ್ಲಿಸಲು ಮಾ.16 ಅಂತಿಮ ದಿನವಾಗಿತ್ತು. ಕ್ಷೇತ್ರದಲ್ಲಿ ಕಾಗೋಡು ತಿಮ್ಮಪ್ಪ ತಮ್ಮ ಪರಮ ಶಿಷ್ಯ ಬಿ.ಆರ್.ಜಯಂತ್ ಅವರ ಹೆಸರನ್ನು ಸೂಚಿಸಲಿದ್ದಾರೆ ಎಂಬ ಗಾಳಿಸುದ್ದಿ ಸಹ ಕ್ಷೇತ್ರದಲ್ಲಿತ್ತು. ಕಲಗೋಡು ರತ್ನಾಕರ ಅವರು ಮತ್ತೊಬ್ಬ ಆಕಾಂಕ್ಷಿ ಎಂಬ ಮಾತು ಸಹ ಕೇಳಿ ಬರುತ್ತಿತ್ತು. ಈ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಚಿವ ಮಹಾದೇವಪ್ಪ ಅವರ ಸಲಹೆ ಮೇರೆಗೆ ಕಾಗೋಡು ತಿಮ್ಮಪ್ಪ ಮಾತ್ರ ಅರ್ಜಿ ಸಲ್ಲಿಸಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
ಕಾಗೋಡು ಏಕೈಕ ಹೆಸರು:
ಕ್ಷೇತ್ರದಲ್ಲಿ ಕಾಗೋಡು ತಿಮ್ಮಪ್ಪ ಅವರ ಹೆಸರನ್ನು ಮಾತ್ರ ವೀಕ್ಷ ಕರ ತಂಡ ಅಂತಿಮಗೊಳಿಸಿ ಹೈಕಮಾಂಡಿಗೆ ಕಳಿಸಿದೆ. ಜತೆಗೆ ವಿಧಾನ ಪರಿಷತ್ ಮಾಜಿ ಸದಸ್ಯೆ ಪ್ರಫುಲ್ಲಾ ಮಧುಕರ್ ಮತ್ತು ವಕ್ತಾರ ಕೆ.ದಿವಾಕರ್ ಅವರ ಪ್ರಸ್ತಾಪವಿದ್ದರೂ ಕಾಗೋಡು ತಿಮ್ಮಪ್ಪ ಮಾತ್ರ ಏಕೈಕ ಆಕಾಂಕ್ಷಿಯಾಗಿ ವೀಕ್ಷ ಕರ ಪಟ್ಟಿಯಲ್ಲಿ ಉಳಿದುಕೊಂಡಿದ್ದಾರೆ. ಈ ಎಲ್ಲ ವಿದ್ಯಮಾನಗಳಿಂದಾಗಿ ಕಾಂಗ್ರೆಸ್ ಪಕ್ಷ ಸಾಗರ ಕ್ಷೇತ್ರದಲ್ಲಿ ಕಾಗೋಡು ತಿಮ್ಮಪ್ಪ ಅವರನ್ನು ಕಣಕ್ಕಿಳಿಸಲು ಸಜ್ಜಾಗಿದೆ.
ಉಳಿದಂತೆ ತೀರ್ಥಹಳ್ಳಿ ಕ್ಷೇತ್ರದಲ್ಲಿ ಸಹ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರೊಬ್ಬರ ಹೆಸರು ಮಾತ್ರ ಅಂತಿಮ ಪಟ್ಟಿಯಲ್ಲಿದೆ. ಶಿಕಾರಿಪುರ ಮತ್ತು ಶಿವಮೊಗ್ಗದಲ್ಲಿ ತಲಾ 5, ಸೊರಬದಲ್ಲಿ 8 ಭದ್ರಾವತಿಯಲ್ಲಿ 4 ಹಾಗೂ ಶಿವಮೊಗ್ಗ ಗ್ರಾಮಾಂತರದಲ್ಲಿ 3 ಆಕಾಂಕ್ಷಿಗಳ ಪಟ್ಟಿಯನ್ನು ಕಾಂಗ್ರೆಸ್ ಅಂತಿಮಗೊಳಿಸಿ ಹೈಕಮಾಂಡ್ಗೆ ಕಳಿಸಿಕೊಟ್ಟಿದೆ ಎನ್ನಲಾಗುತ್ತಿದೆ.
ಸಾಗರದಲ್ಲಿ ಕಾಂಗ್ರೆಸ್ ಟಿಕೆಟ್ ಬಯಸಿದ್ದ ಕೆ.ದಿವಾಕರ್ ಅವರ ಹೆಸರನ್ನು ಶಿವಮೊಗ್ಗದ ಆಕಾಂಕ್ಷಿಗಳ ಪಟ್ಟಿಯಲ್ಲಿ ಸೇರಿಸಲಾಗಿದೆ ಎಂದು ಸ್ಥಳೀಯ ಕಾಂಗ್ರೆಸ್ ಮೂಲಗಳು ತಿಳಿಸಿದೆ. ಈ ಮೂಲಕ ಸಾಗರ ಕ್ಷೇತ್ರದಲ್ಲಿ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ನಿಗದಿಗೊಳಿಸಿಕೊಳ್ಳುವ ಮೂಲಕ ಚುನಾವಣೆಯ ಸಿದ್ಧತೆ ಮಾಡಿಕೊಂಡಿದೆ.
ಕಾಗೋಡು ಹೆಸರು ಮಾತ್ರ ಇದೆ
ಸಾಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯ್ಕೆ ಮಾಡಲು ಕೇಂದ್ರಕ್ಕೆ ಕಳಿಸಲಾದ ಪಟ್ಟಿಯಲ್ಲಿ ಸಚಿವ ಕಾಗೋಡು ತಿಮ್ಮಪ್ಪ ಅವರೊಬ್ಬರ ಹೆಸರು ಮಾತ್ರ ಇದೆ. ಹಿರಿಯರಾದ ತಿಮ್ಮಪ್ಪ ಅವರ ಹೆಸರನ್ನು ಮಾತ್ರ ವೀಕ್ಷ ಕರು ಉಳಿಸಿಕೊಂಡಿದ್ದಾರೆ. ತೀರ್ಥಹಳ್ಳಿ ಕ್ಷೇತ್ರದಲ್ಲಿ ಸಹ ಕಿಮ್ಮನೆ ರತ್ನಾಕರ ಅವರೊಬ್ಬರ ಹೆಸರು ಆಕಾಂಕ್ಷಿಗಳ ಪಟ್ಟಿಯಲ್ಲಿದೆ.
-ತಿ.ನಾ.ಶ್ರೀನಿವಾಸ, ಕಾಂಗ್ರೆಸ್ ಜಿಲ್ಲಾಧ್ಯಕ್ಷ