ಆ್ಯಪ್ನಗರ

ಭದ್ರಾವತಿ ಮಾದರಿ ಕ್ಷೇತ್ರವನ್ನಾಗಿಸಿ

ಕ್ಷೇತ್ರ ವ್ಯಾಪ್ತಿಯಲ್ಲಿಅಭಿವೃದ್ಧಿ ಕಾರ್ಯಗಳನ್ನು ವೀಕ್ಷಿಸಲು ಆಗಮಿಸುವಂತೆ ಜಿ.ಪಂ. ಸಿಇಒ ಎಂ.ಎಲ್‌. ವೈಶಾಲಿ ಅವರಿಗೆ ನಗರದ ಭಾರತ ರತ್ನ ಸರ್‌ ಎಂ.ವಿಶ್ವೇಶ್ವರಯ್ಯ ಚಾರಿಟಬಲ್‌ ಟ್ರಸ್ಟ್‌, ಡಿ. ದೇವರಾಜ ಅರಸು ಜನಸ್ಪಂದನ ವೇದಿಕೆ ಮತ್ತು ಸುವರ್ಣ ಮಹಿಳಾ ವೇದಿಕೆಯಿಂದ ಬುಧವಾರ ಮನವಿ ಸಲ್ಲಿಸಲಾಯಿತು.

Vijaya Karnataka 1 Nov 2019, 5:00 am
ಭದ್ರಾವತಿ: ಕ್ಷೇತ್ರ ವ್ಯಾಪ್ತಿಯಲ್ಲಿಅಭಿವೃದ್ಧಿ ಕಾರ್ಯಗಳನ್ನು ವೀಕ್ಷಿಸಲು ಆಗಮಿಸುವಂತೆ ಜಿ.ಪಂ. ಸಿಇಒ ಎಂ.ಎಲ್‌. ವೈಶಾಲಿ ಅವರಿಗೆ ನಗರದ ಭಾರತ ರತ್ನ ಸರ್‌ ಎಂ.ವಿಶ್ವೇಶ್ವರಯ್ಯ ಚಾರಿಟಬಲ್‌ ಟ್ರಸ್ಟ್‌, ಡಿ. ದೇವರಾಜ ಅರಸು ಜನಸ್ಪಂದನ ವೇದಿಕೆ ಮತ್ತು ಸುವರ್ಣ ಮಹಿಳಾ ವೇದಿಕೆಯಿಂದ ಬುಧವಾರ ಮನವಿ ಸಲ್ಲಿಸಲಾಯಿತು.
Vijaya Karnataka Web 31BDVT1_46


ಭದ್ರಾವತಿ ಕ್ಷೇತ್ರದಲ್ಲಿಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆಯಬೇಕಾಗಿದ್ದು, ಕೇಂದ್ರ ಹಾಗೂ ರಾಜ್ಯ ಸರಕಾರದ ನೆರವಿನೊಂದಿಗೆ ರಾಜ್ಯದಲ್ಲಿಯೇ ಮಾದರಿ ಕ್ಷೇತ್ರವನ್ನಾಗಿಸುವ ನಿಟ್ಟಿನಲ್ಲಿಮುಂದಾಗುವಂತೆ ಒತ್ತಾಯಿಸಲಾಯಿತು.

ಕ್ಷೇತ್ರದಲ್ಲಿಕೆರೆಗಳ ಅಭಿವೃದ್ಧಿ, ಗ್ರಾಮೀಣ ಭಾಗದ ಜನರಿಗೆ ಶುದ್ಧ ಕುಡಿಯುವ ನೀರಿನ ಘಟಕಗಳಿಗೆ ಜಪಾನ್‌ ತಂತ್ರಜ್ಞಾನದ ಮೈಕ್ರೋಪೈಬರ್‌ ಫಿಲ್ಟರ್‌ ಘಟಕ ಸ್ಥಾಪನೆ, ಸರಕಾರಿ ಆಸ್ಪತ್ರೆ ಹಾಗೂ ಶಾಲಾ-ಕಾಲೇಜುಗಳ ಅಭಿವೃದ್ಧಿ ಸೇರಿದಂತೆ ವಿವಿಧ ಕಾಮಗಾರಿ ಕೈಗೊಳ್ಳುವಂತೆ ಮನವಿ ಮಾಡಲಾಯಿತು.

ಟ್ರಸ್ಟ್‌ ಛೇರ್ಮನ್‌ ಆರ್‌. ವೇಣುಗೋಪಾಲ್‌, ಕಾರ್ಯದರ್ಶಿ ವಿ. ಅಂಜನ, ಸುವರ್ಣ ಮಹಿಳಾ ವೇದಿಕೆ ಕಾರ್ಯಾಧ್ಯಕ್ಷೆ ರಮಾವೆಂಕಟೇಶ್‌, ಶೈಲಜಾ ರಾಮಕೃಷ್ಣ ಮತ್ತಿತರರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ