ಆ್ಯಪ್ನಗರ

ಬರೀ ಭರವಸೆಯ ಮೋದಿ: ಮಧು

ಜನರಿಗೆ ನೀಡಿದ ಭರವಸೆ ಈಡೇರಿಸದೆ ದೇವರು, ಧರ್ಮ, ಯುದ್ಧ ಎನ್ನುವ ಹೆಸರಿನಲ್ಲಿ ರಾಷ್ಟ್ರದ ಜನ ಸಾಮಾನ್ಯರನ್ನು ದಿಕ್ಕು ತಪ್ಪಿಸುತ್ತಿದ್ದಾರೆ ನರೇಂದ್ರ ಮೋದಿ. ಅವರ ನೇತೃತ್ವದ ಬಿಜೆಪಿಗೆ ಮತದಾರರು ತಕ್ಕ ಪಾಠ ಕಲಿಸಬೇಕೆಂದು ಲೋಕಸಭಾ ಚುನಾವಣೆ ಮೈತ್ರಿ ಪಕ್ಷ ದ ಅಭ್ಯರ್ಥಿ ಮಧು ಬಂಗಾರಪ್ಪ ಹೇಳಿದರು.

Vijaya Karnataka Web 18 Apr 2019, 5:00 am
ರಿಪ್ಪನ್‌ಪೇಟೆ : ಜನರಿಗೆ ನೀಡಿದ ಭರವಸೆ ಈಡೇರಿಸದೆ ದೇವರು, ಧರ್ಮ, ಯುದ್ಧ ಎನ್ನುವ ಹೆಸರಿನಲ್ಲಿ ರಾಷ್ಟ್ರದ ಜನ ಸಾಮಾನ್ಯರನ್ನು ದಿಕ್ಕು ತಪ್ಪಿಸುತ್ತಿದ್ದಾರೆ ನರೇಂದ್ರ ಮೋದಿ. ಅವರ ನೇತೃತ್ವದ ಬಿಜೆಪಿಗೆ ಮತದಾರರು ತಕ್ಕ ಪಾಠ ಕಲಿಸಬೇಕೆಂದು ಲೋಕಸಭಾ ಚುನಾವಣೆ ಮೈತ್ರಿ ಪಕ್ಷ ದ ಅಭ್ಯರ್ಥಿ ಮಧು ಬಂಗಾರಪ್ಪ ಹೇಳಿದರು.
Vijaya Karnataka Web SMR-16rpt3


ಹೆದ್ದಾರಿಪುರ ಗ್ರಾಮದಲ್ಲಿ ಮಂಗಳವಾರ ನಡೆದ ಚುನಾವಣೆ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ಬಾರಿ ನಡೆದ ಲೋಕ ಸಭಾ ಚುನಾವಣೆಯಲ್ಲಿ ಭಾರತದ ಪ್ರತಿಯೊಬ್ಬ ನಾಗರಿಕರ ಖಾತೆಗೆ 15 ಲಕ್ಷ ರೂ. ಹಾಕುತ್ತೇನೆ. ಯುವಕರಿಗೆ ಉದ್ಯೋಗ ನೀಡುವುದಾಗಿ ಹೇಳಿದ್ದರು. ಐದು ವರ್ಷದಲ್ಲಿ ಅತಿ ಕಡಿಮೆ ಉದ್ಯೋಗ ನೀಡಲಾಗಿದೆ. ರೈತರಿಗೆ ಯಾವುದೇ ಯೋಜನೆ ನೀಡಿಲ್ಲ. ಶ್ರೀಮಂತ ಉದ್ಯಮಿಗಳ ಸಾಲ ಮನ್ನಾ ಮಾಡಿದ್ದಾರೆ ಎಂದು ಆಪಾದಿಸಿದರು. ಮೈತ್ರಿ ಪಕ್ಷ ಕ್ಕೆ ಮತದಾರರು ಮತ ನೀಡಬೇಕೆಂದು ಮನವಿ ಮಾಡಿದರು.

ಜೆಡಿಎಸ್‌ ಜಿಲ್ಲಾಧ್ಯಕ್ಷ ಆರ್‌.ಎಂ. ಮಂಜುನಾಥಗೌಡ, ತಾ.ಪಂ.ಅಧ್ಯಕ್ಷ ವಾಸಪ್ಪಗೌಡ, ಜಿ.ಪಂ.ಸದಸ್ಯರಾದ ಕಲಗೋಡು ರತ್ನಾಕರ, ಶ್ವೇತಾಬಂಡಿ, ತಾಲೂಕು ಜಿಡಿಎಸ್‌ ಅಧ್ಯಕ್ಷ ಜಯರಾಂ, ಮುಖಂಡರಾದ ಬಿ.ಪಿ.ರಾಮಚಂದ್ರ , ಎಂ.ಎಂ. ಪರಮೇಶ, ಸುಮತಿಪೂಜಾರ್‌, ಜಯಲಕ್ಷ್ಮೀಗಂಗಾಧರ್‌, ಕಲ್ಲೂರು ಈರಣ್ಣ, ಗ್ರಾ.ಪಂ.ಅಧ್ಯಕ್ಷೆ ಗೀತಾಮಂಜುನಾಥ, ರತ್ನಮ್ಮ, ಉಪಾಧ್ಯಕ್ಷ ಬಸೀರ್‌ ಅಹಮ್ಮದ್‌, ಅಮೀರ್‌ ಹಂಜಾ, ಹುಗಡಿ ವರ್ತೇಶ, ಮಳವಳ್ಳಿ ಮಂಜುನಾಥ್‌ ಇತರರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ