ಆ್ಯಪ್ನಗರ

ಧರ್ಮಸ್ಥಳಕ್ಕೆ ಕಾಲ್ನ್ನಡಿಗೆಯಲ್ಲಿ ಹೊರಟ ಮೋದಿ ಅಭಿಮಾನಿ!

ನರೇಂದ್ರ ಮೋದಿ ಅವರು ಎರಡನೇ ಅವಧಿಗೆ ಪ್ರಧಾನಮಂತ್ರಿ ಆದ ಹಿನ್ನೆಲೆಯಲ್ಲಿ ಅವರ ಅಭಿಮಾನಿಯೊಬ್ಬರು ಶನಿವಾರ ಧರ್ಮಸ್ಥಳಕ್ಕೆ ಪಾದಯಾತ್ರೆ ಕೈಗೊಂಡಿದ್ದಾರೆ.

Vijaya Karnataka 2 Jun 2019, 5:00 am
ಹೊಸನಗರ: ನರೇಂದ್ರ ಮೋದಿ ಅವರು ಎರಡನೇ ಅವಧಿಗೆ ಪ್ರಧಾನಮಂತ್ರಿ ಆದ ಹಿನ್ನೆಲೆಯಲ್ಲಿ ಅವರ ಅಭಿಮಾನಿಯೊಬ್ಬರು ಶನಿವಾರ ಧರ್ಮಸ್ಥಳಕ್ಕೆ ಪಾದಯಾತ್ರೆ ಕೈಗೊಂಡಿದ್ದಾರೆ.
Vijaya Karnataka Web SMR-1HOSP7


ತಾಲೂಕಿನ ಮೂಡುಗೊಪ್ಪ ನಗರದ ವಿವೇಕ ಜೋಗಿ ಎಂಬುವರು ಮೋದಿ ಮತ್ತೊಮ್ಮೆ ಪ್ರಧಾನಿಯಾದಲ್ಲಿ ತಾವು ಧರ್ಮಸ್ಥಳಕ್ಕೆ ಕಾಲುನಡಿಗೆಯಲ್ಲಿ ತೆರಳಿ ಶ್ರೀಮಂಜುನಾಥನ ದರ್ಶನ ಮಾಡುವುದಾಗಿ ಹರಕೆ ಹೊತ್ತಿದ್ದರು. ಮೋದಿ ಪ್ರಮಾಣವಚನ ಸ್ವೀಕರಿಸಿ ಸರಕಾರ ರಚನೆಯಾಗುತ್ತಿದ್ದಂತೆ ಇವರು ತಮ್ಮ ಹರಕೆ ತೀರಿಸಲು ಮುಂದಾಗಿದ್ದಾರೆ.

ಮಂದಾರ್ತಿ ಯಕ್ಷ ಗಾನ ಮೇಳದ ವಾಹನದಲ್ಲಿ ಚಾಲಕರಾಗಿ ಸೇವೆ ಸಲ್ಲಿಸುತ್ತಿರುವ ಇವರು, ನಗರದಿಂದ ಹುಲಿಕಲ್‌, ಸಿದ್ದಾಪುರ ಮಾರ್ಗವಾಗಿ ಸುಮಾರು 180 ಕಿ.ಮೀ. ದೂರದ ಧರ್ಮಸ್ಥಳಕ್ಕೆ ಏಕಾಂಗಿಯಾಗಿ ಪಾದಯಾತ್ರೆ ಕೈಗೊಂಡಿದ್ದಾರೆ.

ನಮ್ಮ ಕುಟುಂಬದ ಪ್ರತಿಯೊಬ್ಬ ಸದಸ್ಯರೂ ನರೇಂದ್ರ ಮೋದಿಯವರ ಅಭಿಮಾನಿಗಳು. ಅವರ ಆಡಳಿತದಲ್ಲಿ ದೇಶ ಅಭಿವೃದ್ಧಿಯತ್ತ ಸಾಗುತ್ತಿದೆ. ಚುನಾವಣಾ ಪೂರ್ವದಲ್ಲಿಯೇ ಹರಕೆ ಹೊತ್ತಿದ್ದು, ಈಗ ತೀರಿಸಲು ಮುಂದಾಗಿದ್ದೇನೆ ಎನ್ನುತ್ತಾರೆ ವಿವೇಕ ಜೋಗಿ.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ