ಆ್ಯಪ್ನಗರ

ಮತ್ತೆ ಮೋದಿ ಸರಕಾರ: ಹಾಲಪ್ಪ

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿ.ವೈ.ರಾಘವೇಂದ್ರ ಅವರು ಸುಮಾರು 2ಲಕ್ಷ ಮತಗಳ ಅಂತರದಿಂದ ವಿಜಯಸಾಧಿಸಲಿದ್ದು, ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರಕಾರ ಮತ್ತೊಮ್ಮೆ ಅಧಿಕಾರಕ್ಕೆ ಬರುವುದು ಖಚಿತ ಎಂದು ಶಾಸಕ ಎಚ್‌.ಹಾಲಪ್ಪ ವಿಶ್ವಾಸವ್ಯಕ್ತಪಡಿಸಿದರು.

Vijaya Karnataka 22 Apr 2019, 5:00 am
ಸಾಗರ : ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿ.ವೈ.ರಾಘವೇಂದ್ರ ಅವರು ಸುಮಾರು 2ಲಕ್ಷ ಮತಗಳ ಅಂತರದಿಂದ ವಿಜಯಸಾಧಿಸಲಿದ್ದು, ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರಕಾರ ಮತ್ತೊಮ್ಮೆ ಅಧಿಕಾರಕ್ಕೆ ಬರುವುದು ಖಚಿತ ಎಂದು ಶಾಸಕ ಎಚ್‌.ಹಾಲಪ್ಪ ವಿಶ್ವಾಸವ್ಯಕ್ತಪಡಿಸಿದರು.
Vijaya Karnataka Web SMR-21sgr9


ತಾಲೂಕಿನ ಜೋಗ ಕಾರ್ಗಲ್‌ನಲ್ಲಿ ಭಾನುವಾರ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಪರ ರೋಡ್‌ ಷೋ ಮೂಲಕ ಮತಯಾಚಿಸಿ ಅವರು ಮಾತನಾಡಿದರು.

ರಾಜ್ಯ ಸರಕಾರ ವಿಶ್ವವಿಖ್ಯಾತ ಜೋಗ ಜಲಪಾತದ ಅಭಿವೃದ್ಧಿಯನ್ನು ಸಂಪೂರ್ಣ ನಿರ್ಲಕ್ಷಿಸಿದೆ. ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ಬಂದು, ಬಿ.ವೈ.ರಾಘವೇಂದ್ರ ಸಂಸದರಾಗಿ ಆಯ್ಕೆಯಾದರೆ ಜೋಗ ಜಲಪಾತ ಅಭಿವೃದ್ಧಿಗೆ ಕೇಂದ್ರ ಸರಕಾರದಿಂದ ಹಣ ತರಲು ಸಹಕಾರಿಯಾಗಲಿದೆ ಎಂದರು.

ಜೋಗ್‌ ಕಾರ್ಗಲ್‌ ಚುನಾವಣಾ ಪ್ರಭಾರ ಆನಂದ ಜನ್ನೆಹಕ್ಲು, ಪ್ರಮುಖರಾದ ಕೆ.ಸುರೇಶ್‌ , ಮಹೇಶ, ನವೀನ್‌, ನಾಗರಾಜ ಇತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ