ಆ್ಯಪ್ನಗರ

ಮೂಲಸೌಲಭ್ಯ ಕಲ್ಪಿಸಲು ನಗರಸಭೆ ವಿಫಲ

ನಗರ ವ್ಯಾಪ್ತಿ ಮೂಲ ಸೌಲಭ್ಯ ಕಲ್ಪಿಸುವಲ್ಲಿ ನಗರಸಭೆ ಆಡಳಿತ ವಿಫಲವಾಗಿದೆ ಎಂದು ಆರೋಪಿಸಿ ಬುಧವಾರ ನಗರ ಬ್ಲಾಕ್‌ ಕಾಂಗ್ರೆಸ್‌ ಪ್ರತಿಭಟನೆ ನಡೆಸಿ, ಪೌರಾಯುಕ್ತ ಎಸ್‌.ರಾಜು ಅವರಿಗೆ ಮನವಿ ಸಲ್ಲಿಸಲಾಯಿತು.

Vijaya Karnataka 23 Aug 2019, 5:00 am
ಸಾಗರ : ನಗರ ವ್ಯಾಪ್ತಿ ಮೂಲ ಸೌಲಭ್ಯ ಕಲ್ಪಿಸುವಲ್ಲಿ ನಗರಸಭೆ ಆಡಳಿತ ವಿಫಲವಾಗಿದೆ ಎಂದು ಆರೋಪಿಸಿ ಬುಧವಾರ ನಗರ ಬ್ಲಾಕ್‌ ಕಾಂಗ್ರೆಸ್‌ ಪ್ರತಿಭಟನೆ ನಡೆಸಿ, ಪೌರಾಯುಕ್ತ ಎಸ್‌.ರಾಜು ಅವರಿಗೆ ಮನವಿ ಸಲ್ಲಿಸಲಾಯಿತು.
Vijaya Karnataka Web municipalities fail to provide infrastructure
ಮೂಲಸೌಲಭ್ಯ ಕಲ್ಪಿಸಲು ನಗರಸಭೆ ವಿಫಲ


ಪ್ರತಿಭಟನೆ ಉದ್ದೇಶಿಸಿ ನಗರ ಕಾಂಗ್ರೆಸ್‌ ಅಧ್ಯಕ್ಷ ತಸ್ರೀಫ್‌ ಮಾತನಾಡಿ, ನಗರಸಭೆಯಲ್ಲಿ ಚುನಾಯಿತ ಸದಸ್ಯರ ಮಾತಿಗೆ ಬೆಲೆ ಇಲ್ಲದ ಸ್ಥಿತಿ ನಿರ್ಮಾಣವಾಗಿದೆ. ಒಳಚರಂಡಿ ಕಾಮಗಾರಿ ಜತೆಗೆ ಈಚೆಗೆ ಸುರಿದ ಮಳೆಯಿಂದಾಗಿ ರಸ್ತೆ ಹಾಳಾಗಿದೆ. ಚರಂಡಿಗಳು ಕೊಚ್ಚಿಕೊಂಡು ಹೋಗಿದೆ. ಆದರೆ ಅದನ್ನು ಪುನರ್‌ ನಿರ್ಮಾಣ ಮಾಡುವ ಕೆಲಸ ನಗರಸಭೆ ಅಧಿಕಾರಿಗಳು ಮಾಡುತ್ತಿಲ್ಲ. ಮುಂದಿನ 10 ದಿನದಲ್ಲಿ ನಗರಸಭೆ ವ್ಯಾಪ್ತಿಯ ರಸ್ತೆ, ಚರಂಡಿ ರಿಪೇರಿ, ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆ, ಬೀದಿದೀಪ ವ್ಯವಸ್ಥೆ ಸರಿಪಡಿಸದಿದ್ದರೆ ತೀವ್ರ ಹೋರಾಟ ಕೈಗೆತ್ತಿಕೊಳ್ಳಬೇಕಾಗುತ್ತದೆ ಎಂದು ಎಸಚ್ಚರಿಕೆ ನೀಡಿದರು.

ನಗರಸಭೆ ಮಾಜಿ ಅಧ್ಯಕ್ಷೆ, ಹಾಲಿ ಸದಸ್ಯೆ ಎನ್‌.ಲಲಿತಮ್ಮ ಮಾತನಾಡಿ, ನಮ್ಮ ಭಾಗದಲ್ಲಿರುವ ಬೀದಿದೀಪ, ರಸ್ತೆ, ಚರಂಡಿ ಸಮಸ್ಯೆ ಸರಿಪಡಿಸುವಂತೆ ನಗರಸಭೆ ಅಧಿಕಾರಿಗಳನ್ನು ಒತ್ತಾಯಿಸಿದ್ದರೂ ಪ್ರಯೋಜನವಾಗಿಲ್ಲ. ನಗರಸಭೆ ಆಡಳಿತ ವಿಫಲಗೊಂಡಿದೆ ಎಂದು ದೂರಿದರು. ಕಾಂಗ್ರೆಸ್‌ ಪ್ರಮುಖರಾದ ಎಚ್‌.ಎಂ.ರವಿಕುಮಾರ್‌, ಗಣಪತಿ ಸುಳಗೋಡು, ಸುಧಾಕರ ಕುಗ್ವೆ, ಮಧುಮಾಲತಿ, ಪರಿಮಳ, ಗ್ರೇಸಿ ಡಯಾಸ್‌, ಗಣಪತಿ ಮಂಡಗಳಲೆ, ನಾರಾಯಣ ಅರಮನೆಕೇರಿ, ಕೃಷ್ಣಮೂರ್ತಿ, ಚಂದ್ರು, ನಾಗರಾಜ, ರವಿ ಇತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ