ಆ್ಯಪ್ನಗರ

ದೊಡ್ಡೇರಿ ಬಳಿ ಮಂಗ ಸಾವು: ಹೆಚ್ಚಿದ ಆತಂಕ

ತಾಲೂಕಿನ ದೊಡ್ಡೇರಿ ಗ್ರಾಮದಲ್ಲಿ ಮಂಗವೊಂದು ಶುಕ್ರವಾರ ಮೃತಪಟ್ಟಿದ್ದು, ಸಾರ್ವಜನಿಕರಲ್ಲಿ ಆತಂಕ ಹೆಚ್ಚಿಸಿದೆ.

Vijaya Karnataka 26 Jan 2019, 5:00 am
ಭದ್ರಾವತಿ : ತಾಲೂಕಿನ ದೊಡ್ಡೇರಿ ಗ್ರಾಮದಲ್ಲಿ ಮಂಗವೊಂದು ಶುಕ್ರವಾರ ಮೃತಪಟ್ಟಿದ್ದು, ಸಾರ್ವಜನಿಕರಲ್ಲಿ ಆತಂಕ ಹೆಚ್ಚಿಸಿದೆ.
Vijaya Karnataka Web BNG-SMR-25BDVT5


ದೊಡ್ಡೇರಿ ಗ್ರಾಮಕ್ಕೆ ಭೇಟಿ ನೀಡಿದ ಆರೋಗ್ಯ ಇಲಾಖೆ ತಂಡದವರು ಮೃತ ಮಂಗದ ಕಳೇಬರ ಪರಿಲೀಸಿದರು. ಕಳೆದ ಎರಡು ದಿನಗಳಿಂದ ಸಂಕ್ಲಿಪುರ, ಬೆಳ್ಳಿಗೆರೆ ಮತ್ತು ದೊಡ್ಡೇರಿ ಗ್ರಾಮಗಳಲ್ಲಿ ಮೂರು ಮಂಗಗಳು ಸತ್ತಿವೆ. ತಾಲೂಕು ಆರೋಗ್ಯ ಇಲಾಖೆ, ಕಂದಾಯ, ತಾ.ಪಂ, ಪಶುವೈದ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ.

ತಾಲೂಕು ವೈದ್ಯಾಧಿಕಾರಿ ಡಾ.ಗುಡದಪ್ಪ ಕಸಬಿ ಪತ್ರಿಕೆ ಮಾತನಾಡಿ, ತಾಲೂಕಿನ ವಿವಿಧ ಗ್ರಾಮಗಳಲ್ಲಿ ಮಂಗಗಳು ಸತ್ತಿರುವ ಹಿನ್ನೆಲೆಯಲ್ಲಿ ಮಾದರಿಗಳನ್ನು ಸಂಗ್ರಹಿಸಿ ಶಿವಮೊಗ್ಗ ಹಾಗೂ ಪುಣೆಯ ಪ್ರಯೋಗಾಲಯಗಳಿಗೆ ಕಳಿಸಲಾಗಿದೆ. ಪ್ರಾಥಮಿಕ ವರದಿ ಆಧಾರದಡಿ ಮಂಗಗಳಲ್ಲಿ ಮಾತ್ರ ಕಾಯಿಲೆ ಸೋಂಕು ಕಾಣಿಸಿಕೊಂಡಿದೆ. ಮುಂಜಾಗ್ರತೆ ವಹಿಸಿ ಗ್ರಾಮಗಳ ಸಾರ್ವಜನಿಕರಿಗೆ ಚುಚ್ಚು ಮದ್ದು ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ. ಮನುಷ್ಯರಲ್ಲಿ ಇದುವರೆಗೂ ಸೋಂಕು ಕಂಡು ಬಂದಿರುವುದಿಲ್ಲ, ಆತಂಕ ಬೇಡ ಎಂದರು.

ಅರಣ್ಯ ಇಲಾಖೆ ಸಿಬ್ಬಂದಿಗೆ ಚುಚ್ಚು ಮದ್ದು ನೀಡಲಾಗುತ್ತಿದೆ. ಗ್ರಾಮಗಳಲ್ಲಿ ವಾಸಿಸುತ್ತಿರುವ 6ರಿಂದ 65ರ ವಯೋಮಾನದವರಿಗೆ ಚುಚ್ಚುಮದ್ದು ನೀಡಲಾಗುವುದು. ಆರೋಗ್ಯ ಇಲಾಖೆ ನಿರ್ಲಕ್ಷ್ಯತನ ತೋರದೆ ಕ್ರಮಕ್ಕೆ ಮುಂದಾಗಿದೆ. ಸಿಬ್ಬಂದಿ ಸ್ಥಳಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಕರಪತ್ರಗಳ ಮೂಲಕ ಗ್ರಾಮಗಳಲ್ಲಿನ ಸಾರ್ವಜನಿಕರಿಗೆ ಅರಿವು ಮೂಡಿಸಲು ಗ್ರಾಮಸಭೆ ನಡೆಸಲಾಗುವುದು ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ