ಸಾಗರ (ಶಿವಮೊಗ್ಗ): ಇಲ್ಲಿನ ನಿವಾಸಿಯಾಗಿದ್ದ ಅಪ್ರಾಪ್ತ ಯುವತಿಯ ಮೇಲೆ ಆಕೆಯ ದೊಡ್ಡಪ್ಪನ ಮಗ ಆತ್ಯಾಚಾರವೆಸಗಿದ ಸಂಬಂಧ ದಾವಣಗೆರೆ ಜಿಲ್ಲೆಯ ಜಗಳೂರಿನಲ್ಲಿ ಪ್ರಕರಣ ದಾಖಲಾಗಿದ್ದು, ಗ್ರಾಮಾಂತರ ಠಾಣೆಗೆ ವರ್ಗಾಯಿಸಲಾಗಿದೆ. ಬಾಲಕಿಯ ಸಂಬಂಧಿಯೊಬ್ಬರು ನೀಡಿದ ದೂರಿನ ಮೇಲೆ ಜೂನ್ 1ರಂದು ಪ್ರಕರಣ ದಾಖಲಾಗಿತ್ತು. ಸಂತ್ರಸ್ತ ಬಾಲಕಿಯು ತಾಯಿಯೊಂದಿಗೆ ಕೂಲಿ ಮಾಡಿ ಜೀವನ ಸಾಗಿಸುತ್ತಿದ್ದು, ಕಾರ್ಯ ನಿಮಿತ್ತ ತಾಯಿ ಮತ್ತು ಮಗಳು ನಗರದಲ್ಲಿ ಮನೆ ಮಾಡಿಕೊಂಡಿದ್ದರು.
ಸಾಗರ ತಾಲೂಕಿನ ಗ್ರಾಮವೊಂದರಲ್ಲಿ ಬಾಲಕಿಯ ದೊಡ್ಡಪ್ಪನ ಮನೆ ಇದ್ದು, ಸಂಬಂಧಿಕರಾಗಿರುವುದರಿಂದ ಅಲ್ಲಿಗೆ ಹೋಗಿ ಬರುತ್ತಿದ್ದರು. ಮೇ ತಿಂಗಳಲ್ಲಿ ದೊಡ್ಡಪ್ಪನ ಮನೆಯಲ್ಲಿ ಯಾರು ಇಲ್ಲದ ಸಂದರ್ಭ ದೊಡ್ಡಪ್ಪನ ಮಗನೇ ಬಾಲಕಿಯ ಮೇಲೆ ಆತ್ಯಾಚಾರ ಎಸಗಿದ್ದಾನೆ. ಆದರೆ ಪ್ರಕರಣ ಬೆಳಕಿಗೆ ಬಂದಿರಲಿಲ್ಲ.
ಈಚೆಗೆ ಸಂಬಂಧಿಕರ ಕಾರ್ಯಕ್ರಮವೊಂದಕ್ಕೆ ದಾವಣಗೆರೆಯ ಜಗಳೂರಿಗೆ ತಾಯಿ ಮಗಳು ಹೋಗಿದ್ದರು. ಈ ಸಂದರ್ಭ ಘಟನೆಯ ಬಗ್ಗೆ ಅವರ ಅಲ್ಲಿನ ಸಂಬಂಧಿಗೆ ತಿಳಿದು ಬಂದಿದೆ. ಕೂಡಲೇ ಸಂಬಂಧಿಕರು ದಾವಣಗೆರೆ ಮಹಿಳಾ ಮತ್ತು ಸಾಂತ್ವನ ಕೇಂದ್ರಕ್ಕೆ ಮಾಹಿತಿ ನೀಡಿದ್ದಾರೆ.
ಘಟನೆಯ ಸಂಪೂರ್ಣ ಮಾಹಿತಿ ಪಡೆದು ಜಗಳೂರಿನಲ್ಲಿ ಪ್ರಕರಣ ದಾಖಲಿಸಲಾಗಿದೆ. ಜಗಳೂರಿನ ಶಿಶು ಅಭಿವೃದ್ಧಿ ಯೋಜನೆಯ ಮಹಿಳಾ ಮೇಲ್ವಿಚಾರಕಿಯವರು ದಾವಣಗೆರೆ ಜಿಲ್ಲೆಯ ಬಿಳಿಚೋಡು ಠಾಣೆಯಲ್ಲಿ ದೂರು ನೀಡಿದ್ದು, ಮುಂದಿನ ತನಿಖೆಗೆ ಸಾಗರ ಗ್ರಾಮಾಂತರ ಠಾಣೆಗೆ ಪ್ರಕರಣವನ್ನು ವರ್ಗಾಯಿಸಲಾಗಿದೆ.
"ಸರ್ವೋಚ್ಚ ನ್ಯಾಯಾಲಯದ ನಿರ್ದೇಶನದಂತೆ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ವ್ಯಕ್ತಿಯ ಖಾಸಗಿತನವನ್ನು ಕಾಪಾಡಲು ಅವರ ಗುರುತನ್ನು ಇಲ್ಲಿ ಬಹಿರಂಗಪಡಿಸಿಲ್ಲ."
ಸಾಗರ ತಾಲೂಕಿನ ಗ್ರಾಮವೊಂದರಲ್ಲಿ ಬಾಲಕಿಯ ದೊಡ್ಡಪ್ಪನ ಮನೆ ಇದ್ದು, ಸಂಬಂಧಿಕರಾಗಿರುವುದರಿಂದ ಅಲ್ಲಿಗೆ ಹೋಗಿ ಬರುತ್ತಿದ್ದರು. ಮೇ ತಿಂಗಳಲ್ಲಿ ದೊಡ್ಡಪ್ಪನ ಮನೆಯಲ್ಲಿ ಯಾರು ಇಲ್ಲದ ಸಂದರ್ಭ ದೊಡ್ಡಪ್ಪನ ಮಗನೇ ಬಾಲಕಿಯ ಮೇಲೆ ಆತ್ಯಾಚಾರ ಎಸಗಿದ್ದಾನೆ. ಆದರೆ ಪ್ರಕರಣ ಬೆಳಕಿಗೆ ಬಂದಿರಲಿಲ್ಲ.
ಈಚೆಗೆ ಸಂಬಂಧಿಕರ ಕಾರ್ಯಕ್ರಮವೊಂದಕ್ಕೆ ದಾವಣಗೆರೆಯ ಜಗಳೂರಿಗೆ ತಾಯಿ ಮಗಳು ಹೋಗಿದ್ದರು. ಈ ಸಂದರ್ಭ ಘಟನೆಯ ಬಗ್ಗೆ ಅವರ ಅಲ್ಲಿನ ಸಂಬಂಧಿಗೆ ತಿಳಿದು ಬಂದಿದೆ. ಕೂಡಲೇ ಸಂಬಂಧಿಕರು ದಾವಣಗೆರೆ ಮಹಿಳಾ ಮತ್ತು ಸಾಂತ್ವನ ಕೇಂದ್ರಕ್ಕೆ ಮಾಹಿತಿ ನೀಡಿದ್ದಾರೆ.
ಘಟನೆಯ ಸಂಪೂರ್ಣ ಮಾಹಿತಿ ಪಡೆದು ಜಗಳೂರಿನಲ್ಲಿ ಪ್ರಕರಣ ದಾಖಲಿಸಲಾಗಿದೆ. ಜಗಳೂರಿನ ಶಿಶು ಅಭಿವೃದ್ಧಿ ಯೋಜನೆಯ ಮಹಿಳಾ ಮೇಲ್ವಿಚಾರಕಿಯವರು ದಾವಣಗೆರೆ ಜಿಲ್ಲೆಯ ಬಿಳಿಚೋಡು ಠಾಣೆಯಲ್ಲಿ ದೂರು ನೀಡಿದ್ದು, ಮುಂದಿನ ತನಿಖೆಗೆ ಸಾಗರ ಗ್ರಾಮಾಂತರ ಠಾಣೆಗೆ ಪ್ರಕರಣವನ್ನು ವರ್ಗಾಯಿಸಲಾಗಿದೆ.
"ಸರ್ವೋಚ್ಚ ನ್ಯಾಯಾಲಯದ ನಿರ್ದೇಶನದಂತೆ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ವ್ಯಕ್ತಿಯ ಖಾಸಗಿತನವನ್ನು ಕಾಪಾಡಲು ಅವರ ಗುರುತನ್ನು ಇಲ್ಲಿ ಬಹಿರಂಗಪಡಿಸಿಲ್ಲ."