ಆ್ಯಪ್ನಗರ

ಪ್ರಥಮ ಹಂತದ ಕಾಮಗಾರಿ ಪೂರ್ಣಕ್ಕೆ ತಿಂಗಳ ಗಡುವು

ಸ್ಮಾರ್ಟ್‌ ಸಿಟಿ ಯೋಜನೆಯಡಿ ನಗರದ ನೆಹರೂ ಕ್ರೀಡಾಂಗಣದ ಪ್ರಥಮ ಹಂತದ ಅಭಿವೃದ್ಧಿ ಕಾಮಗಾರಿಗಳನ್ನು ಒಂದು ತಿಂಗಳೊಳಗೆ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್‌ ಅಧಿಕಾರಿಗಳಿಗೆ ಸೂಚನೆ ನೀಡಿದರು.

Vijaya Karnataka 28 Nov 2019, 5:00 am
ಶಿವಮೊಗ್ಗ: ಸ್ಮಾರ್ಟ್‌ ಸಿಟಿ ಯೋಜನೆಯಡಿ ನಗರದ ನೆಹರೂ ಕ್ರೀಡಾಂಗಣದ ಪ್ರಥಮ ಹಂತದ ಅಭಿವೃದ್ಧಿ ಕಾಮಗಾರಿಗಳನ್ನು ಒಂದು ತಿಂಗಳೊಳಗೆ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್‌ ಅಧಿಕಾರಿಗಳಿಗೆ ಸೂಚನೆ ನೀಡಿದರು.
Vijaya Karnataka Web monthly deadline for completion of first phase
ಪ್ರಥಮ ಹಂತದ ಕಾಮಗಾರಿ ಪೂರ್ಣಕ್ಕೆ ತಿಂಗಳ ಗಡುವು


ಜಿಲ್ಲಾಧಿಕಾರಿ ಕಚೇರಿಯಲ್ಲಿಬುಧವಾರ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಪ್ರಥಮ ಹಂತದಲ್ಲಿ2.30 ಕೋಟಿ ರೂ. ವೆಚ್ಚದಲ್ಲಿಕೈಗೊಳ್ಳಲಾಗಿರುವ ವಾಲಿಬಾಲ್‌ ಕೋರ್ಟ್‌ ನಿರ್ಮಾಣ, ಫೈಬರ್‌ ಚಾವಣಿ ಅಳವಡಿಕೆ, ಒಳಚರಂಡಿ ಅಭಿವೃದ್ಧಿ, ಇಂಟರ್‌ ಲಾಕ್‌ ಅಳವಡಿಕೆ, ಮಣ್ಣಿನ ಸವಕಳಿ ತಡೆಯಲು ತಡೆಗೋಡೆ ನಿರ್ಮಾಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ. ಸುಮಾರು ನಾಲ್ಕು ಮೀಟರ್‌ ಅಗಲದ ಜಾಗಿಂಗ್‌ ಟ್ರ್ಯಾಕ್‌ ನಿರ್ಮಾಣ ಮತ್ತು ಫ್ಲೈಡ್‌ ಲೈಟ್‌ಗಳ ಅಳವಡಿಕೆ ಕಾಮಗಾರಿಗಳನ್ನು ಆದಷ್ಟು ಬೇಗ ಪೂರ್ಣಗೊಳಿಸಬೇಕು. ಕಾಮಗಾರಿ ಅನುಷ್ಠಾನದಲ್ಲಿಈಗಾಗಲೇ ವಿಳಂಬವಾಗಿದೆ ಎಂದು ಹೇಳಿದರು.

ಒಳಾಂಗಣ ಕ್ರೀಡಾಂಗಣ ಅಭಿವೃದ್ಧಿ: ಒಳಾಂಗಣ ಕ್ರೀಡಾಂಗಣ ಸಮರ್ಪಕವಾಗಿ ನಿರ್ವಹಣೆ ಮಾಡಬೇಕು. ಇಲ್ಲಿಸದಸ್ಯತ್ವ ಪಡೆಯುವವರಿಗೆ ಗುರುತಿನ ಚೀಟಿ ನೀಡಬೇಕು. ಕ್ರೀಡಾಕೂಟ ಆಯೋಜಿಸುವವರಿಂದ ಭದ್ರತಾ ಠೇವಣಿ ಪಡೆಯಬೇಕು. ಎಲ್ಲಬಾಡಿಗೆಗಳನ್ನು ಆನ್‌ಲೈನ್‌ ಮೂಲಕ ಮಾತ್ರ ಪಡೆದುಕೊಳ್ಳಬೇಕು. ಈಗಾಗಲೇ ಒಳಾಂಗಣ ಕ್ರೀಡಾಂಗಣ ಮತ್ತು ಈಜುಕೊಳದ ಬಳಿ ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ. ನೆಹರೂ ಕ್ರೀಡಾಂಗಣದ ಹೊರ ಭಾಗದಲ್ಲಿಸಹ ಸಿಸಿ ಕ್ಯಾಮೆರಾ ಅಳವಡಿಸಬೇಕು ಎಂದರು.

ಎಸ್‌ಪಿ ಕೆ.ಎಂ. ಶಾಂತರಾಜು, ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಪುರುಷೋತ್ತಮ್‌, ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ವಟಾರೆ, ಸೂಡಾ ಆಯುಕ್ತ ಕರಿಭೀಮಣ್ಣನವರ್‌, ಯುವ ಸಬಲೀಕರಣ ಇಲಾಖೆ ಸಹಾಯಕ ನಿರ್ದೇಶಕ ಮಂಜುನಾಥ ಇತರರಿದ್ದರು.

===

ಅಂತಾರಾಷ್ಟ್ರೀಯ ದರ್ಜೆಯ ಅಂಗಣ
ಎರಡನೇ ಹಂತದಲ್ಲಿ30 ಕೋಟಿ ರೂ. ವೆಚ್ಚದಲ್ಲಿಕೈಗೊಳ್ಳಲು ಉದ್ದೇಶಿಸಿರುವ ಯೋಜನೆಗಳಿಗೆ ಈಗಾಗಲೇ ಅನುಮೋದನೆ ದೊರೆತಿದ್ದು, ಒಂದು ತಿಂಗಳ ಒಳಗಾಗಿ ಟೆಂಡರ್‌ ಪ್ರಕ್ರಿಯೆ ಪೂರ್ಣಗೊಳಿಸಿ ಆದಷ್ಟು ಬೇಗನೆ ಕಾಮಗಾರಿ ಆರಂಭಿಸಬೇಕು. ಎರಡನೇ ಹಂತದಲ್ಲಿಪ್ರಸ್ತುತ ಇರುವ ಹಾಕಿ ಕೋರ್ಟ್‌, ಹ್ಯಾಂಡ್‌ಬಾಲ್‌ ಮತ್ತು ಬಾಸ್ಕೆಟ್‌ಬಾಲ್‌ ಕೋರ್ಟ್‌ಗಳನ್ನು ಅಂತಾರಾಷ್ಟ್ರೀಯ ದರ್ಜೆಗೇರಿಸಲು ಯೋಜನೆ ರೂಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.

---------
ಟ್ರ್ಯಾಕ್‌ ಮೇಲೆ ವಾಕಿಂಗ್‌ ಮಾಡಿದ್ರೆ ದಂಡ
ಪ್ರಸ್ತುತ ಇರುವ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಕ್ರಮ ಕೈಗೊಳ್ಳಬೇಕು. ಕ್ರೀಡಾಕೂಟಗಳ ಸಂಘಟಕರಿಂದ ಭದ್ರತಾ ಠೇವಣಿ ಪಡೆದುಕೊಳ್ಳಬೇಕು. ಕ್ರೀಡಾಂಗಣದ ಯಾವುದೇ ಸೌಲಭ್ಯಗಳಿಗೆ ಧಕ್ಕೆ ಉಂಟಾದರೆ ಇದರಿಂದ ಪಡೆದುಕೊಳ್ಳಬೇಕು. ಪ್ರಸ್ತುತ ಇರುವ ಸಿಂಥೆಟಿಕ್‌ ಟ್ರ್ಯಾಕ್‌ ಮೇಲೆ ವಾಕಿಂಗ್‌ ಮಾಡಲು ಅವಕಾಶ ನೀಡಬಾರದು. ಇದನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಉಲ್ಲಂಘಿಘಿಸುವವರಿಗೆ ದಂಡ ವಿಧಿಸಬೇಕು.

-ಕೆ.ಬಿ.ಶಿವಕುಮಾರ್‌, ಜಿಲ್ಲಾಧಿಕಾರಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ