ಆ್ಯಪ್ನಗರ

ಮ್ಯಾನೇಜರ್‌ ಹೆಸರಲ್ಲಿ ಟೋಪಿ

ಬ್ಯಾಂಕ್‌ ಮ್ಯಾನೇಜರ್‌ ಸೋಗಿನಲ್ಲಿ ಕರೆ ಮಾಡಿ ನಗರದಲ್ಲಿ ಮಹಿಳೆಯೊಬ್ಬರ ಖಾತೆಯಿಂದ 19,998 ರೂ. ಲಪಟಾಯಿಸಿರುವ ಘಟನೆ ಗುರುವಾರ ನಡೆದಿದೆ.

Vijaya Karnataka 3 Aug 2019, 6:58 pm
ಶಿವಮೊಗ್ಗ: ಬ್ಯಾಂಕ್‌ ಮ್ಯಾನೇಜರ್‌ ಸೋಗಿನಲ್ಲಿ ಕರೆ ಮಾಡಿ ನಗರದಲ್ಲಿ ಮಹಿಳೆಯೊಬ್ಬರ ಖಾತೆಯಿಂದ 19,998 ರೂ. ಲಪಟಾಯಿಸಿರುವ ಘಟನೆ ಗುರುವಾರ ನಡೆದಿದೆ.
Vijaya Karnataka Web loot by managers name
ಮ್ಯಾನೇಜರ್‌ ಹೆಸರಲ್ಲಿ ಟೋಪಿ


ಹೊಸಮನೆ ನಿವಾಸಿ ಸಿ.ಆರ್‌.ಸುಮ ಎಂಬುವವರೇ ಮೋಸ ಹೋದ ಮಹಿಳೆ. ಎಟಿಎಂ ಕಾರ್ಡ್‌ ಅವಧಿ ಮುಗಿದಿದ್ದು, ನವೀಕರಣ ಮಾಡುವುದಾಗಿ ಹೇಳಿ ಎಟಿಎಂ ಕಾರ್ಡ್‌ ಸಂಖ್ಯೆ ಮತ್ತು ಒಟಿಪಿ ಪಡೆದಿದ್ದಾರೆ. ಇವರು ಸಿಂಡಿಕೇಟ್‌ ಬ್ಯಾಂಕ್‌ ದುರ್ಗಿಗುಡಿ ಶಾಖೆಯಲ್ಲಿ ಖಾತೆ ಹೊಂದಿದ್ದಾರೆ. ಶಿವಮೊಗ್ಗ ಸಿ.ಇ.ಎನ್‌. ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ನೇಣು ಬಿಗಿದುಕೊಂಡು ಸಾವು

ಶಿವಮೊಗ್ಗ: ಹೊಟ್ಟೆ ನೋವು ತಾಳಲಾಗದೆ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭದ್ರಾವತಿಯ ಹಡಲಘಟ್ಟದಲ್ಲಿ ಗುರುವಾರ ನಡೆದಿದೆ.

ರಾಜು(43) ಮೃತ ವ್ಯಕ್ತಿ. ಸುಮಾರು ನಾಲ್ಕು ವರ್ಷಗಳಿಂದ ಹೊಟ್ಟೆ ನೋವಿನಿಂದ ಬಳಲುತ್ತಿದ್ದರು. ಚಿಕಿತ್ಸೆ ಕೊಡಿಸಿದ್ದರೂ ಗುಣಮುಖರಾಗಿರಲಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ. ಹೊಸಮನೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ