ಆ್ಯಪ್ನಗರ

ಶಿವಮೊಗ್ಗ: ಬಿಜೆಪಿಯ ಭಾನುಪ್ರಕಾಶ್ ಪುತ್ರ ಇದ್ದ ಕಾರಿನ ಮೇಲೆ ರಾಡ್‍ನಿಂದ ದಾಳಿ

ಘಟನೆಯ ಬಗ್ಗೆ ಮಾಹಿತಿ ಲಭ್ಯವಾಗುತ್ತಿದ್ದಂತೆಯೇ ಮತ್ತೂರು ಗ್ರಾಮಸ್ಥರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಇದರಿಂದಾಗಿ ಕೆಲಹೊತ್ತು ಸಂದಿಗ್ಧ ಸ್ಥಿತಿ ನಿರ್ಮಾಣವಾಗಿತ್ತು. ಎಸ್‍ಪಿ ಬಿ.ಎಂ. ಲಕ್ಷ್ಮೀಪ್ರಸಾದ್ ಸೇರಿದಂತೆ ಪೊಲೀಸ್ ಅಧಿಕಾರಿಗಳು ಘಟನಾ ಸ್ಥಳಕ್ಕೆ ದೌಡಾಯಿಸಿದರು.

Vijaya Karnataka Web 6 May 2022, 11:44 pm
ಶಿವಮೊಗ್ಗ: ಸೂಳೆಬೈಲು ಸಮೀಪದ ಇಂದಿರಾನಗರದಲ್ಲಿ ಬಿಜೆಪಿ ಪ್ರಕೋಷ್ಠಗಳ ರಾಜ್ಯ ಸಂಚಾಲಕ ಎಂಬಿ ಭಾನುಪ್ರಕಾಶ್ ಅವರ ಪುತ್ರ ಹರಿಕೃಷ್ಣ ಅವರಿದ್ದ ಕಾರಿನ ಮೇಲೆ ಶುಕ್ರವಾರ ರಾತ್ರಿ ಕಿಡಿಗೇಡಿಗಳು ರಾಡ್‍ನಿಂದ ದಾಳಿ ಮಾಡಿರುವ ಘಟನೆ ನಡೆದಿದೆ.
Vijaya Karnataka Web ಪೊಲೀಸ್‌
ಪೊಲೀಸ್‌


ಗೃಹ ಸಚಿವ ಆರಂಭದಿಂದಲೇ ಎಡವುತ್ತಾ ಬಂದಿದ್ದಾರೆ. ಅವರು ರಾಜೀನಾಮೆ ನೀಡಬೇಕು: ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್ ಅಗ್ರಹ

ಶಿವಮೊಗ್ಗದಿಂದಮತ್ತೂರಿಗೆ ಹೋಗುತ್ತಿದ್ದಾಗ ಏಕಾಏಕಿ ಬೈಕ್‍ನಲ್ಲಿ ಬಂದ ಮೂರ್ನಾಲ್ಕು ಜನ ಕಿಡಿಗೇಡಿಗಳು ಕಾರಿನ ಹಿಂಭಾಗ ರಾಡ್‍ನಿಂದ ದಾಳಿ ಮಾಡಿ ಪರಾರಿಯಾಗಿದ್ದಾರೆ. ಕತ್ತಲಾಗಿದ್ದರಿಂದ ಯಾರು ದಾಳಿ ಮಾಡಿದ್ದಾರೆ, ಉದ್ದೇಶವೇನು ಎಂಬ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.

ಸ್ಥಳದಲ್ಲಿ ಸಂದಿಗ್ಧ ಸ್ಥಿತಿ, ಎಸ್‍ಪಿ ದೌಡು: ಘಟನೆಯ ಬಗ್ಗೆ ಮಾಹಿತಿ ಲಭ್ಯವಾಗುತ್ತಿದ್ದಂತೆಯೇ ಮತ್ತೂರು ಗ್ರಾಮಸ್ಥರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಇದರಿಂದಾಗಿ ಕೆಲಹೊತ್ತು ಸಂದಿಗ್ಧ ಸ್ಥಿತಿ ನಿರ್ಮಾಣವಾಗಿತ್ತು. ಎಸ್‍ಪಿ ಬಿ.ಎಂ. ಲಕ್ಷ್ಮೀಪ್ರಸಾದ್ ಸೇರಿದಂತೆ ತುಂಗಾನಗರ, ದೊಡ್ಡಪೇಟೆ ಸೇರಿದಂತೆ ವಿವಿಧ ಠಾಣೆಯ ಪೊಲೀಸ್ ಅಧಿಕಾರಿಗಳು ಘಟನಾ ಸ್ಥಳಕ್ಕೆ ದೌಡಾಯಿಸಿದರು. ಆರೋಪಿಗಳನ್ನು ಪತ್ತೆ ಹಚ್ಚಿ ಕ್ರಮಕೈಗೊಳ್ಳುವ ಭರವಸೆ ನೀಡಿದ ಬಳಿಕ ಪರಿಸ್ಥಿತಿ ತಿಳಿಯಾಯಿತು. ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೆಎಸ್‌ಆರ್‌ಟಿಸಿ ಬಸ್‌ ಚಾಲಕನ ಮೇಲೆ ಹಲ್ಲೆ

ಶಿವಮೊಗ್ಗ: ಕೆಎಸ್‌ಆರ್‌ಟಿಸಿ ಬಸ್‌ವೊಂದನ್ನು ಹಿಂಬಾಲಿಸಿಕೊಂಡು ಬಂದ ಇಬ್ಬರು ಬಸ್‌ ನಿಲ್ದಾಣದಲ್ಲಿಯೇ ಚಾಲಕನ ಮೇಲೆ ಹಲ್ಲೆಮಾಡಿದ ಘಟನೆ ನಡೆದಿದ್ದು, ಅವರನ್ನು ಮೆಗ್ಗಾನ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.

ಚಾಲಕ ಸೋಮಲಿಂಗಪ್ಪ ಯಾದವ್‌ ಎಂಬುವವರ ಮೇಲೆ ಇರ್ಷದ್‌ ಅಹಮ್ಮದ್‌ ಮತ್ತು ಆತನ ಸಹಚರರು ಹಲ್ಲೆಮಾಡಿದ್ದಾರೆ.

ಸೋಮಲಿಂಗಪ್ಪ ಅವರು ಮೈಸೂರು-ಶಿವಮೊಗ್ಗ-ಹೊಸಪೇಟೆ ಮಾರ್ಗದ ಕೆಎಸ್‌ಆರ್‌ಟಿಸಿ ಬಸ್‌ ಚಾಲಕರಾಗಿದ್ದು, ಶಿವಮೊಗ್ಗ ಬೈಪಾಸ್‌ ರಸ್ತೆಯಲ್ಲಿಬಸ್‌ ಚಲಾಯಿಸಿಕೊಂಡು ಬರುವಾಗ ಬೈಕಿನಲ್ಲಿಬಂದ ಇಬ್ಬರು ಬಸ್‌ ಅಡ್ಡಗಟ್ಟಲು ಯತ್ನಿಸಿದ್ದಾರೆ. ಬಳಿಕ ಚಾಲಕನು ಅವರಿಗೆ ಬೈಯ್ದಿದ್ದಾರೆ.

ತೀರ್ಥಹಳ್ಳಿಯಲ್ಲಿ ಬಿಜೆಪಿ ಖಾಲಿ ಆಗುತ್ತದೆ: ಗೃಹ ಸಚಿವ ಆರಗ ಜ್ಞಾನೇಂದ್ರಗೆ ಮಾಜಿ ಸಚಿವ ಕಿಮ್ಮನೆ ರತ್ನಾಕರ ಸವಾಲ್‌

ನಂತರ, ಬಸ್‌ ಚಲಾಯಿಸಿಕೊಂಡು ನಿಲ್ದಾಣಕ್ಕೆ ಬಂದಿದ್ದಾರೆ. ಆದರೆ, ಬೈಕ್‌ ಸವಾರರು ಹಿಂಬಾಲಿಸಿಕೊಂಡು ನಿಲ್ದಾಣದವರೆಗೆ ಬಂದಿದ್ದು, ಚಾಲಕನ ಕಿವಿ ಮತ್ತು ಕೈ ಮೇಲೆ ಹಲ್ಲೆ ನಡೆಸಿದ್ದಾರೆ. ತಕ್ಷಣ ಇನ್ನುಳಿದ ಸಿಬ್ಬಂದಿ ಹಲ್ಲೆಕೋರರನ್ನು ಹಿಡಿಯಲು ಮುಂದಾದಾಗ ಓಡಿಹೋಗಲು ಯತ್ನಿಸಿದ್ದಾರೆ. ಆದರೆ, ಇಬ್ಬರು ಪರಾರಿಯಾಗಿದ್ದು ಇರ್ಷಾದ್‌ ಸಿಕ್ಕಿ ಬಿದ್ದಿದ್ದಾನೆ. ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ