ಆ್ಯಪ್ನಗರ

24ಕ್ಕೆ ಮಡಿವಾಳ ಸಮಾಜ ವಧುವರರ ಅನ್ವೇಷಣೆ ಕಾರ್ಯಕ್ರಮ

ಜಿಲ್ಲಾ ಮಡಿವಾಳ ನೌಕರರ ಸಂಘದಿಂದ ಫೆ.24ರಂದು ಬೆಳಗ್ಗೆ 10ಕ್ಕೆ ನಗರದ ಅಂಬೇಡ್ಕರ್‌ ಭವನದಲ್ಲಿ ವಧುವರರ ಅನ್ವೇಷಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಜಿ.ಅಶೋಕ್‌ ಕುಮಾರ್‌ ಹೇಳಿದರು.

Vijaya Karnataka 22 Feb 2019, 5:00 am
ಶಿವಮೊಗ್ಗ : ಜಿಲ್ಲಾ ಮಡಿವಾಳ ನೌಕರರ ಸಂಘದಿಂದ ಫೆ.24ರಂದು ಬೆಳಗ್ಗೆ 10ಕ್ಕೆ ನಗರದ ಅಂಬೇಡ್ಕರ್‌ ಭವನದಲ್ಲಿ ವಧುವರರ ಅನ್ವೇಷಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಜಿ.ಅಶೋಕ್‌ ಕುಮಾರ್‌ ಹೇಳಿದರು.
Vijaya Karnataka Web madivala community vaduvara programme 0n 24th
24ಕ್ಕೆ ಮಡಿವಾಳ ಸಮಾಜ ವಧುವರರ ಅನ್ವೇಷಣೆ ಕಾರ್ಯಕ್ರಮ


ಸುದ್ದಿಗೋಷ್ಠಿಯಲ್ಲಿ ಗುರುವಾರ ಅವರು ಮಾತನಾಡಿ, ಪ್ರತಿಯೊಬ್ಬರ ಜೀವನದಲ್ಲೂ ಮದುವೆ ಎಂಬುದು ಮಹತ್ವದ ಘಟ್ಟ. ಇತ್ತೀಚೆಗೆ ವಧು, ವರರ ಹುಡುಕುವುದು ಪೋಷಕರಿಗೆ ದೊಡ್ಡ ಸವಾಲಾಗಿದೆ. ಇದೆಲ್ಲವನ್ನು ಮನಗಂಡು ಸಂಘದಿಂದಲೇ ವಧುವರರ ಅನ್ವೇಷಣೆ ನಡೆಸಬೇಕು ಎಂಬ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ಈಗಾಗಲೇ ಸುಮಾರು 75ಕ್ಕೂ ಹೆಚ್ಚು ವಧುವರರು ನೋಂದಾಯಿಸಿಕೊಂಡಿದ್ದಾರೆ. ಈ ಸಂಖ್ಯೆ ಇನ್ನೂ ಹೆಚ್ಚಾಗುವ ನಿರೀಕ್ಷೆ ಇದೆ. ಹೆಸರು ನೋಂದಾಯಿಸಿಕೊಳ್ಳುವವರು ಮೊ.9964488929ಗೆ ಸಂಪರ್ಕಿಸಬಹುದು, ಇದೇ ನಂಬರ್‌ಗೆ ವಾಟ್ಸಪ್‌ ಮೂಲಕವೂ ತಿಳಿಸಬಹುದು. ಸಮಾಜ ಬಾಂಧವರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಮನವಿ ಮಾಡಿದರು.

ಶಾಸಕ ಕೆ.ಎಸ್‌.ಈಶ್ವರಪ್ಪ ಕಾರ್ಯಕ್ರಮ ಉದ್ಘಾಟಿಸಲಿದ್ದು, ವಿಧಾನ ಪರಿಷತ್‌ ಸದಸ್ಯ ಆರ್‌.ಪ್ರಸನ್ನಕುಮಾರ್‌ ಸಮಾಜದ ಸಾಧಕರನ್ನು ಸನ್ಮಾನಿಸುವರು. ಪಾಲಿಕೆ ಮೇಯರ್‌ ಲತಾ ಗಣೇಶ್‌, ಉಪಮೇಯರ್‌ ಎಸ್‌.ಎನ್‌.ಚನ್ನಬಸಪ್ಪ, ಹುಬ್ಬಳ್ಳಿ-ಧಾರವಾಡ ಪಾಲಿಕೆ ಮುಖ್ಯ ಲೆಕ್ಕಾಧಿಕಾರಿ ಎಸ್‌.ಮಹಂತೇಶ್‌ ಭಾಗವಹಿಸಲಿದ್ದಾರೆ ಎಂದರು.

ಗೋಷ್ಠಿಯಲ್ಲಿ ಸಂಘದ ಪದಾಧಿಕಾರಿಗಳಾದ ವೈ.ಕೆ.ನರಸಿಂಹಯ್ಯ, ಹನುಮಂತ ಎಂ.ಮಗದೂರ, ಎಂ.ಎನ್‌.ಮಧುಕರ್‌, ಕೆ.ವಿ.ಗೋಪಾಲ್‌ ಮತ್ತಿತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ