ಆ್ಯಪ್ನಗರ

ನೀವೇನ್ ಚಿನ್ನದ ಭತ್ತ, ಆಲೂಗಡ್ಡೆ ಬೆಳೆದು ಕೋಟಿ ಕೋಟಿ ಸಂಪಾದಿಸಿದ್ದೀರಾ?: ಸಿಎಂಗೆ ಪ್ರತಾಪ ಸಿಂಹ ಟಾಂಗ್

ಶಿವಮೊಗ್ಗದಲ್ಲಿ ಪ್ರತಿಕ್ರಿಯೆ ನೀಡಿದ ಮೈಸೂರು-ಕೊಡಗು ಸಂಸದ

Vijaya Karnataka Web 30 Oct 2018, 6:56 pm
ಶಿವಮೊಗ್ಗ: ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ಚಿನ್ನದ ಭತ್ತ, ಆಲೂಗಡ್ಡೆ ಬೆಳೆದು 167 ಕೋಟಿ ರೂಪಾಯಿ ಸಂಪಾದಿಸಿದ್ದಾರಾ ಎಂದು ಮೈಸೂರು-ಕೊಡಗು ಸಂಸದ ಪ್ರತಾಪ ಸಿಂಹ ತಿರುಗೇಟು ನೀಡಿದ್ದಾರೆ.
Vijaya Karnataka Web ಪ್ರತಾಪ್‌ ಸಿಂಹ
ಪ್ರತಾಪ್‌ ಸಿಂಹ


ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಅಡಕೆ ತೋಟದಲ್ಲಿ ಕೆಲಸ ಮಾಡಿ ಕೋಟ್ಯಂತರ ಹಣ ಸಂಪಾದನೆ ಮಾಡಿದ್ದಾರಾ ಎಂಬ ಸಿಎಂ ಕುಮಾರಸ್ವಾಮಿ ಅವರ ಪ್ರಶ್ನೆಗೆ ತೀಕ್ಷ್ಣವಾಗಿ ಉತ್ತರಿಸಿ ಸಂಸದ ಪ್ರತಾಪ ಸಿಂಹ ಉತ್ತರಿಸಿದ್ದಾರೆ.

ನಗರದ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಸಂಸದ ಪ್ರತಾಪ ಸಿಂಹ ಮಾತನಾಡಿದರು.

‘ಕುಮಾರಸ್ವಾಮಿ ಅವರೇನು ಹೊಳೆನರಸೀಪುರದಲ್ಲಿ ಚಿನ್ನದ ಭತ್ತ, ಆಲೂಗಡ್ಡೆ ಬೆಳೆದು 167 ಕೋಟಿ ರೂ. ಸಂಪಾದನೆ ಮಾಡಿದ್ದಾರಾ?’ ಎಂದು ಸಂಸದರು ಟಾಂಗ್ ನೀಡಿದರು.

ಭತ್ತ, ಆಲೂಗಡ್ಡೆಗಿಂತ ಅಡಕೆಗೆ ಹೆಚ್ಚಿನ ಬೆಲೆ ಇದೆ. ಹೀಗಾಗಿ, ಆರೋಪಿಸುವ ಮುನ್ನ ಕುಮಾರಸ್ವಾಮಿ ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ಪ್ರತಾಪ ಸಿಂಹ ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ