ಆ್ಯಪ್ನಗರ

ಜ್ಞಾನ ವೃದ್ಧಿಗೆ ಗಣಿತಶಾಸ್ತ್ರ ಸಹಕಾರಿ

ಆಧುನಿಕ ಯುಗದಲ್ಲಿ ಗಣಿತಶಾಸ್ತ್ರವು ಸರ್ವಕ್ಷೇತ್ರವನ್ನು ವ್ಯಾಪಿಸಿಕೊಂಡಿದೆ ಎಂದು ಕುವೆಂಪು ವಿಶ್ವವಿದ್ಯಾಲಯ ಗಣಿತಶಾಸ್ತ್ರದ ನಿವೃತ್ತ ಪ್ರಾಧ್ಯಾಪಕ ಸಿ.ಎಸ್‌.ಬಾಗೇವಾಡಿ ಹೇಳಿದರು.

Vijaya Karnataka 17 Feb 2019, 5:00 am
ಶಿವಮೊಗ್ಗ: ಆಧುನಿಕ ಯುಗದಲ್ಲಿ ಗಣಿತಶಾಸ್ತ್ರವು ಸರ್ವಕ್ಷೇತ್ರವನ್ನು ವ್ಯಾಪಿಸಿಕೊಂಡಿದೆ ಎಂದು ಕುವೆಂಪು ವಿಶ್ವವಿದ್ಯಾಲಯ ಗಣಿತಶಾಸ್ತ್ರದ ನಿವೃತ್ತ ಪ್ರಾಧ್ಯಾಪಕ ಸಿ.ಎಸ್‌.ಬಾಗೇವಾಡಿ ಹೇಳಿದರು.
Vijaya Karnataka Web SMG-1602-2-15-16 SMG6


ನಗರದ ಸಹ್ಯಾದ್ರಿ ವಿಜ್ಞಾನ ಕಾಲೇಜು ರಾಧಾಕೃಷ್ಣ ಸಭಾಂಗಣದಲ್ಲಿ ಶನಿವಾರ ಅಪ್ಲಿಕೇಷನ್ಸ್‌ ಆಫ್‌ ಮ್ಯಾಥಮೆಟಿಕ್ಸ್‌ ಕುರಿತ ಒಂದು ದಿನದ ವಿಚಾರ ಸಂಕಿರಣವನ್ನು ಗಣಿತ ಶಾಸ್ತ್ರಜ್ಞ ಶ್ರೀನಿವಾಸ ರಾಮಾನುಜನ್‌ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಆಧುನಿಕ ತಂತ್ರಜ್ಞಾನದ ಆವಿಷ್ಕಾರಗಳಲ್ಲಿ ಗಣಿತಶಾಸ್ತ್ರವು ಪ್ರಾಮುಖ್ಯತೆ ಪಡೆದುಕೊಂಡಿದೆ. ಇದು ವಿದ್ಯಾರ್ಥಿಗಳ ಯೋಚನೆ ಮತ್ತು ಜ್ಞಾನ ವೃದ್ಧಿಸಲು ಹೊಸ ಅವಕಾಶಗಳನ್ನು ಕಲ್ಪಿಸಿಕೊಡುತ್ತಿದೆ ಎಂದರು. ಸಂಪನ್ಮೂಲ ವ್ಯಕ್ತಿಗಳಾಗಿ ಕುವೆಂಪು ವಿವಿಯ ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಬಿ.ಜೆ.ಗಿರೀಶ್‌, ಪ್ರೊ. ಎಸ್‌.ಕೆ.ನರಸಿಂಹ ಮೂರ್ತಿ, ಬೆಂಗಳೂರು ವಿವಿಯ ಗಣಿತಶಾಸ್ತ್ರ ವಿಭಾಗದ ಪ್ರೊ.ಎಚ್‌.ಜಿ.ನಾಗರಾಜ್‌, ತಮಿಳುನಾಡಿನ ಡಾ.ಎನ್‌.ಮಹೇಶ್‌ ಭಾಗವಹಿಸಿ ವಿವಿಧ ವಿಷಯ ಕುರಿತು ಉಪನ್ಯಾಸ ನೀಡಿದರು.

ಪ್ರಾಂಶುಪಾಲರಾದ ಪ್ರೊ.ಕೆ.ಆರ್‌.ಶಶಿರೇಖಾ ಅಧ್ಯಕ್ಷತೆ ವಹಿಸಿದ್ದರು. ಡಾ.ನಾಗರಾಜ ಪರಿಸರ, ಡಾ.ಸುಬ್ರಹ್ಮಣ್ಯ, ಡಾ.ಬಿ.ಟಿ.ಪ್ರಭಾಕರ್‌ ಹಾಜರಿದ್ದರು. ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಪಿ.ವೆಂಕಟೇಶ್‌ ಸ್ವಾಗತಿಸಿ, ಸಂಚಾಲಕಿ ಡಾ.ಜಿ.ಎಂ.ಪವಿತ್ರಾ ವಂದಿಸಿದರು. ವಿಚಾರ ಸಂಕಿರಣದಲ್ಲಿ ವಿವಿಧ ಕಾಲೇಜುಗಳ 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ಭಾವಹಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ