ಆ್ಯಪ್ನಗರ

ಮಾಂಗಲ್ಯ ಸರ ಅಪಹರಣ

ಇಲ್ಲಿನ ಜೆ.ಸಿ.ರಸ್ತೆಯಲ್ಲಿ ಗಾಂಧಿಮಂದಿರದ ಸಾವಿತ್ರಿ ಅವರ ಮಾಂಗಲ್ಯಸರ ಕಿತ್ತುಕೊಂಡು ಪರಾರಿಯಾದ ಘಟನೆ ಮಂಗಳವಾರ ನಡೆದಿದೆ.

Vijaya Karnataka 13 Jun 2019, 5:00 am
ಸಾಗರ: ಇಲ್ಲಿನ ಜೆ.ಸಿ.ರಸ್ತೆಯಲ್ಲಿ ಗಾಂಧಿಮಂದಿರದ ಸಾವಿತ್ರಿ ಅವರ ಮಾಂಗಲ್ಯಸರ ಕಿತ್ತುಕೊಂಡು ಪರಾರಿಯಾದ ಘಟನೆ ಮಂಗಳವಾರ ನಡೆದಿದೆ.
Vijaya Karnataka Web mangalya sara kidnap
ಮಾಂಗಲ್ಯ ಸರ ಅಪಹರಣ


ಚಾಮರಾಜಪೇಟೆಯಲ್ಲಿ ಬ್ಯೂಟಿ ಪಾರ್ಲರ್‌ ನಡೆಸುತ್ತಿದ್ದ ಸಾವಿತ್ರಿ ಅವರು ಮಂಗಳವಾರ ಸಂಜೆ ಹೊರಗೆ ಬಂದು ನಿಂತಿದ್ದಾಗ ಅಪರಿಚಿತ ವ್ಯಕ್ತಿಯೊಬ್ಬ ಕಣ್ಣಿಗೆ ಖಾರದ ಪುಡಿ ಎರಚಿ ಸುಮಾರು 70 ಸಾವಿರ ರೂ. ಮೌಲ್ಯದ 30 ಗ್ರಾಂ. ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾಗಿದ್ದಾನೆ. ಅಪರಿಚಿತ ವ್ಯಕ್ತಿ ಕುತ್ತಿಗೆಗೆ ಕೈಹಾಕಿ ಮಾಂಗಲ್ಯಸರ ಕಿತ್ತುಕೊಳ್ಳುವ ಸಂದರ್ಭ ಸಾವಿತ್ರಿ ಅವರು ಬಲವಾಗಿ ಪ್ರತಿರೋಧ ಒಡ್ಡಿದ್ದಾರೆ. ಮಾಂಗಲ್ಯ ಸರ ಗಟ್ಟಿಯಾಗಿ ಹಿಡಿದು ಕೊಂಡಿದ್ದಾರೆ. ಈ ಸಂದರ್ಭ ಮಾಂಗಲ್ಯ ಸರ ತುಂಡಾಗಿದ್ದು ಒಟ್ಟು 70 ಗ್ರಾಂ. ತೂಕದ ಮಾಂಗಲ್ಯ ಸರದಲ್ಲಿ ಸುಮಾರು 30 ಗ್ರಾಂ ಕಳ್ಳನ ಕೈಗೆ ಸಿಕ್ಕಿದ್ದು ಅದನ್ನು ಕಿತ್ತುಕೊಂಡು ಪರಾರಿಯಾಗಿದ್ದಾನೆ. ಈ ಸಂಬಂಧ ಸಾವಿತ್ರಿ ಅವರು ನಗರ ಠಾಣೆಗೆ ದೂರು ನೀಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ