ಆ್ಯಪ್ನಗರ

ಪುರಲೆಯಲ್ಲಿ ಎಸ್‌ಟಿಪಿ ಸ್ಥಾಪನೆಗೆ ಸ್ಥಳೀಯರ ವಿರೋಧ

ನಗರ ಸಮೀಪದಲ್ಲಿರುವ ಪುರಲೆಯಲ್ಲಿ ಮಲೀನ ನೀರು ಶುದ್ಧಿಕರಣ ಘಟಕ (ಎಸ್‌ಟಿಪಿ) ಸ್ಥಾಪನೆಗೆ ಭಾರೀ ವಿರೋಧ ವ್ಯಕ್ತವಾಗಿದ್ದು, ಕಟ್ಟಡವನ್ನು ಸ್ಥಳಾಂತರಿಸುವಂತೆ ಒತ್ತಾಯಿಸಿ ಗುರುವಾರ ಸ್ಥಳದಲ್ಲಿ ಸ್ಥಳೀಯರು ವಿಷದ ಬಾಟಲಿ ಮುಂದಿಟ್ಟುಕೊಂಡು ಪ್ರತಿಭಟನೆ ನಡೆಸಿದರು.

Vijaya Karnataka 21 Jun 2019, 5:00 am
ಶಿವಮೊಗ್ಗ : ನಗರ ಸಮೀಪದಲ್ಲಿರುವ ಪುರಲೆಯಲ್ಲಿ ಮಲೀನ ನೀರು ಶುದ್ಧಿಕರಣ ಘಟಕ (ಎಸ್‌ಟಿಪಿ) ಸ್ಥಾಪನೆಗೆ ಭಾರೀ ವಿರೋಧ ವ್ಯಕ್ತವಾಗಿದ್ದು, ಕಟ್ಟಡವನ್ನು ಸ್ಥಳಾಂತರಿಸುವಂತೆ ಒತ್ತಾಯಿಸಿ ಗುರುವಾರ ಸ್ಥಳದಲ್ಲಿ ಸ್ಥಳೀಯರು ವಿಷದ ಬಾಟಲಿ ಮುಂದಿಟ್ಟುಕೊಂಡು ಪ್ರತಿಭಟನೆ ನಡೆಸಿದರು.
Vijaya Karnataka Web SMR-20GANESH2


ಪುರಲೆಯ ಸುಮಾರು 2 ಎಕರೆ 36 ಗುಂಟೆಯ ಗೋಮಾಳ ಜಾಗದಲ್ಲಿ ಸರಕಾರದ ಆದೇಶ ಇಲ್ಲದಿದ್ದರೂ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಎಂಜಿನಿಯರ್‌ ಹಾಗೂ ಗುತ್ತಿಗೆದಾರರು ಸಂಬಂಧಪಟ್ಟ ಇಲಾಖೆಗಳ ಮೌಖಿಕ ನಿರ್ದೇಶನದ ಅನುಸಾರ ನಿಯಮ ಬಾಹಿರವಾಗಿ ಈ ಸ್ಥಳದಲ್ಲಿ ಎಸ್‌ಟಿಪಿ ಘಟಕ ನಿರ್ಮಾಣ ಮಾಡುತ್ತಿದ್ದಾರೆ. ಯೋಜನೆಯನ್ನು ಈಗಲೇ ಕೈಬಿಟ್ಟು, ಬೇರೆ ಕಡೆ ಘಟಕ ಸ್ಥಾಪಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಈ ಭಾಗದಲ್ಲಿ ಹೊಸ ಬಡಾವಣೆಗಳು ತೀವ್ರಗತಿಯಲ್ಲಿ ಬೆಳೆಯುತ್ತಿವೆ. ವಿವಿಧ ಸಂಸ್ಥೆಗಳ ಆಸ್ಪತ್ರೆಗಳು, ಶಾಲೆಗಳೂ ಇವೆ. ಜನವಸತಿ ಪ್ರದೇಶದ ಮಧ್ಯದಲ್ಲೇ ಎಸ್‌ಟಿಪಿ ಘಟಕ ನಿರ್ಮಾಣವಾಗುತ್ತಿದೆ. ಸುತ್ತಮುತ್ತಲಿನ ಪ್ರದೇಶದಲ್ಲಿ ವಾಯುಮಾಲಿನ್ಯದಿಂದ ದುರ್ವಾಸನೆ, ಸಾಂಕ್ರಾಮಿಕ ರೋಗ, ಕ್ಯಾನ್ಸರ್‌, ಅಸ್ತಮಾ, ಚರ್ಮರೋಗ ಜತೆಗೆ ಉಸಿರಾಟದ ಸಮಸ್ಯೆಗಳು ಎದುರಿಸಬೇಕಾಗುತ್ತದೆ. ಹೀಗಾಗಿ ಈ ಸ್ಥಳದಲ್ಲಿ ಘಟಕ ಸ್ಥಾಪನೆ ಮಾಡಬಾರದು. ವಿರೋಧದ ನಡುವೆಯೂ ಕಾಮಗಾರಿ ಮುಂದುವರಿಸಿದರೆ ವಿಷ ಕುಡಿಯಬೇಕಾಗುತ್ತದೆ ಎಂದು ಎಚ್ಚರಿಸಿದರು.

ಪ್ರತಿಭಟನೆ ಹಿನ್ನೆಲೆಯಲ್ಲಿ ಗುರುವಾರ ಪುರಲೆ ಬಡಾವಣೆಯಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್‌ ಕೈಗೊಳ್ಳಲಾಗಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ