ಆ್ಯಪ್ನಗರ

ಪರೀಕ್ಷೆ ಎದುರಿಸಲು ಮನೋಬಲ ಮುಖ್ಯ

ಪರೀಕ್ಷೆ ಸಮರ್ಥವಾಗಿ ಎದುರಿಸಲು ಅಗತ್ಯವಿರುವ ಆತ್ಮಸ್ಥೆತ್ರೖರ್ಯ, ಮನೋಬಲ ಬೆಳೆಸಿಕೊಳ್ಳಬೇಕೆಂದು ಸಂಪನ್ಮೂಲ ವ್ಯಕ್ತಿ ನಂದೀಶ್‌ ಶೆಟ್ಟರ್‌ ಹೇಳಿದರು.

Vijaya Karnataka 14 Dec 2019, 5:00 am
ಭದ್ರಾವತಿ: ಪರೀಕ್ಷೆ ಸಮರ್ಥವಾಗಿ ಎದುರಿಸಲು ಅಗತ್ಯವಿರುವ ಆತ್ಮಸ್ಥೆತ್ರೖರ್ಯ, ಮನೋಬಲ ಬೆಳೆಸಿಕೊಳ್ಳಬೇಕೆಂದು ಸಂಪನ್ಮೂಲ ವ್ಯಕ್ತಿ ನಂದೀಶ್‌ ಶೆಟ್ಟರ್‌ ಹೇಳಿದರು.
Vijaya Karnataka Web mental stebility is important to face the test
ಪರೀಕ್ಷೆ ಎದುರಿಸಲು ಮನೋಬಲ ಮುಖ್ಯ


ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿಸುಧಾರಣೆ ಕಂಡುಕೊಳ್ಳುವ ನಿಟ್ಟಿನಲ್ಲಿಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ನ್ಯೂಟೌನ್‌ ಶ್ರೀಸತ್ಯಸಾಯಿ ಸಮಗ್ರ ಶಿಕ್ಷಣ ಸಂಸ್ಥೆ ಸಹಕಾರದೊಂದಿಗೆ ಶುಕ್ರವಾರ ಶ್ರೀ ಶಿವ ಸಾಯಿ ಕೃಪಾ ಧಾಮ ಆವರಣದಲ್ಲಿಹಮ್ಮಿಕೊಂಡಿದ್ದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿಸುಧಾರಣೆ ಕಂಡುಕೊಳ್ಳುವ ನಿಟ್ಟಿನಲ್ಲಿವಿಶೇಷ ನೈಪುಣ್ಯ ಕೌಶಲ ತರಬೇತಿ ಕಾರ್ಯಾಗಾರದಲ್ಲಿಅವರು ಮಾತನಾಡಿದರು.

ಸರಕಾರಿ, ಅನುದಾನಿತ ಮತ್ತು ಅನುದಾನ ರಹಿತ ತಾಲೂಕಿನ ಒಟ್ಟು 85 ಪ್ರೌಢಶಾಲೆಗಳ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಕಾರಾರ‍ಯಗಾರವನ್ನು ವಿದ್ಯಾರ್ಥಿಗಳು ಸೇರಿದಂತೆ ಮುಖ್ಯ ಅತಿಥಿಗಳು ಉದ್ಘಾಟಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್‌.ಸೋಮಶೇಖರಯ್ಯ ಪ್ರಾಸ್ತಾವಿಕ ಮಾತನಾಡಿದರು. ಶ್ರೀಸತ್ಯಸಾಯಿ ಸಮಗ್ರ ಶಿಕ್ಷಣ ಸಂಸ್ಥೆ ಆಡಳಿತಾಧಿಕಾರಿ ಡಿ. ಪ್ರಭಾಕರ ಬೀರಯ್ಯ, ಜಂಟಿ ಆಡಳಿತಾಧಿಕಾರಿ ಸೌಮ್ಯ ಪ್ರಭಾಕರ ಬೀರಯ್ಯ, ಶಿಕ್ಷಣ ಸಂಸ್ಥೆ ಪ್ರಾಂಶುಪಾಲರಾದ ಮೃತ್ಯುಂಜಯ ಕಾನಿಟ್ಕರ್‌, ಶಾಮರಾಯ ಆಚಾರ್‌, ಮುಖ್ಯ ಶಿಕ್ಷಕ ಜಿ.ಪಿ. ಪರಮೇಶ್ವರಪ್ಪ, ರವಿಕುಮಾರ್‌, ಶಿಕ್ಷಣ ಸಂಪನ್ಮೂಲ ಅಧಿಕಾರಿ ನವೀದ್‌ ಅಹಮದ್‌ ಪವೀರ್‍ಜ್‌, ಸಿಆರ್‌ಪಿಸಿ ಚನ್ನಪ್ಪ ಮತ್ತಿತರರು ಪಾಲ್ಗೊಂಡಿದ್ದರು.

ವಿದ್ಯಾರ್ಥಿಗಳಾದ ವೈಷ್ಣವಿ ಕಾಮತ್‌, ಅಶ್ವಿನಿ ಪ್ರಾರ್ಥಿಸಿದರು. ಸಹ ಶಿಕ್ಷಕಿ ಪಿ.ತುಳಸಿದೇವಿ ನಿರೂಪಿಸಿದರು. ಕ್ಷೇತ್ರ ಶಿಕ್ಷಣ ಸಂಪನ್ಮೂಲ ಸಮನ್ವಯಾಧಿಕಾರಿ ಎ.ಜಿ ರಾಜಶೇಖರ್‌ ವಂದಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ